ತ್ರಿಶೂರ್, ಪಥನಂತಿಟ್ಟ, ಎರ್ನಾಕುಲಂ, ಅಲಪುಳ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ದೋಣಿಗಳನ್ನು ಬಳಸಿಕೊಂಡು ಸಂತ್ರಸ್ಥರನ್ನು ರಕ್ಷಣೆ ಮಾಡಲಾಗುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹೆಲಿಕಾಫ್ಟರ್ ಕಾರ್ಯಾಚರಣೆಗೂ ಅಡ್ಡಿಯಾಗುತ್ತಿದೆ. ನೌಕಪಡೆ ರಕ್ಷಣಾ ತಂಡಗಳು ಸೇರಿದಂತೆ 40ಕ್ಕೂ ಎನ್ಡಿಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಅವರು ಮಾಹಿತಿ ನೀಡಿದರು.