<p><strong>ಗುವಾಹಟಿ</strong>: ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಬಾಂಗ್ಲಾದೇಶದ ಐದು ಮಂದಿ ನುಸುಳುಕೋರರನ್ನು ಇಂದು (ಗುರುವಾರ) ಬಂಧಿಸಿ ಗಡೀಪಾರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.</p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಒಳನುಸುಳುವಿಕೆ ವಿರುದ್ಧದ ನಿರ್ಣಾಯಕ ಕ್ರಮದಲ್ಲಿ ಶ್ರೀಭೂಮಿ ಪೊಲೀಸರು ಐದು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿ, ಗಡೀಪಾರು ಮಾಡಿದ್ದಾರೆ’ ಎಂದು ಹೇಳಿದ್ದಾರೆ.</p><p>ನುಸುಳುಕೋರರನ್ನು ಮೊಹಮ್ಮದ್ ಇಮಾನ್ ಮೀರಾ, ಮೊಹಮ್ಮದ್ ನಯೀಮ್ ಅಹ್ಮದ್, ಮಿಯಾಝಾಕಿ ಮೊಹಮ್ಮದ್ ರಸೆಲ್, ಅಬ್ದುಲ್ ಕಲಾಂ ಮಿಯಾ ಮತ್ತು ಮೊಹಮ್ಮದ್ ಮುನ್ನಾ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಕಳೆದ ಏಳು ತಿಂಗಳಲ್ಲಿ 320ಕ್ಕೂ ಹೆಚ್ಚು ಒಳನುಸುಳುಕೋರರನ್ನು ಗಡೀಪಾರು ಮಾಡಲಾಗಿದೆ. ಯಾವುದೇ ವ್ಯಕ್ತಿ ಅಕ್ರಮವಾಗಿ ರಾಜ್ಯವನ್ನು ಪ್ರವೇಶಿಸದಂತೆ ಅಸ್ಸಾಂ ಪೊಲೀಸರು ಗಡಿಯುದ್ದಕ್ಕೂ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಬಾಂಗ್ಲಾದೇಶದ ಐದು ಮಂದಿ ನುಸುಳುಕೋರರನ್ನು ಇಂದು (ಗುರುವಾರ) ಬಂಧಿಸಿ ಗಡೀಪಾರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.</p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಒಳನುಸುಳುವಿಕೆ ವಿರುದ್ಧದ ನಿರ್ಣಾಯಕ ಕ್ರಮದಲ್ಲಿ ಶ್ರೀಭೂಮಿ ಪೊಲೀಸರು ಐದು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿ, ಗಡೀಪಾರು ಮಾಡಿದ್ದಾರೆ’ ಎಂದು ಹೇಳಿದ್ದಾರೆ.</p><p>ನುಸುಳುಕೋರರನ್ನು ಮೊಹಮ್ಮದ್ ಇಮಾನ್ ಮೀರಾ, ಮೊಹಮ್ಮದ್ ನಯೀಮ್ ಅಹ್ಮದ್, ಮಿಯಾಝಾಕಿ ಮೊಹಮ್ಮದ್ ರಸೆಲ್, ಅಬ್ದುಲ್ ಕಲಾಂ ಮಿಯಾ ಮತ್ತು ಮೊಹಮ್ಮದ್ ಮುನ್ನಾ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಕಳೆದ ಏಳು ತಿಂಗಳಲ್ಲಿ 320ಕ್ಕೂ ಹೆಚ್ಚು ಒಳನುಸುಳುಕೋರರನ್ನು ಗಡೀಪಾರು ಮಾಡಲಾಗಿದೆ. ಯಾವುದೇ ವ್ಯಕ್ತಿ ಅಕ್ರಮವಾಗಿ ರಾಜ್ಯವನ್ನು ಪ್ರವೇಶಿಸದಂತೆ ಅಸ್ಸಾಂ ಪೊಲೀಸರು ಗಡಿಯುದ್ದಕ್ಕೂ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>