<p><strong>ದಿಬ್ರುಗಢ (ಅಸ್ಸಾಂ): </strong>ಅಸ್ಸಾಂನ ದಿಬ್ರುಗಢ ಜಿಲ್ಲೆಯಲ್ಲಿ ಐದು ತಿಂಗಳ ಗರ್ಭಿಣಿ ಶಿಕ್ಷಕಿಯೊಬ್ಬರು ಶಾಲೆಯಲ್ಲಿ ಕಳಪೆ ಶೈಕ್ಷಣಿಕ ಸಾಧನೆ ಮತ್ತು ನಡವಳಿಕೆಯ ಕುರಿತು ಪೋಷಕರ ಗಮನಕ್ಕೆ ತಂದ ಕಾರಣಕ್ಕೆ ವಿದ್ಯಾರ್ಥಿಗಳ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ.</p>.<p>ಮೋರನ್ ಪ್ರದೇಶದಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ 10ಮತ್ತು 11ನೇ ತರಗತಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿರುವುದಾಗಿ‘ಎನ್ಡಿಟಿವಿ’ ವರದಿ ಮಾಡಿದೆ.</p>.<p>ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ನಡವಳಿಕೆ ಬಗ್ಗೆ ಪೋಷಕರೊಂದಿಗೆ ಭಾನುವಾರ ಸಂಜೆ ಸಭೆ ನಡೆಸಲಾಗಿತ್ತು.ಇದೇ ವೇಳೆ ವಿದ್ಯಾರ್ಥಿಗಳು ಕಡಿಮೆ ಅಂಕ ಗಳಿಸಿರುವ ಬಗ್ಗೆಪೋಷಕರಿಗೆಶಿಕ್ಷಕಿದೂರು ನೀಡಿದ್ದರು.</p>.<p>ಸಭೆ ಮುಗಿದ ಬಳಿಕ ಕೆಲವು ವಿದ್ಯಾರ್ಥಿಗಳು ಗುಂಪುಗೂಡಿ ಗರ್ಭಾವಸ್ಥೆಯಲ್ಲಿದ್ದ ಶಿಕ್ಷಕಿಯತಲೆಗೂದಲನ್ನು ಹಿಡಿದು ಎಳೆದಾಡಿದ್ದು, ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಶಿಕ್ಷಕಿಯನ್ನು ಶಾಲಾ ಸಿಬ್ಬಂದಿಗಳು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>‘ಪ್ರಕರಣದಲ್ಲಿ 10 ಮತ್ತು 11ನೇ ತರಗತಿಯ 22 ವಿದ್ಯಾರ್ಥಿಗಳು ಭಾಗಿಯಾಗಿರುವುದು ದೃಢಪಟ್ಟಿದೆ. ಸದ್ಯ ಅವರನ್ನು ಅಮಾನತುಗೊಳಿಸಲಾಗಿದೆ. ಘಟನೆ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಜತೆಗೆ ಪೋಷಕರಿಗೂ ಮಾಹಿತಿ ನೀಡಲಾಗಿದೆ’ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.</p>.<p>ಏತನ್ಮಧ್ಯೆ, ನವೋದಯ ವಿದ್ಯಾಲಯ ಸಮಿತಿಯ ಉಪ ಆಯುಕ್ತ (ಈಶಾನ್ಯ) ಕೆ.ವಿ. ಸುರೇಶ್ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಇದು ‘ಅತ್ಯಂತ ದುರದೃಷ್ಟಕರ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಿಬ್ರುಗಢ (ಅಸ್ಸಾಂ): </strong>ಅಸ್ಸಾಂನ ದಿಬ್ರುಗಢ ಜಿಲ್ಲೆಯಲ್ಲಿ ಐದು ತಿಂಗಳ ಗರ್ಭಿಣಿ ಶಿಕ್ಷಕಿಯೊಬ್ಬರು ಶಾಲೆಯಲ್ಲಿ ಕಳಪೆ ಶೈಕ್ಷಣಿಕ ಸಾಧನೆ ಮತ್ತು ನಡವಳಿಕೆಯ ಕುರಿತು ಪೋಷಕರ ಗಮನಕ್ಕೆ ತಂದ ಕಾರಣಕ್ಕೆ ವಿದ್ಯಾರ್ಥಿಗಳ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ.</p>.<p>ಮೋರನ್ ಪ್ರದೇಶದಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ 10ಮತ್ತು 11ನೇ ತರಗತಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿರುವುದಾಗಿ‘ಎನ್ಡಿಟಿವಿ’ ವರದಿ ಮಾಡಿದೆ.</p>.<p>ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ನಡವಳಿಕೆ ಬಗ್ಗೆ ಪೋಷಕರೊಂದಿಗೆ ಭಾನುವಾರ ಸಂಜೆ ಸಭೆ ನಡೆಸಲಾಗಿತ್ತು.ಇದೇ ವೇಳೆ ವಿದ್ಯಾರ್ಥಿಗಳು ಕಡಿಮೆ ಅಂಕ ಗಳಿಸಿರುವ ಬಗ್ಗೆಪೋಷಕರಿಗೆಶಿಕ್ಷಕಿದೂರು ನೀಡಿದ್ದರು.</p>.<p>ಸಭೆ ಮುಗಿದ ಬಳಿಕ ಕೆಲವು ವಿದ್ಯಾರ್ಥಿಗಳು ಗುಂಪುಗೂಡಿ ಗರ್ಭಾವಸ್ಥೆಯಲ್ಲಿದ್ದ ಶಿಕ್ಷಕಿಯತಲೆಗೂದಲನ್ನು ಹಿಡಿದು ಎಳೆದಾಡಿದ್ದು, ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಶಿಕ್ಷಕಿಯನ್ನು ಶಾಲಾ ಸಿಬ್ಬಂದಿಗಳು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>‘ಪ್ರಕರಣದಲ್ಲಿ 10 ಮತ್ತು 11ನೇ ತರಗತಿಯ 22 ವಿದ್ಯಾರ್ಥಿಗಳು ಭಾಗಿಯಾಗಿರುವುದು ದೃಢಪಟ್ಟಿದೆ. ಸದ್ಯ ಅವರನ್ನು ಅಮಾನತುಗೊಳಿಸಲಾಗಿದೆ. ಘಟನೆ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಜತೆಗೆ ಪೋಷಕರಿಗೂ ಮಾಹಿತಿ ನೀಡಲಾಗಿದೆ’ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.</p>.<p>ಏತನ್ಮಧ್ಯೆ, ನವೋದಯ ವಿದ್ಯಾಲಯ ಸಮಿತಿಯ ಉಪ ಆಯುಕ್ತ (ಈಶಾನ್ಯ) ಕೆ.ವಿ. ಸುರೇಶ್ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಇದು ‘ಅತ್ಯಂತ ದುರದೃಷ್ಟಕರ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>