ಎನ್ಐಎಂನಲ್ಲಿ ತರಬೇತಿ ಪಡೆಯುತ್ತಿದ್ದ 61 ಮಂದಿಯ ತಂಡವು ಮಂಗಳವಾರ ಬೆಳಿಗ್ಗೆ ಪರ್ವತಾರೋಹಣ ಅಭ್ಯಾಸ ನಡೆಸಿ ಹಿಂತಿರುಗುತ್ತಿದ್ದಾಗ ದ್ರೌಪದಿ ಕಾ ದಂಡ ಶಿಖರದ ಬಳಿ ಹಠಾತ್ತನೆ ಹಿಮಪಾತ ಉಂಟಾಗಿತ್ತು. ಹಿಮದಡಿ ಸಿಲುಕಿದ್ದ ನಾಲ್ವರ ಶವಗಳನ್ನು ಮಂಗಳವಾರವೇ ಹೊರತೆಗೆಯಲಾಗಿತ್ತು. ಮೃತರಲ್ಲಿ 7 ಮಂದಿ ಶಿಬಿರಾರ್ಥಿಗಳು ಹಾಗೂ ಇಬ್ಬರು ಮಾರ್ಗದರ್ಶಕರು ಸೇರಿದ್ದಾರೆ.ಒಟ್ಟು ಹತ್ತು ಶವಗಳನ್ನು ಹೊರತೆಗೆಯಲಾಗಿದೆ ಎಂದು ಉತ್ತರಾಖಂಡ ಪೊಲೀಸರು ಬುಧವಾರವೇ ತಿಳಿಸಿದ್ದರು.