ಶನಿವಾರ ಪ್ರವಾಹ ಭೀತಿ ಉಂಟಾದ ಬಳಿಕ ಸುಮಾರು 200 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಿಂದೋನ್ ನದಿಯ ಅಪಾಯದ ಮಟ್ಟವು 205 ಮೀಟರ್ ಆಗಿದೆ. ಸದ್ಯ ನದಿ ನೀರಿನ ಮಟ್ಟ 200 ಮೀಟರ್ ತಲುಪಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಐದು ಗ್ರಾಮಗಳಿಂದ ಸ್ಥಳಾಂತರಿಸಲಾಗಿರುವ 200 ಜನರಿಗೆ ವಸತಿ, ಆಹಾರ ಮತ್ತು ಆರೋಗ್ಯ, ರಕ್ಷಣೆಯನ್ನು ಒದಗಿಸಲಾಗುತ್ತಿದೆ’ ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಅತುಲ್ ಕುಮಾರ್ ತಿಳಿಸಿದರು.
ಗೌತಮ ಬುದ್ಧ ನಗರವು ಹಿಂದೋನ್ ಮತ್ತು ಯಮುನಾ ನದಿಗಳ ನಡುವೆ ಇದ್ದು, ಇತ್ತೀಚೆಗೆ ಯಮುನಾ ನದಿ ಪ್ರವಾಹಕ್ಕೆ ಸಾಕ್ಷಿಯಾಗಿತ್ತು.