<p><strong>ಶ್ರೀನಗರ</strong>: ಕಾಶ್ಮೀರದಲ್ಲಿ ಹಿಮಪಾತದಿಂದಾಗಿ ಮಂಗಳವಾರ ಶ್ರೀನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಮತ್ತು ಅಲ್ಲಿಂದ ಹೊರಡಬೇಕಿದ್ದ ಸುಮಾರು 50 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಪ್ರತಿಕೂಲ ಹವಾಮಾನ ಮತ್ತು ಶ್ರೀನಗರ ವಿಮಾನ ನಿಲ್ದಾಣದಲ್ಲಿ ನಿರಂತರ ಹಿಮಪಾತದ ಹಿನ್ನೆಲೆಯಲ್ಲಿ, ವಿಮಾನಯಾನ ಸಂಸ್ಥೆಗಳು ಇಂದು ಹಾರಾಟ ನಡೆಸಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಿವೆ’ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಹಿಮಪಾತದಿಂದಾಗಿ ಇಲ್ಲಿಯವರೆಗೆ ಸುಮಾರು 50 ವಿಮಾನಗಳು(25 ಒಳ ಬರುವ ಮತ್ತು 25 ಹೊರಹೋಗುವ) ರದ್ದಾಗಿವೆ ಎಂದು ವರದಿ ತಿಳಿಸಿದೆ.</p><p>ಶ್ರೀನಗರ ವಿಮಾನ ನಿಲ್ದಾಣಕ್ಕೆ ನಿಗದಿಕ್ಕಿಂತ ಇನ್ನೂ ನಾಲ್ಕು ಹೆಚ್ಚುವರಿ ವಿಮಾನಗಳು ಆಗಮಿಸಲು ವೇಳಾಪಟ್ಟಿ ಇತ್ತು. ಆದರೆ, ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಅವು ಕಾರ್ಯನಿರ್ವಹಿಸುವ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಿಮಾನಗಳ ಹಾರಾಟ ಕುರಿತ ಅಪ್ಡೇಟ್, ಪರ್ಯಾಯ ವ್ಯವಸ್ಥೆಗಳ ಕುರಿತ ಮಾಹಿತಿಗಾಗಿ ವಿಮಾನಯಾನ ಸಂಸ್ಥೆಗಳ ಜೊತೆ ಸಂಪರ್ಕದಲ್ಲಿರುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಿಮಾನಗಳ ರದ್ದತಿಯಿಂದಾಗಿ, ವಾರಾಂತ್ಯ ಮತ್ತು ಗಣರಾಜ್ಯೋತ್ಸವದ ರಜೆಯನ್ನು ಕಣಿವೆಯಲ್ಲಿ ಕಳೆದು ಮನೆಗೆ ಮರಳಬೇಕಿದ್ದ ನೂರಾರು ಪ್ರವಾಸಿಗರು ಶ್ರೀನಗರದಲ್ಲೇ ಸಿಲುಕಿಕೊಂಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಕಾಶ್ಮೀರದಲ್ಲಿ ಹಿಮಪಾತದಿಂದಾಗಿ ಮಂಗಳವಾರ ಶ್ರೀನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಮತ್ತು ಅಲ್ಲಿಂದ ಹೊರಡಬೇಕಿದ್ದ ಸುಮಾರು 50 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಪ್ರತಿಕೂಲ ಹವಾಮಾನ ಮತ್ತು ಶ್ರೀನಗರ ವಿಮಾನ ನಿಲ್ದಾಣದಲ್ಲಿ ನಿರಂತರ ಹಿಮಪಾತದ ಹಿನ್ನೆಲೆಯಲ್ಲಿ, ವಿಮಾನಯಾನ ಸಂಸ್ಥೆಗಳು ಇಂದು ಹಾರಾಟ ನಡೆಸಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಿವೆ’ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಹಿಮಪಾತದಿಂದಾಗಿ ಇಲ್ಲಿಯವರೆಗೆ ಸುಮಾರು 50 ವಿಮಾನಗಳು(25 ಒಳ ಬರುವ ಮತ್ತು 25 ಹೊರಹೋಗುವ) ರದ್ದಾಗಿವೆ ಎಂದು ವರದಿ ತಿಳಿಸಿದೆ.</p><p>ಶ್ರೀನಗರ ವಿಮಾನ ನಿಲ್ದಾಣಕ್ಕೆ ನಿಗದಿಕ್ಕಿಂತ ಇನ್ನೂ ನಾಲ್ಕು ಹೆಚ್ಚುವರಿ ವಿಮಾನಗಳು ಆಗಮಿಸಲು ವೇಳಾಪಟ್ಟಿ ಇತ್ತು. ಆದರೆ, ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಅವು ಕಾರ್ಯನಿರ್ವಹಿಸುವ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಿಮಾನಗಳ ಹಾರಾಟ ಕುರಿತ ಅಪ್ಡೇಟ್, ಪರ್ಯಾಯ ವ್ಯವಸ್ಥೆಗಳ ಕುರಿತ ಮಾಹಿತಿಗಾಗಿ ವಿಮಾನಯಾನ ಸಂಸ್ಥೆಗಳ ಜೊತೆ ಸಂಪರ್ಕದಲ್ಲಿರುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಿಮಾನಗಳ ರದ್ದತಿಯಿಂದಾಗಿ, ವಾರಾಂತ್ಯ ಮತ್ತು ಗಣರಾಜ್ಯೋತ್ಸವದ ರಜೆಯನ್ನು ಕಣಿವೆಯಲ್ಲಿ ಕಳೆದು ಮನೆಗೆ ಮರಳಬೇಕಿದ್ದ ನೂರಾರು ಪ್ರವಾಸಿಗರು ಶ್ರೀನಗರದಲ್ಲೇ ಸಿಲುಕಿಕೊಂಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>