ನವದೆಹಲಿ: ಆಡಳಿತಾರೂಢ ಬಿಜೆಪಿ ವಿರುದ್ಧ ಸಂಸತ್ತಿನ ಹೊರಗಡೆಯೂ ಹೋರಾಟ ಮುಂದುವರಿಸುವುದಾಗಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಹೇಳಿದರು.
ಲೋಕಸಭೆಯಿಂದ ಉಚ್ಚಾಟನೆಗೊಂಡ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಚ್ಚಾಟನೆಯಂತಹ ಕ್ರಮಗಳ ಮೂಲಕ ತಾವು ಅದಾನಿ ವಿಚಾರ ಪ್ರಸ್ತಾಪಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.