<p><strong>ನವದೆಹಲಿ:</strong> ದೆಹಲಿಯ ಉದ್ಯೋಗ ನಗರ ಪ್ರದೇಶ ಪೀರಾಗರಿ ಬ್ಯಾಟರಿ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಕ್ಕೆ ತೆರಳಿದ್ದ ಅಗ್ನಿಶಾಮಕ ದಳದ ಒಬ್ಬ ಸಿಬ್ಬಂದಿ ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ. ಅದರಲ್ಲಿ ಅಗ್ನಿಶಾಮಕ ದಳದ 13ಕ್ಕೂ ಹೆಚ್ಚು ಸಿಬ್ಬಂದಿ ಸೇರಿದ್ದಾರೆ.</p>.<p>‘ಬೆಂಕಿ ಅವಘಡದ ಮಾಹಿತಿ ಮುಂಜಾನೆ 4.23ಕ್ಕೆ ಬಂದ ಕೂಡಲೇ ಅಗತ್ಯ ಸಿಬ್ಬಂದಿಯನ್ನು ಬೆಂಕಿ ನಂದಿಸಲು ನಿಯೋಜಿಸಲಾಗಿತ್ತು.ಎರಡು ಮಹಡಿಯ ಕಟ್ಟಡದಲ್ಲಿ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾಗ ಕಟ್ಟಡದ ಬಹುತೇಕ ಭಾಗ ಕುಸಿದಿದ್ದರಿಂದ ಕೆಲ ಸಿಬ್ಬಂದಿ ಅಲ್ಲಿಯೇ ಸಿಲುಕುವಂತಾಗಿತ್ತು’ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ದುರಂತದಲ್ಲಿ</p>.<p>ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಜನರನ್ನು ಬೆಂಕಿಯಿಂದ ರಕ್ಷಿಸುವ ವೇಳೆ ನಮ್ಮ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಉದ್ಯೋಗ ನಗರ ಪ್ರದೇಶ ಪೀರಾಗರಿ ಬ್ಯಾಟರಿ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಕ್ಕೆ ತೆರಳಿದ್ದ ಅಗ್ನಿಶಾಮಕ ದಳದ ಒಬ್ಬ ಸಿಬ್ಬಂದಿ ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ. ಅದರಲ್ಲಿ ಅಗ್ನಿಶಾಮಕ ದಳದ 13ಕ್ಕೂ ಹೆಚ್ಚು ಸಿಬ್ಬಂದಿ ಸೇರಿದ್ದಾರೆ.</p>.<p>‘ಬೆಂಕಿ ಅವಘಡದ ಮಾಹಿತಿ ಮುಂಜಾನೆ 4.23ಕ್ಕೆ ಬಂದ ಕೂಡಲೇ ಅಗತ್ಯ ಸಿಬ್ಬಂದಿಯನ್ನು ಬೆಂಕಿ ನಂದಿಸಲು ನಿಯೋಜಿಸಲಾಗಿತ್ತು.ಎರಡು ಮಹಡಿಯ ಕಟ್ಟಡದಲ್ಲಿ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾಗ ಕಟ್ಟಡದ ಬಹುತೇಕ ಭಾಗ ಕುಸಿದಿದ್ದರಿಂದ ಕೆಲ ಸಿಬ್ಬಂದಿ ಅಲ್ಲಿಯೇ ಸಿಲುಕುವಂತಾಗಿತ್ತು’ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ದುರಂತದಲ್ಲಿ</p>.<p>ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಜನರನ್ನು ಬೆಂಕಿಯಿಂದ ರಕ್ಷಿಸುವ ವೇಳೆ ನಮ್ಮ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>