<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಭಾಂಗೋರ್ನಲ್ಲಿ ಐಎಸ್ಎಫ್ ಬೆಂಬಲಿಗರು ಬಾಂಬ್ಗಳನ್ನು ಎಸೆದಿದ್ದರಿಂದ, ತೃಣಮೂಲ ಕಾಂಗ್ರೆಸ್ನ ಐವರು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಟಿಎಂಸಿ ಕಾರ್ಯಕರ್ತರು ಗುರುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.</p>.<p>ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯ ಸಚಿವ ಅರೂಪ್ ಬಿಸ್ವಾಸ್, ಜಾದವಪುರದ ಟಿಎಂಸಿ ಅಭ್ಯರ್ಥಿ ಸಯೋನಿ ಘೋಷ್, ಶಾಸಕ ಸೌಕತ್ ಮೊಲ್ಲಾ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.</p>.<p>ಜಾದವಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಾಂಗೋರ್ನಲ್ಲಿ ಶನಿವಾರ (ಜೂನ್ 1) ಮತದಾನ ನಡೆಯಲಿದೆ. ಮತದಾನದ ದಿನದಂದು ಶಾಸಕ ಸೌಕತ್ ಮೊಲ್ಲಾ ತಮ್ಮ ಕೈನಿಂಗ್ ಪುರ್ಬಾ ಕ್ಷೇತ್ರದಿಂದ ಹೊರಬಾರದಂತೆ ಚುನಾವಣಾ ಆಯೋಗವು ಆದೇಶಿಸಿದೆ.</p>.<p>ಭಾಂಗೋರ್ನ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಶಾಸಕ ನೌಶಾದ್ ಸಿದ್ದಿಕಿ ಈ ಆರೋಪವನ್ನು ನಿರಾಕರಿಸಿದ್ದು, ‘ಸೋಲಿನ ಭಯದಿಂದ ಟಿಎಂಸಿಯು ಇಂತಹ ಕೃತ್ಯ ಎಸಗಿ, ನಮ್ಮ ಮೇಲೆ ದೂರುತ್ತಿದೆ. ಟಿಎಂಸಿ ಕಾರ್ಯಕರ್ತರೇ ನಮ್ಮ ಬೆಂಬಲಿಗರ ಮೇಲೆ ಬಾಂಬ್ಗಳನ್ನು ಎಸೆದಿದ್ದಾರೆ. ಆದರೆ ಈ ಸಂದರ್ಭ ಅವರೇ ಗಾಯಗೊಂಡಿದ್ದಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಭಾಂಗೋರ್ನಲ್ಲಿ ಐಎಸ್ಎಫ್ ಬೆಂಬಲಿಗರು ಬಾಂಬ್ಗಳನ್ನು ಎಸೆದಿದ್ದರಿಂದ, ತೃಣಮೂಲ ಕಾಂಗ್ರೆಸ್ನ ಐವರು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಟಿಎಂಸಿ ಕಾರ್ಯಕರ್ತರು ಗುರುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.</p>.<p>ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯ ಸಚಿವ ಅರೂಪ್ ಬಿಸ್ವಾಸ್, ಜಾದವಪುರದ ಟಿಎಂಸಿ ಅಭ್ಯರ್ಥಿ ಸಯೋನಿ ಘೋಷ್, ಶಾಸಕ ಸೌಕತ್ ಮೊಲ್ಲಾ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.</p>.<p>ಜಾದವಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಾಂಗೋರ್ನಲ್ಲಿ ಶನಿವಾರ (ಜೂನ್ 1) ಮತದಾನ ನಡೆಯಲಿದೆ. ಮತದಾನದ ದಿನದಂದು ಶಾಸಕ ಸೌಕತ್ ಮೊಲ್ಲಾ ತಮ್ಮ ಕೈನಿಂಗ್ ಪುರ್ಬಾ ಕ್ಷೇತ್ರದಿಂದ ಹೊರಬಾರದಂತೆ ಚುನಾವಣಾ ಆಯೋಗವು ಆದೇಶಿಸಿದೆ.</p>.<p>ಭಾಂಗೋರ್ನ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಶಾಸಕ ನೌಶಾದ್ ಸಿದ್ದಿಕಿ ಈ ಆರೋಪವನ್ನು ನಿರಾಕರಿಸಿದ್ದು, ‘ಸೋಲಿನ ಭಯದಿಂದ ಟಿಎಂಸಿಯು ಇಂತಹ ಕೃತ್ಯ ಎಸಗಿ, ನಮ್ಮ ಮೇಲೆ ದೂರುತ್ತಿದೆ. ಟಿಎಂಸಿ ಕಾರ್ಯಕರ್ತರೇ ನಮ್ಮ ಬೆಂಬಲಿಗರ ಮೇಲೆ ಬಾಂಬ್ಗಳನ್ನು ಎಸೆದಿದ್ದಾರೆ. ಆದರೆ ಈ ಸಂದರ್ಭ ಅವರೇ ಗಾಯಗೊಂಡಿದ್ದಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>