ಭ್ರಷ್ಟಾಚಾರ, ನಿರುದ್ಯೋಗ ಮತ್ತು ಹಣದುಬ್ಬರದಿಂದ ಬೇಸತ್ತಿರುವ ಜನರು ದೇಶದಲ್ಲಿ ಬದಲಾವಣೆ ಬಯಸಿದ್ದಾರೆ. ಕೇಂದ್ರ ಸರ್ಕಾರವು ಮಹಿಳೆಯರು ಮತ್ತು ರೈತರ ವಿರುದ್ಧವಾಗಿದ್ದು, ಕೇಂದ್ರದ ಬಿಜೆಪಿ ಆಡಳಿತವನ್ನು ಬದಲಾಯಿಸಲು ಜನರು ಇಚ್ಛಿಸಿದ್ದಾರೆ. ಬಾಂಬೆ ಐಐಟಿಯಂತಹ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನಿಯೋಜನೆ ಮಾಡಿಕೊಳ್ಳಲು ಕಂಪನಿಗಳು ಮುಂದೆ ಬರುತ್ತಿಲ್ಲ. ಉದ್ಯೋಗ ಸೃಷ್ಟಿಯ ಕುರಿತು ಬಿಜೆಪಿ ಸರ್ಕಾರಕ್ಕಿರುವ ನಿರ್ಲಕ್ಷ್ಯವನ್ನು ಇದು ಎತ್ತಿ ತೋರಿಸುತ್ತಿದೆ