<p><strong>ಲಖನೌ:</strong> ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಕಳೆದ 10 ದಿನಗಳಲ್ಲಿ ಶಂಕಿತ ಡೆಂಗಿ ಹಾಗೂ ವೈರಲ್ ಜ್ವರದಿಂದಾಗಿ ಮಕ್ಕಳು ಸೇರಿದಂತೆ 41 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.</p>.<p>ಇದರಿಂದಾಗಿ ಫಿರೋಜಾಬಾದ್ನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಮೃತಪಟ್ಟಿರುವುದು ಕಳವಳಕ್ಕೆ ಕಾರಣವಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/four-time-covid-infection-did-not-deter-positivity-of-this-kerala-doctor-to-continue-covid-care-863002.html" itemprop="url">ಕೇರಳದ ವೈದ್ಯನಿಗೆ 4 ಬಾರಿ ಕೋವಿಡ್ ಪಾಸಿಟಿವ್: ಈಗಲೂ ಕೋವಿಡ್ ವಾರ್ಡ್ನಲ್ಲೇ ಕೆಲಸ! </a></p>.<p>ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶ ಸರ್ಕಾರವು ಫಿರೋಜಾಬಾದ್ನ ವೈದ್ಯಾಧಿಕಾರಿಯನ್ನು ವರ್ಗಾವಣೆ ಮಾಡಿದೆ. ಅಲ್ಲದೆ ಡಾ. ದಿನೇಶ್ ಕುಮಾರ್ ಪ್ರೇಮಿ ಅವರನ್ನು ನೂತನ ವೈದ್ಯಾಧಿಕಾರಿಯಾಗಿ ನೇಮಕ ಮಾಡಲಾಗಿದೆ.</p>.<p>ಪರಿಸ್ಥಿತಿಯ ಅವಲೋಕನಕ್ಕಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಂಡ ಫಿರೋಜಾಬಾದ್ಗೆ ತಲುಪಿದೆ.</p>.<p>ಆಗಸ್ಟ್ 22-23ರಿಂದ ಶಂಕಿತ ಡೆಂಗಿಯಿಂದಾಗಿ ಜಿಲ್ಲೆಯಲ್ಲಿ 44 ಮಂದಿ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಮನೀಷ್ ಅಸಿಜಾ ಹೇಳಿದ್ದರು. ಆದರೆ ಇದುವರೆಗೆ 56 ಮಂದಿ ಮೃತಪಟ್ಟಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿಕೆ ನೀಡಿದ್ದರು.</p>.<p>ಸೋಮವಾರದಂದು ಡೆಂಗಿ ರೋಗಿಗಳನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಗ್ಯ ವಿಚಾರಿಸಿದ್ದರು. ಅಲ್ಲದೆ ಸೂಕ್ತ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ತಂಡಕ್ಕೆ ಸೂಚನೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಕಳೆದ 10 ದಿನಗಳಲ್ಲಿ ಶಂಕಿತ ಡೆಂಗಿ ಹಾಗೂ ವೈರಲ್ ಜ್ವರದಿಂದಾಗಿ ಮಕ್ಕಳು ಸೇರಿದಂತೆ 41 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.</p>.<p>ಇದರಿಂದಾಗಿ ಫಿರೋಜಾಬಾದ್ನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಮೃತಪಟ್ಟಿರುವುದು ಕಳವಳಕ್ಕೆ ಕಾರಣವಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/four-time-covid-infection-did-not-deter-positivity-of-this-kerala-doctor-to-continue-covid-care-863002.html" itemprop="url">ಕೇರಳದ ವೈದ್ಯನಿಗೆ 4 ಬಾರಿ ಕೋವಿಡ್ ಪಾಸಿಟಿವ್: ಈಗಲೂ ಕೋವಿಡ್ ವಾರ್ಡ್ನಲ್ಲೇ ಕೆಲಸ! </a></p>.<p>ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶ ಸರ್ಕಾರವು ಫಿರೋಜಾಬಾದ್ನ ವೈದ್ಯಾಧಿಕಾರಿಯನ್ನು ವರ್ಗಾವಣೆ ಮಾಡಿದೆ. ಅಲ್ಲದೆ ಡಾ. ದಿನೇಶ್ ಕುಮಾರ್ ಪ್ರೇಮಿ ಅವರನ್ನು ನೂತನ ವೈದ್ಯಾಧಿಕಾರಿಯಾಗಿ ನೇಮಕ ಮಾಡಲಾಗಿದೆ.</p>.<p>ಪರಿಸ್ಥಿತಿಯ ಅವಲೋಕನಕ್ಕಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಂಡ ಫಿರೋಜಾಬಾದ್ಗೆ ತಲುಪಿದೆ.</p>.<p>ಆಗಸ್ಟ್ 22-23ರಿಂದ ಶಂಕಿತ ಡೆಂಗಿಯಿಂದಾಗಿ ಜಿಲ್ಲೆಯಲ್ಲಿ 44 ಮಂದಿ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಮನೀಷ್ ಅಸಿಜಾ ಹೇಳಿದ್ದರು. ಆದರೆ ಇದುವರೆಗೆ 56 ಮಂದಿ ಮೃತಪಟ್ಟಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿಕೆ ನೀಡಿದ್ದರು.</p>.<p>ಸೋಮವಾರದಂದು ಡೆಂಗಿ ರೋಗಿಗಳನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಗ್ಯ ವಿಚಾರಿಸಿದ್ದರು. ಅಲ್ಲದೆ ಸೂಕ್ತ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ತಂಡಕ್ಕೆ ಸೂಚನೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>