<p><strong>ಜಲಗಾಂವ್ (ಮಹಾರಾಷ್ಟ್ರ):</strong> ‘ಲಖನೌ–ಮುಂಬೈ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನ ಕೋಚ್ವೊಂದರಲ್ಲಿ ಬೆಂಕಿ ಬಿದ್ದಿದೆ ಎಂದು ಚಹಾ ಮಾರಾಟಗಾರನೊಬ್ಬ ಹಬ್ಬಿಸಿದ ವದಂತಿಯೇ ಅಪಘಾತಕ್ಕೆ ಕಾರಣ’ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಹಾ ಮಾರಾಟಗಾರನೊಬ್ಬ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೂಗಿದ್ದಾನೆ. ಇದನ್ನು ಕೇಳಿಸಿಕೊಂಡ ಉತ್ತರ ಪ್ರದೇಶದ ಇಬ್ಬರು ಪ್ರಯಾಣಿಕರು ಇತರರಿಗೆ ವದಂತಿ ಹಬ್ಬಿಸಿದ್ದಾರೆ. ಇದರಿಂದ ಗಾಬರಿಗೊಂಡು ಪ್ರಯಾಣಿಕರು ಎರಡೂ ಬದಿಯಿಂದ ಪಕ್ಕದ ಹಳಿಗಳಿಗೆ ಜಿಗಿದಿದ್ದಾರೆ’ ಎಂದು ತಿಳಿಸಿದ್ದಾರೆ. </p><p>‘ರೈಲು ವೇಗವಾಗಿ ಚಲಿಸುತ್ತಿದ್ದಂತೆ ಪ್ರಯಾಣಿಕರೊಬ್ಬರು ಚೈನ್ ಎಳೆದಿದ್ದಾರೆ. ಇದರಿಂದಾಗಿ ರೈಲು ನಿಂತ ಕೂಡಲೇ ಜನರು ಏಕಾಏಕಿ ಕೆಳಗೆ ಇಳಿದಿದ್ದಾರೆ. ಇದೇ ವೇಳೆಗೆ ಮತ್ತೊಂದು ಹಳಿಯಲ್ಲಿ ಬೆಂಗಳೂರಿನಿಂದ ದೆಹಲಿಗೆ ಸಾಗುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲಿಗೆ ಸಿಕ್ಕಿ 13 ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ 10 ಜನರ ಗುರುತು ಪತ್ತೆಯಾಗಿದೆ. ವದಂತಿ ಹರಡಿದ ಇಬ್ಬರು ಪ್ರಯಾಣಿಕರೂ ಘಟನೆಯಲ್ಲಿ ಗಾಯಗೊಂಡಿದ್ದಾರೆ’ ಎಂದು ಅವರು ವಿವರಿಸಿದ್ದಾರೆ.</p><p>ಘಟನಾ ಸ್ಥಳದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಅಲ್ಲಲ್ಲಿ ಮೃತದೇಹಗಳು ಬಿದ್ದಿರುವ, ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿರುವ ದೃಶ್ಯಗಳು ವಿಡಿಯೊಗಳಲ್ಲಿವೆ. ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಎರಡೂ ರೈಲುಗಳು ತಮ್ಮ ಸಂಚಾರವನ್ನು ಪುನರಾರಂಭಿಸಿದವು ಎಂದು ವರದಿಯಾಗಿದೆ.</p>.ರೈಲಿನಲ್ಲಿ ಬೆಂಕಿ ವದಂತಿ: ಇಳಿದು ಪಕ್ಕದ ಹಳಿಗೆ ಹೋದವರ ಮೇಲೆ ಹರಿದ ಎಕ್ಸ್ಪ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಲಗಾಂವ್ (ಮಹಾರಾಷ್ಟ್ರ):</strong> ‘ಲಖನೌ–ಮುಂಬೈ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನ ಕೋಚ್ವೊಂದರಲ್ಲಿ ಬೆಂಕಿ ಬಿದ್ದಿದೆ ಎಂದು ಚಹಾ ಮಾರಾಟಗಾರನೊಬ್ಬ ಹಬ್ಬಿಸಿದ ವದಂತಿಯೇ ಅಪಘಾತಕ್ಕೆ ಕಾರಣ’ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಹಾ ಮಾರಾಟಗಾರನೊಬ್ಬ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೂಗಿದ್ದಾನೆ. ಇದನ್ನು ಕೇಳಿಸಿಕೊಂಡ ಉತ್ತರ ಪ್ರದೇಶದ ಇಬ್ಬರು ಪ್ರಯಾಣಿಕರು ಇತರರಿಗೆ ವದಂತಿ ಹಬ್ಬಿಸಿದ್ದಾರೆ. ಇದರಿಂದ ಗಾಬರಿಗೊಂಡು ಪ್ರಯಾಣಿಕರು ಎರಡೂ ಬದಿಯಿಂದ ಪಕ್ಕದ ಹಳಿಗಳಿಗೆ ಜಿಗಿದಿದ್ದಾರೆ’ ಎಂದು ತಿಳಿಸಿದ್ದಾರೆ. </p><p>‘ರೈಲು ವೇಗವಾಗಿ ಚಲಿಸುತ್ತಿದ್ದಂತೆ ಪ್ರಯಾಣಿಕರೊಬ್ಬರು ಚೈನ್ ಎಳೆದಿದ್ದಾರೆ. ಇದರಿಂದಾಗಿ ರೈಲು ನಿಂತ ಕೂಡಲೇ ಜನರು ಏಕಾಏಕಿ ಕೆಳಗೆ ಇಳಿದಿದ್ದಾರೆ. ಇದೇ ವೇಳೆಗೆ ಮತ್ತೊಂದು ಹಳಿಯಲ್ಲಿ ಬೆಂಗಳೂರಿನಿಂದ ದೆಹಲಿಗೆ ಸಾಗುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲಿಗೆ ಸಿಕ್ಕಿ 13 ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ 10 ಜನರ ಗುರುತು ಪತ್ತೆಯಾಗಿದೆ. ವದಂತಿ ಹರಡಿದ ಇಬ್ಬರು ಪ್ರಯಾಣಿಕರೂ ಘಟನೆಯಲ್ಲಿ ಗಾಯಗೊಂಡಿದ್ದಾರೆ’ ಎಂದು ಅವರು ವಿವರಿಸಿದ್ದಾರೆ.</p><p>ಘಟನಾ ಸ್ಥಳದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಅಲ್ಲಲ್ಲಿ ಮೃತದೇಹಗಳು ಬಿದ್ದಿರುವ, ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿರುವ ದೃಶ್ಯಗಳು ವಿಡಿಯೊಗಳಲ್ಲಿವೆ. ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಎರಡೂ ರೈಲುಗಳು ತಮ್ಮ ಸಂಚಾರವನ್ನು ಪುನರಾರಂಭಿಸಿದವು ಎಂದು ವರದಿಯಾಗಿದೆ.</p>.ರೈಲಿನಲ್ಲಿ ಬೆಂಕಿ ವದಂತಿ: ಇಳಿದು ಪಕ್ಕದ ಹಳಿಗೆ ಹೋದವರ ಮೇಲೆ ಹರಿದ ಎಕ್ಸ್ಪ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>