<p><strong>ನವದೆಹಲಿ</strong>: ದೇಶದ ಸಹಕಾರ ಕ್ಷೇತ್ರದ ಪ್ರತಿನಿಧಿಗಳನ್ನು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಭೇಟಿಯಾಗಲಿದ್ದಾರೆ. ಕೇಂದ್ರದಲ್ಲಿ ಹೊಸದಾಗಿ ಸಹಕಾರ ಸಚಿವಾಲಯ ಸೃಷ್ಟಿಯಾದ ಬಳಿಕ ನಡೆಯುತ್ತಿರುವ ಮಹತ್ವದ ಕಾರ್ಯಕ್ರಮ ಇದು. ಸಹಕಾರ ಕ್ಷೇತ್ರಕ್ಕೆ ಹೊಸ ಸಚಿವಾಲಯ ರಚನೆಯ ಬಗ್ಗೆ ಈ ಕ್ಷೇತ್ರದ ಧುರೀಣರು ಮತ್ತು ರಾಜಕೀಯ ಪಕ್ಷಗಳಲ್ಲಿ ಆತಂಕ ಮತ್ತು ಕಳವಳಗಳು ಇವೆ. ಅದನ್ನು ಹೋಗಲಾಡಿಸುವುದು ಈ ಸಭೆಯ ಉದ್ದೇಶ ಎಂದು ಹೇಳಲಾಗಿದೆ.</p>.<p>ಕೇಂದ್ರದಲ್ಲಿ ಸಹಕಾರ ಸಚಿವಾಲಯವನ್ನು ಇದೇ ಜುಲೈನಲ್ಲಿ ಆರಂಭಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರಿಗೆ ಈ ಸಚಿವಾಲಯದ ಹೊಣೆಯನ್ನೂ ವಹಿಸಲಾಗಿದೆ. ಸಹಕಾರ ಸಂಘಗಳ ಪ್ರತಿನಿಧಿಗಳು ಮತ್ತು ಮುಖಂಡರನ್ನು ಶಾ ಅವರು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ. ಆದರೆ, ಶನಿವಾರ ನಡೆಯುವ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ ವೈವಿಧ್ಯಮಯ ಹಿನ್ನೆಲೆಯ ಸಹಕಾರಿ ನಾಯಕರು ಭಾಗಿಯಾಗಲಿದ್ದಾರೆ.</p>.<p>ಹೊಸ ಸಚಿವಾಲಯಕ್ಕೆ ಸಂಬಂಧಿಸಿ ತಮ್ಮ ಯೋಜನೆ ಏನು, ಕ್ಷೇತ್ರಕ್ಕಾಗಿ ತಮ್ಮ ಮುನ್ನೋಟ ಏನು ಎಂಬುದನ್ನು ಶಾ ಅವರು ಸಭೆಯಲ್ಲಿ ಬಿಚ್ಚಿಡುವ ಸಾಧ್ಯತೆ ಇದೆ. ಸಹಕಾರ ಕ್ಷೇತ್ರದಿಂದ ರಾಜಕೀಯ ಶಕ್ತಿ ಪಡೆದುಕೊಂಡ ಹಲವು ನಾಯಕರು ದೇಶದಲ್ಲಿ ಇದ್ದಾರೆ. ಈ ಕ್ಷೇತ್ರವನ್ನು ಬಿಜೆಪಿ ಹಿಡಿತಕ್ಕೆ ತೆಗೆದುಕೊಳ್ಳುವುದಕ್ಕಾಗಿಯೇ ಹೊಸ ಸಚಿವಾಲಯ ಸೃಷ್ಟಿಸಲಾಗಿದೆ ಎಂಬ ಅನುಮಾನ ಈ ನಾಯಕರಲ್ಲಿ ಮೂಡಿದೆ. ಹೊಸ ಸಚಿವಾಲಯ ಸ್ಥಾಪನೆಯನ್ನು ಮುಕ್ತವಾಗಿ ಯಾರೂ ಸ್ವಾಗತಿಸದಿರಲು ಇದು ಕಾರಣವಾಗಿದೆ.</p>.<p>‘ಸಹಕಾರ ಕ್ಷೇತ್ರದ ಎಲ್ಲ ವಿಭಾಗಗಳ ಪ್ರತಿನಿಧಿಗಳೂ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮೀನುಗಾರಿಕೆ, ಹೈನುಗಾರಿಕೆ, ನೇಕಾರಿಕೆ, ಸಕ್ಕರೆ, ನಗರ ಸಹಕಾರ ಬ್ಯಾಂಕುಗಳು, ರಸಗೊಬ್ಬರ ಸಹಕಾರ ಸಂಘಗಳು ಎಲ್ಲದರ ಪ್ರತಿನಿಧಿಗಳೂ ಹಾಜರಾಗಲಿದ್ದಾರೆ’ ಎಂದು ಭಾರತ ರಾಷ್ಟ್ರೀಯ ಸಹಕಾರ ಒಕ್ಕೂಟದ ಅಧ್ಯಕ್ಷ ದಿಲೀಪ್ ಸಂಘಾನಿ ಹೇಳಿದ್ದಾರೆ.</p>.<p>‘ನೂತನ ಸಚಿವಾಲಯದ ಬಗ್ಗೆ ಆಕ್ಷೇಪ ಇರುವವರು, ಮುಂದೆಯೂ ಆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಸಚಿವಾಲಯವು ಈ ಬಗ್ಗೆ ಇರುವ ಸಂದೇಹಗಳನ್ನು ಪರಿಹರಿಸುತ್ತದೆ ಮತ್ತು ಸಹಕಾರ ಕ್ಷೇತ್ರಕ್ಕೆ ಸಕಾರಾತ್ಮಕವಾದ ಸಂದೇಶವನ್ನು ರವಾನಿಸುತ್ತದೆ’ ಎಂದು ಸಂಘಾನಿ ಹೇಳಿದ್ದಾರೆ. ನೂತನ ಸಚಿವಾಲಯದ ಬಗ್ಗೆ ವ್ಯಕ್ತವಾಗುತ್ತಿರುವ ಕಳವಳದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.</p>.<p>ಈ ಸಮಾವೇಶದ ವಿಷಯ ‘ಸಹಕಾರದಿಂದ ಸಮೃದ್ಧಿ'. ದೇಶದಲ್ಲಿ ಸಹಕಾರ ಚಳವಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಗ್ರಾಮ ಮಟ್ಟದಿಂದ, ರಾಷ್ಟ್ರಮಟ್ಟದವರೆಗಿನ ಸಹಕಾರ ಸಂಘಗಳ ನಾಯಕರು ಮತ್ತು ಪ್ರತಿನಿಧಿಗಳನ್ನು ಒಂದೆಡೆ ಸೇರಿಸಲಾಗುತ್ತಿದೆ. ಸಹಕಾರ ಕ್ಷೇತ್ರವನ್ನು ಬಲಪಡಿಸುವ ಮತ್ತು ಆ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಸುವ ಸಂಬಂಧ ತೆಗೆದುಕೊಳ್ಳಲಾಗುವ ಕ್ರಮಗಳ ಬಗ್ಗೆ ಸಚಿವರು ಈ ವಿಚಾರ ಸಂಕಿರಣದಲ್ಲಿ ಮಾಹಿತಿ ನೀಡಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಸಹಕಾರ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಸಚಿವಾಲಯವು ಪ್ರತ್ಯೇಕ ಆಡಳಿತ ವರ್ಗ, ಕಾನೂನು ಮತ್ತು ನೀತಿಯನ್ನು ರೂಪಿಸಲಿದೆ. ಬಹುರಾಜ್ಯ ಸಹಕಾರ ಸೊಸೈಟಿಗಳ ಅಭಿವೃದ್ಧಿಗೆ ಮತ್ತು ಅವುಗಳ ವ್ಯವಹಾರವನ್ನು ಸುಗಮಗೊಳಿಸುವ ಸಂಬಂಧ ಸಚಿವಾಲಯವು ಕ್ರಮ ತೆಗೆದುಕೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p class="Briefhead"><strong>ಕಾರ್ಯಕ್ರಮ ವಿವರ<br />*</strong>ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ<br /><strong>*</strong>ಸಹಕಾರ ಕ್ಷೇತ್ರದ ನಾಯಕರ ಒಂದು ದಿನದ ಸಮಾವೇಶ<br /><strong>*</strong>2,200 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ<br /><strong>*</strong>ಗ್ರಾಮ, ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರತಿನಿಧಿಗಳಿಗೆ ಅವಕಾಶ<br /><strong>*</strong>ವರ್ಚುವಲ್ ಮಾಧ್ಯಮದಲ್ಲಿ ಲಕ್ಷಾಂತರ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದ ಸಹಕಾರ ಕ್ಷೇತ್ರದ ಪ್ರತಿನಿಧಿಗಳನ್ನು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಭೇಟಿಯಾಗಲಿದ್ದಾರೆ. ಕೇಂದ್ರದಲ್ಲಿ ಹೊಸದಾಗಿ ಸಹಕಾರ ಸಚಿವಾಲಯ ಸೃಷ್ಟಿಯಾದ ಬಳಿಕ ನಡೆಯುತ್ತಿರುವ ಮಹತ್ವದ ಕಾರ್ಯಕ್ರಮ ಇದು. ಸಹಕಾರ ಕ್ಷೇತ್ರಕ್ಕೆ ಹೊಸ ಸಚಿವಾಲಯ ರಚನೆಯ ಬಗ್ಗೆ ಈ ಕ್ಷೇತ್ರದ ಧುರೀಣರು ಮತ್ತು ರಾಜಕೀಯ ಪಕ್ಷಗಳಲ್ಲಿ ಆತಂಕ ಮತ್ತು ಕಳವಳಗಳು ಇವೆ. ಅದನ್ನು ಹೋಗಲಾಡಿಸುವುದು ಈ ಸಭೆಯ ಉದ್ದೇಶ ಎಂದು ಹೇಳಲಾಗಿದೆ.</p>.<p>ಕೇಂದ್ರದಲ್ಲಿ ಸಹಕಾರ ಸಚಿವಾಲಯವನ್ನು ಇದೇ ಜುಲೈನಲ್ಲಿ ಆರಂಭಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರಿಗೆ ಈ ಸಚಿವಾಲಯದ ಹೊಣೆಯನ್ನೂ ವಹಿಸಲಾಗಿದೆ. ಸಹಕಾರ ಸಂಘಗಳ ಪ್ರತಿನಿಧಿಗಳು ಮತ್ತು ಮುಖಂಡರನ್ನು ಶಾ ಅವರು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ. ಆದರೆ, ಶನಿವಾರ ನಡೆಯುವ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ ವೈವಿಧ್ಯಮಯ ಹಿನ್ನೆಲೆಯ ಸಹಕಾರಿ ನಾಯಕರು ಭಾಗಿಯಾಗಲಿದ್ದಾರೆ.</p>.<p>ಹೊಸ ಸಚಿವಾಲಯಕ್ಕೆ ಸಂಬಂಧಿಸಿ ತಮ್ಮ ಯೋಜನೆ ಏನು, ಕ್ಷೇತ್ರಕ್ಕಾಗಿ ತಮ್ಮ ಮುನ್ನೋಟ ಏನು ಎಂಬುದನ್ನು ಶಾ ಅವರು ಸಭೆಯಲ್ಲಿ ಬಿಚ್ಚಿಡುವ ಸಾಧ್ಯತೆ ಇದೆ. ಸಹಕಾರ ಕ್ಷೇತ್ರದಿಂದ ರಾಜಕೀಯ ಶಕ್ತಿ ಪಡೆದುಕೊಂಡ ಹಲವು ನಾಯಕರು ದೇಶದಲ್ಲಿ ಇದ್ದಾರೆ. ಈ ಕ್ಷೇತ್ರವನ್ನು ಬಿಜೆಪಿ ಹಿಡಿತಕ್ಕೆ ತೆಗೆದುಕೊಳ್ಳುವುದಕ್ಕಾಗಿಯೇ ಹೊಸ ಸಚಿವಾಲಯ ಸೃಷ್ಟಿಸಲಾಗಿದೆ ಎಂಬ ಅನುಮಾನ ಈ ನಾಯಕರಲ್ಲಿ ಮೂಡಿದೆ. ಹೊಸ ಸಚಿವಾಲಯ ಸ್ಥಾಪನೆಯನ್ನು ಮುಕ್ತವಾಗಿ ಯಾರೂ ಸ್ವಾಗತಿಸದಿರಲು ಇದು ಕಾರಣವಾಗಿದೆ.</p>.<p>‘ಸಹಕಾರ ಕ್ಷೇತ್ರದ ಎಲ್ಲ ವಿಭಾಗಗಳ ಪ್ರತಿನಿಧಿಗಳೂ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮೀನುಗಾರಿಕೆ, ಹೈನುಗಾರಿಕೆ, ನೇಕಾರಿಕೆ, ಸಕ್ಕರೆ, ನಗರ ಸಹಕಾರ ಬ್ಯಾಂಕುಗಳು, ರಸಗೊಬ್ಬರ ಸಹಕಾರ ಸಂಘಗಳು ಎಲ್ಲದರ ಪ್ರತಿನಿಧಿಗಳೂ ಹಾಜರಾಗಲಿದ್ದಾರೆ’ ಎಂದು ಭಾರತ ರಾಷ್ಟ್ರೀಯ ಸಹಕಾರ ಒಕ್ಕೂಟದ ಅಧ್ಯಕ್ಷ ದಿಲೀಪ್ ಸಂಘಾನಿ ಹೇಳಿದ್ದಾರೆ.</p>.<p>‘ನೂತನ ಸಚಿವಾಲಯದ ಬಗ್ಗೆ ಆಕ್ಷೇಪ ಇರುವವರು, ಮುಂದೆಯೂ ಆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಸಚಿವಾಲಯವು ಈ ಬಗ್ಗೆ ಇರುವ ಸಂದೇಹಗಳನ್ನು ಪರಿಹರಿಸುತ್ತದೆ ಮತ್ತು ಸಹಕಾರ ಕ್ಷೇತ್ರಕ್ಕೆ ಸಕಾರಾತ್ಮಕವಾದ ಸಂದೇಶವನ್ನು ರವಾನಿಸುತ್ತದೆ’ ಎಂದು ಸಂಘಾನಿ ಹೇಳಿದ್ದಾರೆ. ನೂತನ ಸಚಿವಾಲಯದ ಬಗ್ಗೆ ವ್ಯಕ್ತವಾಗುತ್ತಿರುವ ಕಳವಳದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.</p>.<p>ಈ ಸಮಾವೇಶದ ವಿಷಯ ‘ಸಹಕಾರದಿಂದ ಸಮೃದ್ಧಿ'. ದೇಶದಲ್ಲಿ ಸಹಕಾರ ಚಳವಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಗ್ರಾಮ ಮಟ್ಟದಿಂದ, ರಾಷ್ಟ್ರಮಟ್ಟದವರೆಗಿನ ಸಹಕಾರ ಸಂಘಗಳ ನಾಯಕರು ಮತ್ತು ಪ್ರತಿನಿಧಿಗಳನ್ನು ಒಂದೆಡೆ ಸೇರಿಸಲಾಗುತ್ತಿದೆ. ಸಹಕಾರ ಕ್ಷೇತ್ರವನ್ನು ಬಲಪಡಿಸುವ ಮತ್ತು ಆ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಸುವ ಸಂಬಂಧ ತೆಗೆದುಕೊಳ್ಳಲಾಗುವ ಕ್ರಮಗಳ ಬಗ್ಗೆ ಸಚಿವರು ಈ ವಿಚಾರ ಸಂಕಿರಣದಲ್ಲಿ ಮಾಹಿತಿ ನೀಡಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಸಹಕಾರ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಸಚಿವಾಲಯವು ಪ್ರತ್ಯೇಕ ಆಡಳಿತ ವರ್ಗ, ಕಾನೂನು ಮತ್ತು ನೀತಿಯನ್ನು ರೂಪಿಸಲಿದೆ. ಬಹುರಾಜ್ಯ ಸಹಕಾರ ಸೊಸೈಟಿಗಳ ಅಭಿವೃದ್ಧಿಗೆ ಮತ್ತು ಅವುಗಳ ವ್ಯವಹಾರವನ್ನು ಸುಗಮಗೊಳಿಸುವ ಸಂಬಂಧ ಸಚಿವಾಲಯವು ಕ್ರಮ ತೆಗೆದುಕೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p class="Briefhead"><strong>ಕಾರ್ಯಕ್ರಮ ವಿವರ<br />*</strong>ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ<br /><strong>*</strong>ಸಹಕಾರ ಕ್ಷೇತ್ರದ ನಾಯಕರ ಒಂದು ದಿನದ ಸಮಾವೇಶ<br /><strong>*</strong>2,200 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ<br /><strong>*</strong>ಗ್ರಾಮ, ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರತಿನಿಧಿಗಳಿಗೆ ಅವಕಾಶ<br /><strong>*</strong>ವರ್ಚುವಲ್ ಮಾಧ್ಯಮದಲ್ಲಿ ಲಕ್ಷಾಂತರ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>