<p><strong>ನವದೆಹಲಿ:</strong> ಕೇಂದ್ರ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡದಂತೆ ದೇಶಕ್ಕೆ ಭೇಟಿ ನೀಡುವ ಗಣ್ಯರಿಗೆ ಸೂಚನೆ ನೀಡುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಆರೋಪಿಸಿದ್ದಾರೆ. </p><p>ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. </p><p>ದೇಶಕ್ಕೆ ಭೇಟಿ ನೀಡುವ ಗಣ್ಯರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುವುದು ವಾಡಿಕೆಯಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವಾಲಯವು ಈ ಶಿಷ್ಟಾಚಾರವನ್ನು ಪಾಲಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. </p><p>ಈ ಸಂಪ್ರದಾಯವು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್ ಸಿಂಗ್ ಅವರ ಅಧಿಕಾರದ ಅವಧಿಯಲ್ಲಿ ನಡೆಯುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿದೇಶಿ ಗಣ್ಯರು ದೇಶಕ್ಕೆ ಬಂದು ಹೋಗುವಾಗ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗದಂತೆ ಸರ್ಕಾರವೇ ಸೂಚಿಸುತ್ತದೆ ಎಂದು ಹೇಳಿದ್ದಾರೆ. </p><p>ಅದು ಅವರ ನೀತಿಯಾಗಿದೆ. ನಾನು ವಿದೇಶಕ್ಕೆ ಹೋಗುವಾಗ ಅಥವಾ ವಿದೇಶದ ಗಣ್ಯರು ಇಲ್ಲಿಗೆ ಬರುವಾಗ ಅದನ್ನೇ ಮಾಡುತ್ತಾರೆ. ನಿಮ್ಮನ್ನು ಭೇಟಿಯಾಗದಂತೆ ಸರ್ಕಾರದ ಸೂಚನೆಯಿದೆ ಎಂಬ ಸಂದೇಶ ನನಗೆ ಬರುತ್ತದೆ ಎಂದು ರಾಹುಲ್ ಹೇಳಿದ್ದಾರೆ. </p><p>ವಿದೇಶದ ಗಣ್ಯರು ವಿರೋಧ ಪಕ್ಷದ ನಾಯಕರೊಂದಿಗಿನ ಸಭೆಯ ಮಹತ್ವವನ್ನು ಒತ್ತಿ ಹೇಳಿರುವ ರಾಹುಲ್, ನಾವು ಕೂಡ ದೇಶವನ್ನು ಪ್ರತಿನಿಧಿಸುತ್ತೇವೆ ಎಂದು ಹೇಳಿದ್ದಾರೆ. </p><p>ರಾಹುಲ್ ಹೇಳಿಕೆಯನ್ನು ಬೆಂಬಲಿಸಿರುವ ಸೋದರಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. ಇದೇ ಕಾರಣಕ್ಕಾಗಿ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ ಎಂದು ಹೇಳಿದ್ದಾರೆ. </p>.ಸಂಸತ್ತಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್ ಮಾಡಿದ ರಾಹುಲ್ ಗಾಂಧಿ.‘ಬೌ ಬೌ!’: ಹಕ್ಕುಚ್ಯುತಿ ಮಂಡನೆ ವರದಿಗೆ ಸಂಸದೆ ರೇಣುಕಾ ಚೌಧರಿ ಪ್ರತಿಕ್ರಿಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡದಂತೆ ದೇಶಕ್ಕೆ ಭೇಟಿ ನೀಡುವ ಗಣ್ಯರಿಗೆ ಸೂಚನೆ ನೀಡುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಆರೋಪಿಸಿದ್ದಾರೆ. </p><p>ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. </p><p>ದೇಶಕ್ಕೆ ಭೇಟಿ ನೀಡುವ ಗಣ್ಯರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುವುದು ವಾಡಿಕೆಯಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವಾಲಯವು ಈ ಶಿಷ್ಟಾಚಾರವನ್ನು ಪಾಲಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. </p><p>ಈ ಸಂಪ್ರದಾಯವು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್ ಸಿಂಗ್ ಅವರ ಅಧಿಕಾರದ ಅವಧಿಯಲ್ಲಿ ನಡೆಯುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿದೇಶಿ ಗಣ್ಯರು ದೇಶಕ್ಕೆ ಬಂದು ಹೋಗುವಾಗ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗದಂತೆ ಸರ್ಕಾರವೇ ಸೂಚಿಸುತ್ತದೆ ಎಂದು ಹೇಳಿದ್ದಾರೆ. </p><p>ಅದು ಅವರ ನೀತಿಯಾಗಿದೆ. ನಾನು ವಿದೇಶಕ್ಕೆ ಹೋಗುವಾಗ ಅಥವಾ ವಿದೇಶದ ಗಣ್ಯರು ಇಲ್ಲಿಗೆ ಬರುವಾಗ ಅದನ್ನೇ ಮಾಡುತ್ತಾರೆ. ನಿಮ್ಮನ್ನು ಭೇಟಿಯಾಗದಂತೆ ಸರ್ಕಾರದ ಸೂಚನೆಯಿದೆ ಎಂಬ ಸಂದೇಶ ನನಗೆ ಬರುತ್ತದೆ ಎಂದು ರಾಹುಲ್ ಹೇಳಿದ್ದಾರೆ. </p><p>ವಿದೇಶದ ಗಣ್ಯರು ವಿರೋಧ ಪಕ್ಷದ ನಾಯಕರೊಂದಿಗಿನ ಸಭೆಯ ಮಹತ್ವವನ್ನು ಒತ್ತಿ ಹೇಳಿರುವ ರಾಹುಲ್, ನಾವು ಕೂಡ ದೇಶವನ್ನು ಪ್ರತಿನಿಧಿಸುತ್ತೇವೆ ಎಂದು ಹೇಳಿದ್ದಾರೆ. </p><p>ರಾಹುಲ್ ಹೇಳಿಕೆಯನ್ನು ಬೆಂಬಲಿಸಿರುವ ಸೋದರಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. ಇದೇ ಕಾರಣಕ್ಕಾಗಿ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ ಎಂದು ಹೇಳಿದ್ದಾರೆ. </p>.ಸಂಸತ್ತಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್ ಮಾಡಿದ ರಾಹುಲ್ ಗಾಂಧಿ.‘ಬೌ ಬೌ!’: ಹಕ್ಕುಚ್ಯುತಿ ಮಂಡನೆ ವರದಿಗೆ ಸಂಸದೆ ರೇಣುಕಾ ಚೌಧರಿ ಪ್ರತಿಕ್ರಿಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>