ನವದೆಹಲಿ: ಭಾನುವಾರ ಬೆಳಗ್ಗೆ ಪೂರ್ವ ದೆಹಲಿಯ ಕೃಷ್ಣ ನಗರ ಪ್ರದೇಶದ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯಲ್ಲಿ 13 ಜನರನ್ನು ರಕ್ಷಣೆ ಮಾಡಲಾಗಿದೆ.
ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಲ್ಲಿಂದ ಕರೆ ಬಂದಿತ್ತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದರು ಎಂದು ಅವರು ಹೇಳಿದ್ದಾರೆ.
ಘಟನೆ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.