<p><strong>ನವದೆಹಲಿ:</strong> ಭಾರತಕ್ಕೆ ಭೇಟಿ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ತಮ್ಮ ಸಭೆ ಆಯೋಜಿಸಲು ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಕಿಡಿ ಕಾರಿದ್ದಾರೆ.</p>. <p>‘ಇಂಥ ನಡೆಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕಿರುವ ಅಭದ್ರತೆಯನ್ನು ತೋರಿಸುತ್ತದೆ’ ಎಂದೂ ಅವರು ಚಾಟಿ ಬೀಸಿದ್ದಾರೆ.</p>. <p>ಪುಟಿನ್ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಗುರುವಾರ ಇಲ್ಲಿಗೆ ಬಂದಿಳಿದಿದ್ದಾರೆ.</p>. <p>‘ಭಾರತಕ್ಕೆ ಭೇಟಿ ನೀಡುವ ವಿದೇಶಿ ಗಣ್ಯರ ಜೊತೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಭೆ ನಡೆಸುವುದು ಬಹು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಪ್ರಧಾನಿ ಮೋದಿ ಹಾಗೂ ವಿದೇಶಾಂಗ ಸಚಿವಾಲಯ ಈ ಸಂಪ್ರದಾಯವನ್ನು ಪಾಲನೆ ಮಾಡುತ್ತಿಲ್ಲ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>. <p>‘ಇತರ ದೇಶಗಳ ನಾಯಕರು ಭಾರತಕ್ಕೆ ಬಂದಾಗ ಇಲ್ಲಿನ ಲೋಕಸಭೆ ವಿಪಕ್ಷ ನಾಯಕನೊಂದಿಗೆ ಸಭೆ ನಡೆಸುವ ಸಂಪ್ರದಾಯ ವನ್ನು ಈ ಹಿಂದಿನ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಪಾಲಿಸಲಾಗುತ್ತಿತ್ತು’ ಎಂದೂ ಹೇಳಿದರು.</p>. <p>ಸಂಸತ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿದೇಶಿ ಗಣ್ಯರು ಭಾರತಕ್ಕೆ ನೀಡಿದ ಸಂದರ್ಭದಲ್ಲಿ ಅಥವಾ ನಾನು ವಿದೇಶ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ನನ್ನನ್ನು ಭೇಟಿ ಮಾಡದಂತೆ ಕೇಂದ್ರ ಸರ್ಕಾರ ಇತರ ದೇಶಗಳಿಗೆ ಹೇಳುತ್ತಿದೆ’ ಎಂದರು.</p>. <p>‘ನಿಮ್ಮನ್ನು ಭೇಟಿ ಮಾಡಬಾರದು ಎಂಬುದಾಗಿ ಭಾರತ ಸರ್ಕಾರ ನಮಗೆ ಹೇಳಿದೆ ಎಂದು ವಿವಿಧ ದೇಶಗಳು ನನಗೆ ಮಾಹಿತಿ ನೀಡಿವೆ. ಇದೇ ಈ ಸರ್ಕಾರದ ನೀತಿಯಾಗಿದ್ದು, ಅದನ್ನು ಚಾಚೂತಪ್ಪದೇ ಪಾಲಿಸಲಾಗುತ್ತಿದೆ’ ಎಂದು ಟೀಕಿಸಿದರು.</p>. <p>ಪುಟಿನ್ ಭೇಟಿ ಕುರಿತ ಪ್ರಶ್ನೆಗೆ,‘ಸರ್ಕಾರ ಮಾತ್ರವಲ್ಲ, ನಾವು ಕೂಡ ಭಾರತವನ್ನು ಪ್ರತಿನಿಧಿಸುತ್ತೇವೆ.<br>ಆದರೆ, ವಿರೋಧ ಪಕ್ಷಗಳ ನಾಯಕರು ವಿದೇಶಿ ಗಣ್ಯರನ್ನು ಭೇಟಿ ಮಾಡುವುದನ್ನು ಈ ಸರ್ಕಾರ ಬಯಸುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>. <p>‘ಸರ್ಕಾರ ಏಕೆ ಹೀಗೆ ನಡೆದು ಕೊಳ್ಳುತ್ತಿದೆ’ ಎಂಬ ಮತ್ತೊಂದು ಪ್ರಶ್ನೆಗೆ, ‘ಇದು ಅವರಲ್ಲಿನ (ಪ್ರಧಾನಿ ಮೋದಿ) ಅಭದ್ರತೆ ಭಾವನೆಯನ್ನು ತೋರಿಸುತ್ತದೆ’ ಎಂದು ಉತ್ತರಿಸಿದರು.</p>.<div><blockquote>ಪ್ರತಿ ಪ್ರಜಾಪ್ರಭುತ್ವ ವ್ಯವಸ್ಥೆಯೂ ಶಿಷ್ಟಾಚಾರಗಳನ್ನು ಹೊಂದಿರುತ್ತದೆ. ಆದರೆ, ಶಿಷ್ಟಾಚಾರ ಉಲ್ಲಂಘನೆ ಮಾಡುವುದೇ ಈ ಸರ್ಕಾರದ ನೀತಿಯಾಗಿದೆ. ಭಿನ್ನ ದನಿಗೆ ಈ ಸರ್ಕಾರ ಅವಕಾಶ ನೀಡುವುದಿಲ್ಲ </blockquote><span class="attribution">ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಸಂಸದೆ</span></div>.ಸಂಸತ್ತಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್ ಮಾಡಿದ ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತಕ್ಕೆ ಭೇಟಿ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ತಮ್ಮ ಸಭೆ ಆಯೋಜಿಸಲು ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಕಿಡಿ ಕಾರಿದ್ದಾರೆ.</p>. <p>‘ಇಂಥ ನಡೆಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕಿರುವ ಅಭದ್ರತೆಯನ್ನು ತೋರಿಸುತ್ತದೆ’ ಎಂದೂ ಅವರು ಚಾಟಿ ಬೀಸಿದ್ದಾರೆ.</p>. <p>ಪುಟಿನ್ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಗುರುವಾರ ಇಲ್ಲಿಗೆ ಬಂದಿಳಿದಿದ್ದಾರೆ.</p>. <p>‘ಭಾರತಕ್ಕೆ ಭೇಟಿ ನೀಡುವ ವಿದೇಶಿ ಗಣ್ಯರ ಜೊತೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಭೆ ನಡೆಸುವುದು ಬಹು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಪ್ರಧಾನಿ ಮೋದಿ ಹಾಗೂ ವಿದೇಶಾಂಗ ಸಚಿವಾಲಯ ಈ ಸಂಪ್ರದಾಯವನ್ನು ಪಾಲನೆ ಮಾಡುತ್ತಿಲ್ಲ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>. <p>‘ಇತರ ದೇಶಗಳ ನಾಯಕರು ಭಾರತಕ್ಕೆ ಬಂದಾಗ ಇಲ್ಲಿನ ಲೋಕಸಭೆ ವಿಪಕ್ಷ ನಾಯಕನೊಂದಿಗೆ ಸಭೆ ನಡೆಸುವ ಸಂಪ್ರದಾಯ ವನ್ನು ಈ ಹಿಂದಿನ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಪಾಲಿಸಲಾಗುತ್ತಿತ್ತು’ ಎಂದೂ ಹೇಳಿದರು.</p>. <p>ಸಂಸತ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿದೇಶಿ ಗಣ್ಯರು ಭಾರತಕ್ಕೆ ನೀಡಿದ ಸಂದರ್ಭದಲ್ಲಿ ಅಥವಾ ನಾನು ವಿದೇಶ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ನನ್ನನ್ನು ಭೇಟಿ ಮಾಡದಂತೆ ಕೇಂದ್ರ ಸರ್ಕಾರ ಇತರ ದೇಶಗಳಿಗೆ ಹೇಳುತ್ತಿದೆ’ ಎಂದರು.</p>. <p>‘ನಿಮ್ಮನ್ನು ಭೇಟಿ ಮಾಡಬಾರದು ಎಂಬುದಾಗಿ ಭಾರತ ಸರ್ಕಾರ ನಮಗೆ ಹೇಳಿದೆ ಎಂದು ವಿವಿಧ ದೇಶಗಳು ನನಗೆ ಮಾಹಿತಿ ನೀಡಿವೆ. ಇದೇ ಈ ಸರ್ಕಾರದ ನೀತಿಯಾಗಿದ್ದು, ಅದನ್ನು ಚಾಚೂತಪ್ಪದೇ ಪಾಲಿಸಲಾಗುತ್ತಿದೆ’ ಎಂದು ಟೀಕಿಸಿದರು.</p>. <p>ಪುಟಿನ್ ಭೇಟಿ ಕುರಿತ ಪ್ರಶ್ನೆಗೆ,‘ಸರ್ಕಾರ ಮಾತ್ರವಲ್ಲ, ನಾವು ಕೂಡ ಭಾರತವನ್ನು ಪ್ರತಿನಿಧಿಸುತ್ತೇವೆ.<br>ಆದರೆ, ವಿರೋಧ ಪಕ್ಷಗಳ ನಾಯಕರು ವಿದೇಶಿ ಗಣ್ಯರನ್ನು ಭೇಟಿ ಮಾಡುವುದನ್ನು ಈ ಸರ್ಕಾರ ಬಯಸುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>. <p>‘ಸರ್ಕಾರ ಏಕೆ ಹೀಗೆ ನಡೆದು ಕೊಳ್ಳುತ್ತಿದೆ’ ಎಂಬ ಮತ್ತೊಂದು ಪ್ರಶ್ನೆಗೆ, ‘ಇದು ಅವರಲ್ಲಿನ (ಪ್ರಧಾನಿ ಮೋದಿ) ಅಭದ್ರತೆ ಭಾವನೆಯನ್ನು ತೋರಿಸುತ್ತದೆ’ ಎಂದು ಉತ್ತರಿಸಿದರು.</p>.<div><blockquote>ಪ್ರತಿ ಪ್ರಜಾಪ್ರಭುತ್ವ ವ್ಯವಸ್ಥೆಯೂ ಶಿಷ್ಟಾಚಾರಗಳನ್ನು ಹೊಂದಿರುತ್ತದೆ. ಆದರೆ, ಶಿಷ್ಟಾಚಾರ ಉಲ್ಲಂಘನೆ ಮಾಡುವುದೇ ಈ ಸರ್ಕಾರದ ನೀತಿಯಾಗಿದೆ. ಭಿನ್ನ ದನಿಗೆ ಈ ಸರ್ಕಾರ ಅವಕಾಶ ನೀಡುವುದಿಲ್ಲ </blockquote><span class="attribution">ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಸಂಸದೆ</span></div>.ಸಂಸತ್ತಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್ ಮಾಡಿದ ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>