<p><strong>ಕೊಚ್ಚಿ:</strong> ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ.</p><p>ಬಿಹಾರ ಮೂಲದ ವಲಸೆ ಕಾರ್ಮಿಕನಾಗಿರುವ ಆರೋಪಿಯನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇತ್ತ ಆರೋಪಿಗೆ ಮರಣದಂಡನೆ ನೀಡಬೇಕು ಎಂದು ಸಂತ್ರಸ್ತ ಬಾಲಕಿಯ ತಾಯಿ ಮತ್ತು ಪೋಷಕರು ಒತ್ತಾಯಿಸಿದ್ದಾರೆ. </p><p>ಬಾಲಕಿಯ ತಂದೆ ತಾಯಿ ಕೂಡ ಬಿಹಾರದ ವಲಸೆ ಕಾರ್ಮಿಕರು. ಇವರು ವಾಸಿಸುತ್ತಿದ್ದ ಕಟ್ಟಡದಲ್ಲೇ ಆರೋಪಿ ವಾಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.</p><p>ಬಾಲಕಿ ಶುಕ್ರವಾರ ನಾಪತ್ತೆಯಾಗಿದ್ದಳು. ಜ್ಯೂಸ್ ಕೊಡಿಸುವ ಆಮಿಷವೊಡ್ಡಿ ಬೇರೆಡೆಗೆ ಕರೆದೊಯ್ದು ಅತ್ಯಾಚಾರ ಎಸಗಿ, ಬಳಿಕ ಕ್ರೂರವಾಗಿ ಹತ್ಯೆ ಮಾಡಿದ್ದ. </p><p>ಇಲ್ಲಿನ ಅಳುವಾ ಪ್ರದೇಶದ ಸ್ಥಳೀಯ ಮಾರುಕಟ್ಟೆಯ ಬಳಿ ಶನಿವಾರ ಬಾಲಕಿಯ ಮೃತದೇಹವು ಕಟ್ಟಿದ್ದ ಗೋಣಿಚೀಲವೊಂದರಲ್ಲಿ ಪತ್ತೆಯಾಗಿತ್ತು. ಆರೋಪಿಯನ್ನು ಶನಿವಾರವೇ ಬಂಧಿಸಲಾಗಿತ್ತು. ಆದರೆ, ಆತ ಪಾನಮತ್ತನಾಗಿದ್ದರಿಂದ ಆತನಿಂದ ಯಾವುದೇ ವಿಷಯ ಬಾಯಿಬಿಡಿಸಲು ಆಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ.</p><p>ಬಿಹಾರ ಮೂಲದ ವಲಸೆ ಕಾರ್ಮಿಕನಾಗಿರುವ ಆರೋಪಿಯನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇತ್ತ ಆರೋಪಿಗೆ ಮರಣದಂಡನೆ ನೀಡಬೇಕು ಎಂದು ಸಂತ್ರಸ್ತ ಬಾಲಕಿಯ ತಾಯಿ ಮತ್ತು ಪೋಷಕರು ಒತ್ತಾಯಿಸಿದ್ದಾರೆ. </p><p>ಬಾಲಕಿಯ ತಂದೆ ತಾಯಿ ಕೂಡ ಬಿಹಾರದ ವಲಸೆ ಕಾರ್ಮಿಕರು. ಇವರು ವಾಸಿಸುತ್ತಿದ್ದ ಕಟ್ಟಡದಲ್ಲೇ ಆರೋಪಿ ವಾಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.</p><p>ಬಾಲಕಿ ಶುಕ್ರವಾರ ನಾಪತ್ತೆಯಾಗಿದ್ದಳು. ಜ್ಯೂಸ್ ಕೊಡಿಸುವ ಆಮಿಷವೊಡ್ಡಿ ಬೇರೆಡೆಗೆ ಕರೆದೊಯ್ದು ಅತ್ಯಾಚಾರ ಎಸಗಿ, ಬಳಿಕ ಕ್ರೂರವಾಗಿ ಹತ್ಯೆ ಮಾಡಿದ್ದ. </p><p>ಇಲ್ಲಿನ ಅಳುವಾ ಪ್ರದೇಶದ ಸ್ಥಳೀಯ ಮಾರುಕಟ್ಟೆಯ ಬಳಿ ಶನಿವಾರ ಬಾಲಕಿಯ ಮೃತದೇಹವು ಕಟ್ಟಿದ್ದ ಗೋಣಿಚೀಲವೊಂದರಲ್ಲಿ ಪತ್ತೆಯಾಗಿತ್ತು. ಆರೋಪಿಯನ್ನು ಶನಿವಾರವೇ ಬಂಧಿಸಲಾಗಿತ್ತು. ಆದರೆ, ಆತ ಪಾನಮತ್ತನಾಗಿದ್ದರಿಂದ ಆತನಿಂದ ಯಾವುದೇ ವಿಷಯ ಬಾಯಿಬಿಡಿಸಲು ಆಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>