<p><strong>ಭೋಪಾಲ್:</strong> ಇಲ್ಲಿನ ಕಮಲಾ ನೆಹರೂ ಆಸ್ಪತ್ರೆಯ ‘ನವಜಾತ ಶಿಶುಗಳ ವಿಶೇಷ ನಿಗಾ ಘಟಕ’ದಲ್ಲಿ (ಎಸ್ಎನ್ಸಿಯು) ಸೋಮವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿ ಕನಿಷ್ಠ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ.</p>.<p>ಅಗ್ನಿಶಾಮಕ ದಳದವರು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಬಗ್ಗೆ ಮಧ್ಯ ಪ್ರದೇಶ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.</p>.<p>ವಾರ್ಡ್ ಒಳಗಿನ ಪರಿಸ್ಥಿತಿ ಭಯಾನಕವಾಗಿತ್ತು. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ.</p>.<p>ಆಸ್ಪತ್ರೆಯ ತೀವ್ರ ನಿಗಾ ಘಟಕ ಇರುವ ಮೂರನೇ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/heavy-rain-in-tamil-nadu-pondicherry-882266.html" itemprop="url">ಮಳೆಗೆ ನಲುಗಿದ ತಮಿಳುನಾಡು, ಪುದುಚೇರಿ: ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರ ಸಾವು</a></p>.<p>‘ಮಾಹಿತಿ ದೊರೆತ ತಕ್ಷಣವೇ ಇತರರ ಜತೆಗೂಡಿ ಸ್ಥಳಕ್ಕೆ ಧಾವಿಸಿದ್ದೇವೆ. ವಾರ್ಡ್ ಒಳಗಡೆ ತುಂಬಾ ಕತ್ತಲು ಇತ್ತು. ಮಕ್ಕಳನ್ನು ತಕ್ಷಣವೇ ಸಮೀಪದ ಇತರ ವಾರ್ಡ್ಗಳಿಗೆ ಸ್ಥಳಾಂತರಿಸಲಾಗಿತ್ತು’ ಎಂದೂ ಸಚಿವರು ತಿಳಿಸಿದ್ದಾರೆ.</p>.<p>ಘಟನೆ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬದವರಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.</p>.<p>ರಾತ್ರಿ ಸುಮಾರು 9ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ದಳದ 10 ವಾಹನಗಳು ಸ್ಥಳಕ್ಕೆ ಧಾವಿಸಿದ್ದವು ಎಂದು ಫತೇಗಡ ಅಗ್ನಿಶಾಮಕ ಠಾಣೆಯ ಉಸ್ತುವಾರಿ ಜುಬೇರ್ ಖಾನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಇಲ್ಲಿನ ಕಮಲಾ ನೆಹರೂ ಆಸ್ಪತ್ರೆಯ ‘ನವಜಾತ ಶಿಶುಗಳ ವಿಶೇಷ ನಿಗಾ ಘಟಕ’ದಲ್ಲಿ (ಎಸ್ಎನ್ಸಿಯು) ಸೋಮವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿ ಕನಿಷ್ಠ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ.</p>.<p>ಅಗ್ನಿಶಾಮಕ ದಳದವರು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಬಗ್ಗೆ ಮಧ್ಯ ಪ್ರದೇಶ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.</p>.<p>ವಾರ್ಡ್ ಒಳಗಿನ ಪರಿಸ್ಥಿತಿ ಭಯಾನಕವಾಗಿತ್ತು. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ.</p>.<p>ಆಸ್ಪತ್ರೆಯ ತೀವ್ರ ನಿಗಾ ಘಟಕ ಇರುವ ಮೂರನೇ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/heavy-rain-in-tamil-nadu-pondicherry-882266.html" itemprop="url">ಮಳೆಗೆ ನಲುಗಿದ ತಮಿಳುನಾಡು, ಪುದುಚೇರಿ: ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರ ಸಾವು</a></p>.<p>‘ಮಾಹಿತಿ ದೊರೆತ ತಕ್ಷಣವೇ ಇತರರ ಜತೆಗೂಡಿ ಸ್ಥಳಕ್ಕೆ ಧಾವಿಸಿದ್ದೇವೆ. ವಾರ್ಡ್ ಒಳಗಡೆ ತುಂಬಾ ಕತ್ತಲು ಇತ್ತು. ಮಕ್ಕಳನ್ನು ತಕ್ಷಣವೇ ಸಮೀಪದ ಇತರ ವಾರ್ಡ್ಗಳಿಗೆ ಸ್ಥಳಾಂತರಿಸಲಾಗಿತ್ತು’ ಎಂದೂ ಸಚಿವರು ತಿಳಿಸಿದ್ದಾರೆ.</p>.<p>ಘಟನೆ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬದವರಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.</p>.<p>ರಾತ್ರಿ ಸುಮಾರು 9ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ದಳದ 10 ವಾಹನಗಳು ಸ್ಥಳಕ್ಕೆ ಧಾವಿಸಿದ್ದವು ಎಂದು ಫತೇಗಡ ಅಗ್ನಿಶಾಮಕ ಠಾಣೆಯ ಉಸ್ತುವಾರಿ ಜುಬೇರ್ ಖಾನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>