<p><strong>ಕೊಚ್ಚಿ:</strong> ಕೇರಳದ ಕರಾವಳಿಯಲ್ಲಿ ಸರಕು ಸಾಗಣೆ ಹಡಗಿನಲ್ಲಿ ಕಾಣಿಸಿಕೊಂಡ ಬೆಂಕಿಯ ನಿಯಂತ್ರಣಕ್ಕೆ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸತತ ಎರಡನೇ ದಿನವಾದ ಮಂಗಳವಾರವೂ ಪ್ರಯತ್ನ ನಡೆಸಿದ್ದಾರೆ.</p>.<p>ಸಿಂಗಪುರ ಧ್ವಜ ಹೊಂದಿದ್ದ ‘ಎಂವಿ ವಾನ್ ಹೈ 503’ ಹಡಗಿನಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿತ್ತು. ಹಡಗಿನಲ್ಲಿರುವ ಕಂಟೇನರ್ಗಳು ಹೊತ್ತಿ ಉರಿದಿವೆ. ಮಂಗಳವಾರ ಕೂಡಾ ಬೆಂಕಿ ಮುಂದುವರಿದಿದ್ದು, ಕಂಟೇನರ್ಗಳಿಂದ ಸ್ಫೋಟದ ಸದ್ದು ಕೇಳಿದೆ ಎಂದು ಕರಾವಳಿ ಕಾವಲು ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಹಡಗಿನ ಮುಂಭಾಗದಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆಯಾದರೂ, ಮಧ್ಯ ಭಾಗದಲ್ಲಿ ಬೆಂಕಿಯ ಜ್ವಾಲೆಗಳು ಮತ್ತು ದಟ್ಟ ಹೊಗೆ ಏಳುತ್ತಲೇ ಇದೆ. ಸಾಲಾಗಿ ಜೋಡಿಸಿಟ್ಟಿದ್ದ ಕಂಟೇನರ್ಗಳು ಬೆಂಕಿಯ ಕಾರಣ ಉರುಳಿ ಬಿದ್ದಿವೆ. </p>.<p>ಬೆಂಕಿ ಇಡೀ ಹಡಗು ವ್ಯಾಪಿಸುವುದನ್ನು ತಡೆಯಲು ಕರಾವಳಿ ಕಾವಲು ಪಡೆಯ ಸಿಬ್ಬಂದಿ, ‘ಸಮುದ್ರ ಪ್ರಹರಿ’ ಮತ್ತು ‘ಸಚೇತ್’ ಹಡಗುಗಳ ನೆರವಿನೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಲು ಇನ್ನಷ್ಟು ಸಿಬ್ಬಂದಿಯನ್ನು ಹೊತ್ತ ಸಮರ್ಥ್ ನೌಕೆಯು ಕೊಚ್ಚಿಯಿಂದ ಪ್ರಯಾಣ ಬೆಳೆಸಿದೆ.</p>.<p>ಹಡಗಿನಲ್ಲಿದ್ದ 18 ಸಿಬ್ಬಂದಿಯನ್ನು ಐಎನ್ಎಸ್ ಸೂರತ್ ಹಡಗಿನಲ್ಲಿ ಸೋಮವಾರ ರಾತ್ರಿ ಮಂಗಳೂರಿಗೆ ಕರೆತರಲಾಗಿತ್ತು. ಗಾಯಗೊಂಡಿದ್ದ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಡಗಿನಲ್ಲಿದ್ದ ನಾಲ್ವರು ಸಿಬ್ಬಂದಿ ನಾಪತ್ತೆಯಾಗಿದ್ದಾರೆ.</p>.<p>ಕಣ್ಣೂರು ಜಿಲ್ಲೆಯ ಅಳಿಕ್ಕಲ್ ತೀರದಿಂದ 44 ನಾಟಿಕಲ್ ಮೈಲು ದೂರದಲ್ಲಿ ಸೋಮವಾರ ಬೆಳಿಗ್ಗೆ ಕಂಟೇನರ್ ಸ್ಫೋಟಗೊಂಡು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಕೇರಳದ ಕರಾವಳಿಯಲ್ಲಿ ಸರಕು ಸಾಗಣೆ ಹಡಗಿನಲ್ಲಿ ಕಾಣಿಸಿಕೊಂಡ ಬೆಂಕಿಯ ನಿಯಂತ್ರಣಕ್ಕೆ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸತತ ಎರಡನೇ ದಿನವಾದ ಮಂಗಳವಾರವೂ ಪ್ರಯತ್ನ ನಡೆಸಿದ್ದಾರೆ.</p>.<p>ಸಿಂಗಪುರ ಧ್ವಜ ಹೊಂದಿದ್ದ ‘ಎಂವಿ ವಾನ್ ಹೈ 503’ ಹಡಗಿನಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿತ್ತು. ಹಡಗಿನಲ್ಲಿರುವ ಕಂಟೇನರ್ಗಳು ಹೊತ್ತಿ ಉರಿದಿವೆ. ಮಂಗಳವಾರ ಕೂಡಾ ಬೆಂಕಿ ಮುಂದುವರಿದಿದ್ದು, ಕಂಟೇನರ್ಗಳಿಂದ ಸ್ಫೋಟದ ಸದ್ದು ಕೇಳಿದೆ ಎಂದು ಕರಾವಳಿ ಕಾವಲು ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಹಡಗಿನ ಮುಂಭಾಗದಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆಯಾದರೂ, ಮಧ್ಯ ಭಾಗದಲ್ಲಿ ಬೆಂಕಿಯ ಜ್ವಾಲೆಗಳು ಮತ್ತು ದಟ್ಟ ಹೊಗೆ ಏಳುತ್ತಲೇ ಇದೆ. ಸಾಲಾಗಿ ಜೋಡಿಸಿಟ್ಟಿದ್ದ ಕಂಟೇನರ್ಗಳು ಬೆಂಕಿಯ ಕಾರಣ ಉರುಳಿ ಬಿದ್ದಿವೆ. </p>.<p>ಬೆಂಕಿ ಇಡೀ ಹಡಗು ವ್ಯಾಪಿಸುವುದನ್ನು ತಡೆಯಲು ಕರಾವಳಿ ಕಾವಲು ಪಡೆಯ ಸಿಬ್ಬಂದಿ, ‘ಸಮುದ್ರ ಪ್ರಹರಿ’ ಮತ್ತು ‘ಸಚೇತ್’ ಹಡಗುಗಳ ನೆರವಿನೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಲು ಇನ್ನಷ್ಟು ಸಿಬ್ಬಂದಿಯನ್ನು ಹೊತ್ತ ಸಮರ್ಥ್ ನೌಕೆಯು ಕೊಚ್ಚಿಯಿಂದ ಪ್ರಯಾಣ ಬೆಳೆಸಿದೆ.</p>.<p>ಹಡಗಿನಲ್ಲಿದ್ದ 18 ಸಿಬ್ಬಂದಿಯನ್ನು ಐಎನ್ಎಸ್ ಸೂರತ್ ಹಡಗಿನಲ್ಲಿ ಸೋಮವಾರ ರಾತ್ರಿ ಮಂಗಳೂರಿಗೆ ಕರೆತರಲಾಗಿತ್ತು. ಗಾಯಗೊಂಡಿದ್ದ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಡಗಿನಲ್ಲಿದ್ದ ನಾಲ್ವರು ಸಿಬ್ಬಂದಿ ನಾಪತ್ತೆಯಾಗಿದ್ದಾರೆ.</p>.<p>ಕಣ್ಣೂರು ಜಿಲ್ಲೆಯ ಅಳಿಕ್ಕಲ್ ತೀರದಿಂದ 44 ನಾಟಿಕಲ್ ಮೈಲು ದೂರದಲ್ಲಿ ಸೋಮವಾರ ಬೆಳಿಗ್ಗೆ ಕಂಟೇನರ್ ಸ್ಫೋಟಗೊಂಡು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>