<p><strong>ನವದೆಹಲಿ:</strong> ಮೋದಿ ಸರ್ಕಾರ ಪರಿಸರ ಸಂರಕ್ಷಣೆ ಸಂಬಂಧಿಸಿದ ವಿಷಯದಲ್ಲಿ ಸಿನಿಕತನದ ಕುತಂತ್ರ ಪ್ರದರ್ಶಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಆರೋಪಿಸಿದ್ದಾರೆ.</p>.<p>ಸರ್ಕಾರವು 1980ರ ಅರಣ್ಯ (ಸಂರಕ್ಷಣಾ) ಕಾಯ್ದೆ ಮತ್ತು ಅರಣ್ಯ ಸಂರಕ್ಷಣಾ ನಿಯಮಗಳ (2022) ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<p>‘ಅರಾವಳಿ ಶ್ರೇಣಿ ವ್ಯಾಪ್ತಿಯಲ್ಲಿ 100 ಮೀಟರ್ಗಿಂತ ಕಡಿಮೆ ಎತ್ತರದಲ್ಲಿರುವ ಬೆಟ್ಟಗಳಲ್ಲಿ ಗಣಿಗಾರಿಕೆಗೆ ಯಾವುದೇ ಆಕ್ಷೇಪವಿರುವುದಿಲ್ಲ’ ಎಂದು ತಿದ್ದುಪಡಿಯಲ್ಲಿದೆ. ಸರ್ಕಾರದ ಈ ನಿರ್ಧಾರದಿಂದ ಬೆಟ್ಟಗಳಲ್ಲಿನ ಅಕ್ರಮ ಗಣಿಗಾರಿಕೆಗೆ ಮುಕ್ತ ಆಹ್ವಾನ ನೀಡಿದಂತಾಗಿದೆ’ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ. </p>.<p>‘ಅರಾವಳಿ ಶ್ರೇಣಿಯು ಗುಜರಾತ್ನಿಂದ ರಾಜಸ್ತಾನದ ಮೂಲಕ ಹರಿಯಾಣದವರೆಗೆ ವ್ಯಾಪಿಸಿದೆ. ಇದು ಭಾರತದ ಭೌಗೋಳಿಕ ಮತ್ತು ಇತಿಹಾಸದಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಅಕ್ರಮ ಗಣಿಗಾರಿಕೆಯಿಂದ ಈಗಾಗಲೇ ನಾಶವಾಗಿರುವ ಈ ಬೆಟ್ಟಗಳ ಮರಣಶಾಸನಕ್ಕೆ ಸಹಿ ಹಾಕಲು ಮೋದಿ ಸರ್ಕಾರ ಮುಂದಾಗಿದೆ’ ಎಂದು ಅವರು ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮೋದಿ ಸರ್ಕಾರ ಪರಿಸರ ಸಂರಕ್ಷಣೆ ಸಂಬಂಧಿಸಿದ ವಿಷಯದಲ್ಲಿ ಸಿನಿಕತನದ ಕುತಂತ್ರ ಪ್ರದರ್ಶಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಆರೋಪಿಸಿದ್ದಾರೆ.</p>.<p>ಸರ್ಕಾರವು 1980ರ ಅರಣ್ಯ (ಸಂರಕ್ಷಣಾ) ಕಾಯ್ದೆ ಮತ್ತು ಅರಣ್ಯ ಸಂರಕ್ಷಣಾ ನಿಯಮಗಳ (2022) ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<p>‘ಅರಾವಳಿ ಶ್ರೇಣಿ ವ್ಯಾಪ್ತಿಯಲ್ಲಿ 100 ಮೀಟರ್ಗಿಂತ ಕಡಿಮೆ ಎತ್ತರದಲ್ಲಿರುವ ಬೆಟ್ಟಗಳಲ್ಲಿ ಗಣಿಗಾರಿಕೆಗೆ ಯಾವುದೇ ಆಕ್ಷೇಪವಿರುವುದಿಲ್ಲ’ ಎಂದು ತಿದ್ದುಪಡಿಯಲ್ಲಿದೆ. ಸರ್ಕಾರದ ಈ ನಿರ್ಧಾರದಿಂದ ಬೆಟ್ಟಗಳಲ್ಲಿನ ಅಕ್ರಮ ಗಣಿಗಾರಿಕೆಗೆ ಮುಕ್ತ ಆಹ್ವಾನ ನೀಡಿದಂತಾಗಿದೆ’ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ. </p>.<p>‘ಅರಾವಳಿ ಶ್ರೇಣಿಯು ಗುಜರಾತ್ನಿಂದ ರಾಜಸ್ತಾನದ ಮೂಲಕ ಹರಿಯಾಣದವರೆಗೆ ವ್ಯಾಪಿಸಿದೆ. ಇದು ಭಾರತದ ಭೌಗೋಳಿಕ ಮತ್ತು ಇತಿಹಾಸದಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಅಕ್ರಮ ಗಣಿಗಾರಿಕೆಯಿಂದ ಈಗಾಗಲೇ ನಾಶವಾಗಿರುವ ಈ ಬೆಟ್ಟಗಳ ಮರಣಶಾಸನಕ್ಕೆ ಸಹಿ ಹಾಕಲು ಮೋದಿ ಸರ್ಕಾರ ಮುಂದಾಗಿದೆ’ ಎಂದು ಅವರು ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>