<p><strong>ಗ್ಯಾಂಗ್ಟಕ್:</strong> ಕೈಲಾಸ– ಮಾನಸ ಸರೋವರದ ಯಾತ್ರೆ ಕೈಗೊಂಡಿರುವ 36 ಯಾತ್ರಾರ್ಥಿಗಳ ಮೊದಲ ತಂಡವು ಸಿಕ್ಕಿಂನ ಗ್ಯಾಂಗ್ಟಕ್ಗೆ ತಲುಪಿದೆ. 6 ವರ್ಷಗಳ ಬಳಿಕ ನಡೆಯುತ್ತಿರುವ ಮೊದಲ ಯಾತ್ರೆ ಇದಾಗಿದ್ದು, ಜೂ.20ರಂದು ಯಾತ್ರಾರ್ಥಿಗಳು ಭಾರತ–ಚೀನಾ ಗಡಿ ದಾಟಲಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ಯಾತ್ರಾರ್ಥಿಗಳ ಜತೆಗೆ ವಿದೇಶಾಂಗ ಸಚಿವಾಲಯದ ಇಬ್ಬರು ಅಧಿಕಾರಿಗಳೂ ಇದ್ದಾರೆ. ಅವರೆಲ್ಲರೂ ಭಾನುವಾರವೇ ಗ್ಯಾಂಗ್ಟಕ್ ತಲುಪಿದ್ದು, ಇಲ್ಲಿಂದ 27 ಕಿ.ಮೀ. ದೂರದಲ್ಲಿರುವ 17 ಮೈಲ್ ಪ್ರದೇಶಕ್ಕೆ ಸೋಮವಾರ ಪ್ರಯಾಣ ಬೆಳೆಸಿದ್ದಾರೆಂದೂ ಅಧಿಕಾರಿಗಳು ಹೇಳಿದ್ದಾರೆ.</p>.<p class="title">2020ರಲ್ಲಿ ಭಾರತ–ಚೀನಾ ನಡುವಿನ ಗಡಿ ಬಿಕ್ಕಟ್ಟಿನಿಂದಾಗಿ ಯಾತ್ರೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಉಭಯ ರಾಷ್ಟ್ರಗಳ ಮಾತುಕತೆಯ ಬಳಿಕ ಯಾತ್ರೆ ಮತ್ತೆ ಶುರುವಾಗಿದೆ. ಈ ಬಾರಿ 750 ಮಂದಿ ಯಾತ್ರೆಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ 500 ಮಂದಿಯ 10 ತಂಡವು ಸಿಕ್ಕಿಂನ ನಾಥು ಲಾ ಪಾಸ್ ಮಾರ್ಗವಾಗಿ ಮಾನಸ ಸರೋವರ ತಲುಪಲಿದೆ. 250 ಮಂದಿಯು ಉತ್ತರಾಖಂಡದ ಲಿಪುಲೇಖ್ ಪಾಸ್ ಮಾರ್ಗವಾಗಿ ತೆರಳಲಿದ್ದಾರೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ಯಾಂಗ್ಟಕ್:</strong> ಕೈಲಾಸ– ಮಾನಸ ಸರೋವರದ ಯಾತ್ರೆ ಕೈಗೊಂಡಿರುವ 36 ಯಾತ್ರಾರ್ಥಿಗಳ ಮೊದಲ ತಂಡವು ಸಿಕ್ಕಿಂನ ಗ್ಯಾಂಗ್ಟಕ್ಗೆ ತಲುಪಿದೆ. 6 ವರ್ಷಗಳ ಬಳಿಕ ನಡೆಯುತ್ತಿರುವ ಮೊದಲ ಯಾತ್ರೆ ಇದಾಗಿದ್ದು, ಜೂ.20ರಂದು ಯಾತ್ರಾರ್ಥಿಗಳು ಭಾರತ–ಚೀನಾ ಗಡಿ ದಾಟಲಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>ಯಾತ್ರಾರ್ಥಿಗಳ ಜತೆಗೆ ವಿದೇಶಾಂಗ ಸಚಿವಾಲಯದ ಇಬ್ಬರು ಅಧಿಕಾರಿಗಳೂ ಇದ್ದಾರೆ. ಅವರೆಲ್ಲರೂ ಭಾನುವಾರವೇ ಗ್ಯಾಂಗ್ಟಕ್ ತಲುಪಿದ್ದು, ಇಲ್ಲಿಂದ 27 ಕಿ.ಮೀ. ದೂರದಲ್ಲಿರುವ 17 ಮೈಲ್ ಪ್ರದೇಶಕ್ಕೆ ಸೋಮವಾರ ಪ್ರಯಾಣ ಬೆಳೆಸಿದ್ದಾರೆಂದೂ ಅಧಿಕಾರಿಗಳು ಹೇಳಿದ್ದಾರೆ.</p>.<p class="title">2020ರಲ್ಲಿ ಭಾರತ–ಚೀನಾ ನಡುವಿನ ಗಡಿ ಬಿಕ್ಕಟ್ಟಿನಿಂದಾಗಿ ಯಾತ್ರೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಉಭಯ ರಾಷ್ಟ್ರಗಳ ಮಾತುಕತೆಯ ಬಳಿಕ ಯಾತ್ರೆ ಮತ್ತೆ ಶುರುವಾಗಿದೆ. ಈ ಬಾರಿ 750 ಮಂದಿ ಯಾತ್ರೆಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ 500 ಮಂದಿಯ 10 ತಂಡವು ಸಿಕ್ಕಿಂನ ನಾಥು ಲಾ ಪಾಸ್ ಮಾರ್ಗವಾಗಿ ಮಾನಸ ಸರೋವರ ತಲುಪಲಿದೆ. 250 ಮಂದಿಯು ಉತ್ತರಾಖಂಡದ ಲಿಪುಲೇಖ್ ಪಾಸ್ ಮಾರ್ಗವಾಗಿ ತೆರಳಲಿದ್ದಾರೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>