<p><strong>ಗುವಾಹಟಿ</strong>: ಮಣಿಪುರ ವಿಧಾನಸಭೆಗೆ ಸೋಮವಾರ ಮೊದಲ ಹಂತದ ಮತದಾನ ನಡೆಯಲಿದೆ. 38 ಕ್ಷೇತ್ರಗಳಿಗೆ ನಡೆಯುವ ಮತದಾನವು 173 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ.</p>.<p>ಐದು ಜಿಲ್ಲೆಗಳಾದ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ವಿಷ್ಣುಪುರ, ಕಂಗ್ಪೋಕಪಿ ಮತ್ತು ಚುರಾಚಾಂದ್ಪುರಗಳಲ್ಲಿ 12 ಲಕ್ಷ ಜನರು ಮತ ಚಲಾಯಿಸಲಿದ್ದಾರೆ. 1,721 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.</p>.<p>ಬಿಜೆಪಿ–ಜೆಡಿಯು ಮೈತ್ರಿಕೂಟ, ಎನ್ಪಿಪಿ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. 2017ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾದಾಗ, ಎನ್ಪಿಪಿ ಸರ್ಕಾರವನ್ನು ಬೆಂಬಲಿಸಿತ್ತು. ಈ ಬಾರಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಎಲ್ಲ ಪಕ್ಷಗಳು ಬಯಸಿವೆ. ಕಾಂಗ್ರೆಸ್ ಪಕ್ಷವು ರಾಜ್ಯದ ಐದು ಸಣ್ಣ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಕಣಕ್ಕೆ ಧುಮುಕಿದೆ.</p>.<p>60 ಸದಸ್ಯಬಲದ ವಿಧಾನಸಭೆಯ ಉಳಿದ 22 ಕ್ಷೇತ್ರಗಳಿಗೆ ಮಾರ್ಚ್ 5ರಂದು ಮತದಾನ ನಡೆಯಲಿದೆ.</p>.<p class="Subhead"><strong>ಗುಂಡಿನ ಸದ್ದು:</strong>ಚುನಾವಣೆಗೂ ಮುನ್ನ ರಾಜ್ಯದಲ್ಲಿ ಗುಂಡಿನ ಸದ್ದು ಕೇಳಿದೆ.ಕ್ಷೇತ್ರಿಗಾವ್ ವಿಧಾನಸಭಾ ಕ್ಷೇತ್ರದಿಂದ ಜೆಡಿಯು ಅಭ್ಯರ್ಥಿಯಾಗಿ ಕಣಕ್ಕಿಳಿದಿರುವವಾಂಗ್ಲೆಬಮ್ ರೋಹಿತ್ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.ಶನಿವಾರ ತಡರಾತ್ರಿ 12.30ರ ಸಮಯದಲ್ಲಿ ಈ ದಾಳಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ನಹರುಪ್ ಮಖಾಪಟ್ ಎಂಬಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದಾಗ ದಾಳಿ ನಡೆದಿದೆ. ಎದೆಯಲ್ಲಿ ಗುಂಡು ಹೊಕ್ಕಿರುವ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<p>ಈ ಘಟನೆ ನಡೆಯುವುದಕ್ಕೆ ಕೆಲವೇ ಗಂಟೆಗಳ ಮುನ್ನ, ಚುರಾಚಾಂದ್ಪುರ ಜಿಲ್ಲೆಯ ಗಂಗ್ಪಿಮುಲ್ ಗ್ರಾಮದಲ್ಲಿ ಸ್ಫೋಟ ನಡೆದಿದ್ದು, ಮೂವರು ಮೃತಪಟ್ಟಿದ್ದಾರೆ. ಕಚ್ಚಾಬಾಂಬ್ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಮಣಿಪುರ ವಿಧಾನಸಭೆಗೆ ಸೋಮವಾರ ಮೊದಲ ಹಂತದ ಮತದಾನ ನಡೆಯಲಿದೆ. 38 ಕ್ಷೇತ್ರಗಳಿಗೆ ನಡೆಯುವ ಮತದಾನವು 173 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ.</p>.<p>ಐದು ಜಿಲ್ಲೆಗಳಾದ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ವಿಷ್ಣುಪುರ, ಕಂಗ್ಪೋಕಪಿ ಮತ್ತು ಚುರಾಚಾಂದ್ಪುರಗಳಲ್ಲಿ 12 ಲಕ್ಷ ಜನರು ಮತ ಚಲಾಯಿಸಲಿದ್ದಾರೆ. 1,721 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.</p>.<p>ಬಿಜೆಪಿ–ಜೆಡಿಯು ಮೈತ್ರಿಕೂಟ, ಎನ್ಪಿಪಿ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. 2017ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾದಾಗ, ಎನ್ಪಿಪಿ ಸರ್ಕಾರವನ್ನು ಬೆಂಬಲಿಸಿತ್ತು. ಈ ಬಾರಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಎಲ್ಲ ಪಕ್ಷಗಳು ಬಯಸಿವೆ. ಕಾಂಗ್ರೆಸ್ ಪಕ್ಷವು ರಾಜ್ಯದ ಐದು ಸಣ್ಣ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಕಣಕ್ಕೆ ಧುಮುಕಿದೆ.</p>.<p>60 ಸದಸ್ಯಬಲದ ವಿಧಾನಸಭೆಯ ಉಳಿದ 22 ಕ್ಷೇತ್ರಗಳಿಗೆ ಮಾರ್ಚ್ 5ರಂದು ಮತದಾನ ನಡೆಯಲಿದೆ.</p>.<p class="Subhead"><strong>ಗುಂಡಿನ ಸದ್ದು:</strong>ಚುನಾವಣೆಗೂ ಮುನ್ನ ರಾಜ್ಯದಲ್ಲಿ ಗುಂಡಿನ ಸದ್ದು ಕೇಳಿದೆ.ಕ್ಷೇತ್ರಿಗಾವ್ ವಿಧಾನಸಭಾ ಕ್ಷೇತ್ರದಿಂದ ಜೆಡಿಯು ಅಭ್ಯರ್ಥಿಯಾಗಿ ಕಣಕ್ಕಿಳಿದಿರುವವಾಂಗ್ಲೆಬಮ್ ರೋಹಿತ್ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.ಶನಿವಾರ ತಡರಾತ್ರಿ 12.30ರ ಸಮಯದಲ್ಲಿ ಈ ದಾಳಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ನಹರುಪ್ ಮಖಾಪಟ್ ಎಂಬಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದಾಗ ದಾಳಿ ನಡೆದಿದೆ. ಎದೆಯಲ್ಲಿ ಗುಂಡು ಹೊಕ್ಕಿರುವ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.</p>.<p>ಈ ಘಟನೆ ನಡೆಯುವುದಕ್ಕೆ ಕೆಲವೇ ಗಂಟೆಗಳ ಮುನ್ನ, ಚುರಾಚಾಂದ್ಪುರ ಜಿಲ್ಲೆಯ ಗಂಗ್ಪಿಮುಲ್ ಗ್ರಾಮದಲ್ಲಿ ಸ್ಫೋಟ ನಡೆದಿದ್ದು, ಮೂವರು ಮೃತಪಟ್ಟಿದ್ದಾರೆ. ಕಚ್ಚಾಬಾಂಬ್ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>