<p><strong>ನವದೆಹಲಿ: </strong>ತಮ್ಮ ಪಕ್ಷ ನೀಡಿದ್ದ ಸಲಹೆ ಮೇರೆಗೆ ಕೇಂದ್ರ ಸರ್ಕಾರ, ವಿದೇಶದಲ್ಲಿ ತಯಾರಿಸಿದ ಕೋವಿಡ್–19 ವಿರುದ್ಧದ ಲಸಿಕೆಗೆ ತುರ್ತು ಅನುಮೋದನೆ ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಆದರೆ, ಈ ವಿಷಯದಲ್ಲಿ ಕೇಂದ್ರ ಸರ್ಕಾರ ನಡೆದುಕೊಂಡ ರೀತಿಯನ್ನು ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟೀಕಿಸಿದ್ದಾರೆ.</p>.<p>ಲಸಿಕೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.</p>.<p><strong>ಓದಿ:</strong><a href="https://www.prajavani.net/india-news/west-bengal-govt-to-start-probe-into-cooch-behar-killings-to-track-punish-culprits-mamata-west-822127.html" itemprop="url">ಕೂಚ್ಬಿಹಾರ್ ಹತ್ಯೆಗಳ ಬಗ್ಗೆ ಸರ್ಕಾರ ತನಿಖೆ ನಡೆಸಲಿದೆ: ಮಮತಾ ಬ್ಯಾನರ್ಜಿ</a></p>.<p>ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಫಾರ್ಮಾ ಕಂಪನಿಗಳ ಪರ ರಾಹುಲ್ ಗಾಂಧಿ ಲಾಬಿ ನಡೆಸುತ್ತಿದ್ದಾರೆ ಎಂದು ದೂರಿದ್ದರು.</p>.<p>ಎಲ್ಲ ಲಸಿಕೆಗಳ ತುರ್ತು ಬಳಕೆಗೆ ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಹ ಪ್ರಧಾನಿ ಅವರಿಗೆ ಪತ್ರ ಬರೆದಿದ್ದರು.</p>.<p>ಹೀಗಾಗಿ, ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಪ್ರಸ್ತಾಪಿಸಿರುವ ರಾಹುಲ್ ಗಾಂಧಿ ಅವರು, ’ಮೊದಲು ನಿಮ್ಮನ್ನು ಕಡೆಗಣಿಸುತ್ತಾರೆ. ನಂತರ, ನಿಮ್ಮನ್ನು ನೋಡಿ ನಗುತ್ತಾರೆ. ಬಳಿಕ, ನಿಮ್ಮ ಜತೆ ಜಗಳ ತೆಗೆಯುತ್ತಾರೆ. ಕೊನೆಯಲ್ಲಿ, ನೀವೇ ಗೆಲ್ಲುತ್ತೀರಿ’ ಎನ್ನುವ ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.</p>.<p>ಇತರ ದೇಶಗಳು ಅನುಮೋದನೆ ನೀಡಿರುವ ವಿದೇಶದಲ್ಲಿ ತಯಾರಿಸಿದ ಲಸಿಕೆಗಳಿಗೆ ತುರ್ತು ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿತ್ತು. ಕೋವಿಡ್–19 ಲಸಿಕೆಗಳ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ತಮ್ಮ ಪಕ್ಷ ನೀಡಿದ್ದ ಸಲಹೆ ಮೇರೆಗೆ ಕೇಂದ್ರ ಸರ್ಕಾರ, ವಿದೇಶದಲ್ಲಿ ತಯಾರಿಸಿದ ಕೋವಿಡ್–19 ವಿರುದ್ಧದ ಲಸಿಕೆಗೆ ತುರ್ತು ಅನುಮೋದನೆ ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಆದರೆ, ಈ ವಿಷಯದಲ್ಲಿ ಕೇಂದ್ರ ಸರ್ಕಾರ ನಡೆದುಕೊಂಡ ರೀತಿಯನ್ನು ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟೀಕಿಸಿದ್ದಾರೆ.</p>.<p>ಲಸಿಕೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.</p>.<p><strong>ಓದಿ:</strong><a href="https://www.prajavani.net/india-news/west-bengal-govt-to-start-probe-into-cooch-behar-killings-to-track-punish-culprits-mamata-west-822127.html" itemprop="url">ಕೂಚ್ಬಿಹಾರ್ ಹತ್ಯೆಗಳ ಬಗ್ಗೆ ಸರ್ಕಾರ ತನಿಖೆ ನಡೆಸಲಿದೆ: ಮಮತಾ ಬ್ಯಾನರ್ಜಿ</a></p>.<p>ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಫಾರ್ಮಾ ಕಂಪನಿಗಳ ಪರ ರಾಹುಲ್ ಗಾಂಧಿ ಲಾಬಿ ನಡೆಸುತ್ತಿದ್ದಾರೆ ಎಂದು ದೂರಿದ್ದರು.</p>.<p>ಎಲ್ಲ ಲಸಿಕೆಗಳ ತುರ್ತು ಬಳಕೆಗೆ ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಹ ಪ್ರಧಾನಿ ಅವರಿಗೆ ಪತ್ರ ಬರೆದಿದ್ದರು.</p>.<p>ಹೀಗಾಗಿ, ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಪ್ರಸ್ತಾಪಿಸಿರುವ ರಾಹುಲ್ ಗಾಂಧಿ ಅವರು, ’ಮೊದಲು ನಿಮ್ಮನ್ನು ಕಡೆಗಣಿಸುತ್ತಾರೆ. ನಂತರ, ನಿಮ್ಮನ್ನು ನೋಡಿ ನಗುತ್ತಾರೆ. ಬಳಿಕ, ನಿಮ್ಮ ಜತೆ ಜಗಳ ತೆಗೆಯುತ್ತಾರೆ. ಕೊನೆಯಲ್ಲಿ, ನೀವೇ ಗೆಲ್ಲುತ್ತೀರಿ’ ಎನ್ನುವ ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.</p>.<p>ಇತರ ದೇಶಗಳು ಅನುಮೋದನೆ ನೀಡಿರುವ ವಿದೇಶದಲ್ಲಿ ತಯಾರಿಸಿದ ಲಸಿಕೆಗಳಿಗೆ ತುರ್ತು ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿತ್ತು. ಕೋವಿಡ್–19 ಲಸಿಕೆಗಳ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>