<p><strong>ನವದೆಹಲಿ: ರ</strong>ಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್ಡಿಒ) ಕೋವಿಡ್ ಸೋಂಕಿನ ವಿರುದ್ಧ ಅಭಿವೃದ್ಧಿಪಡಿಸಿರುವ 2–ಡಯಾಕ್ಸಿ–ಡಿ–ಗ್ಲೂಕೋಸ್ (2–ಡಿಜಿ) ಔಷಧದ ಮೊದಲ ಕಂತನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್ ಅವರು ಸೋಮವಾರ ಇಲ್ಲಿ ಬಿಡುಗಡೆ ಮಾಡಿದರು.</p>.<p>ಈ ಔಷಧದ ತುರ್ತು ಬಳಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಈ ತಿಂಗಳ ಆರಂಭದಲ್ಲೇ ಅನುಮೋದನೆ ನೀಡಿದ್ದರು.</p>.<p>ಕೋವಿಡ್ ರೋಗಿಗಳ ಚಿಕಿತ್ಸೆಯಲ್ಲಿ ಈ ಔಷಧ ಹೊಸ ಭರವಸೆ ಮೂಡಿಸಿದೆ. ರಾಷ್ಟ್ರದ ವೈಜ್ಞಾನಿಕ ಸಾಮರ್ಥ್ಯಕ್ಕೆ ಇದು ಬಹು ದೊಡ್ಡ ಉದಾಹರಣೆ ಎಂದು ರಾಜನಾಥ್ ಸಿಂಗ್ ಅವರು ಡಿಆರ್ಡಿಒ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.</p>.<p>‘ನಾವೀಗ ನಿರಾಳವಾಗುವ ಅಗತ್ಯ ಇಲ್ಲ. ಏಕೆಂದರೆ ಕೊರೊನಾ ಎರಡನೇ ಅಲೆ ಬಂದಿದೆ. ಇದರ ಬಗ್ಗೆ ಏನನ್ನೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಸಂಪೂರ್ಣ ಎಚ್ಚರಿಕೆಯಿಂದ ನಾವು ಕ್ರಮಗಳನ್ನು ಕೈಗೊಳ್ಳಬೇಕು‘ ಎಂದರು.</p>.<p>ಆಕ್ಸಿಜನ್ ಪೂರೈಕೆಯಾಗಲೀ ಅಥವಾ ಐಸಿಯು ಹಾಸಿಗೆ ಲಭ್ಯತೆಯಾಗಲೀ ಎಲ್ಲವನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿವೃತ್ತ ವೈದ್ಯರು ಮತ್ತೆ ಕೆಲಸಕ್ಕೆ ಮರಳಿರುವುದು ಸಂತಸದ ವಿಚಾರ. ಇದು ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬಲ್ಲದು ಎಂದರು.</p>.<p>ಹೈದರಾಬಾದ್ನ ಡಾ. ರೆಡ್ಡೀಸ್ ಲ್ಯಾಬ್ನ ಸಹಯೋಗದಲ್ಲಿ ಡಿಆರ್ಡಿಒದ ಇನ್ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಅಂಡ್ ಅಲೈಡ್ ಸೈನ್ಸಸ್ (ಐಎನ್ಎಂಎಎಸ್) ಪ್ರಯೋಗಾಲಯದಲ್ಲಿ 2–ಡಿಜಿ ಔಷಧವನ್ನು ಅಭಿವೃದ್ಧಿಪಡಿಸಲಾಗಿದೆ.</p>.<p>ಸಣ್ಣ ಪೊಟ್ಟಣದಲ್ಲಿ ಪುಡಿಯ ರೂಪದಲ್ಲಿರುವ ‘2–ಡಿಜಿ’ ಔಷಧವನ್ನು ನೀರಿನಲ್ಲಿ ಬೆರೆಸಿ ಸೇವಿಸಬೇಕು ಎಂದು ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ರ</strong>ಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್ಡಿಒ) ಕೋವಿಡ್ ಸೋಂಕಿನ ವಿರುದ್ಧ ಅಭಿವೃದ್ಧಿಪಡಿಸಿರುವ 2–ಡಯಾಕ್ಸಿ–ಡಿ–ಗ್ಲೂಕೋಸ್ (2–ಡಿಜಿ) ಔಷಧದ ಮೊದಲ ಕಂತನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್ ಅವರು ಸೋಮವಾರ ಇಲ್ಲಿ ಬಿಡುಗಡೆ ಮಾಡಿದರು.</p>.<p>ಈ ಔಷಧದ ತುರ್ತು ಬಳಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಈ ತಿಂಗಳ ಆರಂಭದಲ್ಲೇ ಅನುಮೋದನೆ ನೀಡಿದ್ದರು.</p>.<p>ಕೋವಿಡ್ ರೋಗಿಗಳ ಚಿಕಿತ್ಸೆಯಲ್ಲಿ ಈ ಔಷಧ ಹೊಸ ಭರವಸೆ ಮೂಡಿಸಿದೆ. ರಾಷ್ಟ್ರದ ವೈಜ್ಞಾನಿಕ ಸಾಮರ್ಥ್ಯಕ್ಕೆ ಇದು ಬಹು ದೊಡ್ಡ ಉದಾಹರಣೆ ಎಂದು ರಾಜನಾಥ್ ಸಿಂಗ್ ಅವರು ಡಿಆರ್ಡಿಒ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.</p>.<p>‘ನಾವೀಗ ನಿರಾಳವಾಗುವ ಅಗತ್ಯ ಇಲ್ಲ. ಏಕೆಂದರೆ ಕೊರೊನಾ ಎರಡನೇ ಅಲೆ ಬಂದಿದೆ. ಇದರ ಬಗ್ಗೆ ಏನನ್ನೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಸಂಪೂರ್ಣ ಎಚ್ಚರಿಕೆಯಿಂದ ನಾವು ಕ್ರಮಗಳನ್ನು ಕೈಗೊಳ್ಳಬೇಕು‘ ಎಂದರು.</p>.<p>ಆಕ್ಸಿಜನ್ ಪೂರೈಕೆಯಾಗಲೀ ಅಥವಾ ಐಸಿಯು ಹಾಸಿಗೆ ಲಭ್ಯತೆಯಾಗಲೀ ಎಲ್ಲವನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿವೃತ್ತ ವೈದ್ಯರು ಮತ್ತೆ ಕೆಲಸಕ್ಕೆ ಮರಳಿರುವುದು ಸಂತಸದ ವಿಚಾರ. ಇದು ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬಲ್ಲದು ಎಂದರು.</p>.<p>ಹೈದರಾಬಾದ್ನ ಡಾ. ರೆಡ್ಡೀಸ್ ಲ್ಯಾಬ್ನ ಸಹಯೋಗದಲ್ಲಿ ಡಿಆರ್ಡಿಒದ ಇನ್ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಅಂಡ್ ಅಲೈಡ್ ಸೈನ್ಸಸ್ (ಐಎನ್ಎಂಎಎಸ್) ಪ್ರಯೋಗಾಲಯದಲ್ಲಿ 2–ಡಿಜಿ ಔಷಧವನ್ನು ಅಭಿವೃದ್ಧಿಪಡಿಸಲಾಗಿದೆ.</p>.<p>ಸಣ್ಣ ಪೊಟ್ಟಣದಲ್ಲಿ ಪುಡಿಯ ರೂಪದಲ್ಲಿರುವ ‘2–ಡಿಜಿ’ ಔಷಧವನ್ನು ನೀರಿನಲ್ಲಿ ಬೆರೆಸಿ ಸೇವಿಸಬೇಕು ಎಂದು ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>