<p><strong>ನವದೆಹಲಿ:</strong> ಕರ್ತವ್ಯದ ಮೇಲೆ ನೈಜೀರಿಯಾದಲ್ಲಿರುವ ಐವರು ಭಾರತೀಯ ನಾವಿಕರನ್ನು ಕಡಲ್ಗಳ್ಳರು ಅಪಹರಣ ಮಾಡಿದ್ದಾರೆ.</p>.<p>ಈ ವಿಷಯವನ್ನು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು ದೃಢಪಡಿಸಿದ್ದು, ಅಪಹೃತರ ಸುರಕ್ಷಿತ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ನೈಜೀರಿಯಾದಲ್ಲಿನ ಭಾರತದ ರಾಯಭಾರಿ ಅಭಯ್ ಠಾಕೂರ್ ಅವರಿಗೆ ಸೂಚನೆ ನೀಡಿದ್ದಾರೆ.</p>.<p>ಈ ನಾವಿಕರನ್ನು ಎರಡು ವಾರಗಳ ಹಿಂದೆಯೇ ಅಪಹರಣ ಮಾಡಲಾಗಿದೆ ಎಂದು ಹೇಳಲಾಗಿದ್ದು, ಹಲವು ದಿನಗಳಿಂದ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಅಪಹರಣಗೊಂಡವರ ಕುಟುಂಬಗಳು ತಿಳಿಸಿವೆ.</p>.<p>‘ಎಂ.ಟಿ ಅಪೇಕಸ್ ಹಡಗಿನಿಂದ ನನ್ನ ಪತಿ ಸುದೀಪ್ಕುಮಾರ ಚೌಧರಿ ಅವರನ್ನು ಅಪಹರಿಸಲಾಗಿದೆ’ ಎಂದು ಚೌಧರಿ ಪತ್ನಿ ಭಾಗಶ್ರೀ ದಾಸ್ ಟ್ವಿಟ್ಟರ್ ಮೂಲಕ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ.</p>.<p>ಈ ನಡುವೆ, ‘ನೈಜೀರಿಯಾ ನೌಕಾಪಡೆ ಅಧಿಕಾರಿಗಳು ಹಾಗೂ ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದು, ಅಪಕರಣಕಾರರೊಂದಿಗೂ ಸಂಪರ್ಕ ಸಾಧಿಸಲಾಗಿದೆ’ ಎಂದು ನೈಜೀರಿಯಾದಲ್ಲಿನ ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ತವ್ಯದ ಮೇಲೆ ನೈಜೀರಿಯಾದಲ್ಲಿರುವ ಐವರು ಭಾರತೀಯ ನಾವಿಕರನ್ನು ಕಡಲ್ಗಳ್ಳರು ಅಪಹರಣ ಮಾಡಿದ್ದಾರೆ.</p>.<p>ಈ ವಿಷಯವನ್ನು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು ದೃಢಪಡಿಸಿದ್ದು, ಅಪಹೃತರ ಸುರಕ್ಷಿತ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ನೈಜೀರಿಯಾದಲ್ಲಿನ ಭಾರತದ ರಾಯಭಾರಿ ಅಭಯ್ ಠಾಕೂರ್ ಅವರಿಗೆ ಸೂಚನೆ ನೀಡಿದ್ದಾರೆ.</p>.<p>ಈ ನಾವಿಕರನ್ನು ಎರಡು ವಾರಗಳ ಹಿಂದೆಯೇ ಅಪಹರಣ ಮಾಡಲಾಗಿದೆ ಎಂದು ಹೇಳಲಾಗಿದ್ದು, ಹಲವು ದಿನಗಳಿಂದ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಅಪಹರಣಗೊಂಡವರ ಕುಟುಂಬಗಳು ತಿಳಿಸಿವೆ.</p>.<p>‘ಎಂ.ಟಿ ಅಪೇಕಸ್ ಹಡಗಿನಿಂದ ನನ್ನ ಪತಿ ಸುದೀಪ್ಕುಮಾರ ಚೌಧರಿ ಅವರನ್ನು ಅಪಹರಿಸಲಾಗಿದೆ’ ಎಂದು ಚೌಧರಿ ಪತ್ನಿ ಭಾಗಶ್ರೀ ದಾಸ್ ಟ್ವಿಟ್ಟರ್ ಮೂಲಕ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ.</p>.<p>ಈ ನಡುವೆ, ‘ನೈಜೀರಿಯಾ ನೌಕಾಪಡೆ ಅಧಿಕಾರಿಗಳು ಹಾಗೂ ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದು, ಅಪಕರಣಕಾರರೊಂದಿಗೂ ಸಂಪರ್ಕ ಸಾಧಿಸಲಾಗಿದೆ’ ಎಂದು ನೈಜೀರಿಯಾದಲ್ಲಿನ ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>