ಭಾಂಗೋರ್ನ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಶಾಸಕ ನೌಶಾದ್ ಸಿದ್ದಿಕಿ ಈ ಆರೋಪವನ್ನು ನಿರಾಕರಿಸಿದ್ದು, ‘ಸೋಲಿನ ಭಯದಿಂದ ಟಿಎಂಸಿಯು ಇಂತಹ ಕೃತ್ಯ ಎಸಗಿ, ನಮ್ಮ ಮೇಲೆ ದೂರುತ್ತಿದೆ. ಟಿಎಂಸಿ ಕಾರ್ಯಕರ್ತರೇ ನಮ್ಮ ಬೆಂಬಲಿಗರ ಮೇಲೆ ಬಾಂಬ್ಗಳನ್ನು ಎಸೆದಿದ್ದಾರೆ. ಆದರೆ ಈ ಸಂದರ್ಭ ಅವರೇ ಗಾಯಗೊಂಡಿದ್ದಾರೆ’ ಎಂದು ಹೇಳಿದ್ದಾರೆ.