<p><strong>ನವದೆಹಲಿ:</strong> ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ರಾಜ್ಯದ ಮಾಜಿ ಮುಖ್ಯಮಂತ್ರಿ ಎನ್.ಡಿ. ತಿವಾರಿ ಗುರುವಾರ ಮಧ್ಯಾಹ್ನನಿಧನರಾಗಿದ್ದಾರೆ.ಅವರಿಗೆ 93 ವರ್ಷ ವಯಸ್ಸಾಗಿತ್ತು.</p>.<p>ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ತಿವಾರಿ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ 2.30ಕ್ಕೆ ತಿವಾರಿ ನಿಧನರಾದರು ಎಂದುಮ್ಯಾಕ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.</p>.<p>ತಿವಾರಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು. ಉತ್ತರ ಪ್ರದೇಶದಲ್ಲಿ ಎರಡು ಸಲ ಹಾಗೂ ಉತ್ತರಾಖಂಡದಲ್ಲಿ ಒಂದು ಬಾರಿ ಮುಖ್ಯಮಂತ್ರಿಯಾಗಿದ್ದರು. ಅವಿಭಜಿತ ಆಂಧ್ರಪ್ರದೇಶದ ರಾಜ್ಯಪಾಲರಾಗಿ ಎರಡು ವರ್ಷ ಸೇವೆ ಸಲ್ಲಿಸಿದ್ದರು. ಲೈಂಗಿಕ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 2009ರಲ್ಲಿ ರಾಜ್ಯಪಾಲರ ಹುದ್ದೆಗೆ ರಾಜಿನಾಮೆ ನೀಡಿದ್ದರು.</p>.<p>1990ರಲ್ಲಿ ಪ್ರಧಾನಿ ಹುದ್ದೆಯ ಅಭ್ಯರ್ಥಿಗಳ ಸಾಲಿನಲ್ಲಿತಿವಾರಿ ಅವರ ಹೆಸರು ಕೂಡ ಕೇಳಿಬಂದಿತ್ತು. 1994ರಲ್ಲಿ ಕಾಂಗ್ರೆಸ್ ತೊರೆದು ಅರ್ಜುನ್ ಸಿಂಗ್ ಜೊತೆಗೂಡಿ ಪ್ರಾದೇಶಿಕ ಪಕ್ಷವನ್ನು ಸ್ಥಾಪನೆ ಮಾಡಿದ್ದರು. ನಂತರ ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾದಾಗ ಮರಳಿ ಕಾಂಗ್ರೆಸ್ ಪಕ್ಷ ಸೇರಿದ್ದರು.</p>.<p>ತಿವಾರಿ ನಿಧನಕ್ಕೆ ದೇಶದ ಗಣ್ಯರು ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ರಾಜ್ಯದ ಮಾಜಿ ಮುಖ್ಯಮಂತ್ರಿ ಎನ್.ಡಿ. ತಿವಾರಿ ಗುರುವಾರ ಮಧ್ಯಾಹ್ನನಿಧನರಾಗಿದ್ದಾರೆ.ಅವರಿಗೆ 93 ವರ್ಷ ವಯಸ್ಸಾಗಿತ್ತು.</p>.<p>ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ತಿವಾರಿ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ 2.30ಕ್ಕೆ ತಿವಾರಿ ನಿಧನರಾದರು ಎಂದುಮ್ಯಾಕ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.</p>.<p>ತಿವಾರಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು. ಉತ್ತರ ಪ್ರದೇಶದಲ್ಲಿ ಎರಡು ಸಲ ಹಾಗೂ ಉತ್ತರಾಖಂಡದಲ್ಲಿ ಒಂದು ಬಾರಿ ಮುಖ್ಯಮಂತ್ರಿಯಾಗಿದ್ದರು. ಅವಿಭಜಿತ ಆಂಧ್ರಪ್ರದೇಶದ ರಾಜ್ಯಪಾಲರಾಗಿ ಎರಡು ವರ್ಷ ಸೇವೆ ಸಲ್ಲಿಸಿದ್ದರು. ಲೈಂಗಿಕ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 2009ರಲ್ಲಿ ರಾಜ್ಯಪಾಲರ ಹುದ್ದೆಗೆ ರಾಜಿನಾಮೆ ನೀಡಿದ್ದರು.</p>.<p>1990ರಲ್ಲಿ ಪ್ರಧಾನಿ ಹುದ್ದೆಯ ಅಭ್ಯರ್ಥಿಗಳ ಸಾಲಿನಲ್ಲಿತಿವಾರಿ ಅವರ ಹೆಸರು ಕೂಡ ಕೇಳಿಬಂದಿತ್ತು. 1994ರಲ್ಲಿ ಕಾಂಗ್ರೆಸ್ ತೊರೆದು ಅರ್ಜುನ್ ಸಿಂಗ್ ಜೊತೆಗೂಡಿ ಪ್ರಾದೇಶಿಕ ಪಕ್ಷವನ್ನು ಸ್ಥಾಪನೆ ಮಾಡಿದ್ದರು. ನಂತರ ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾದಾಗ ಮರಳಿ ಕಾಂಗ್ರೆಸ್ ಪಕ್ಷ ಸೇರಿದ್ದರು.</p>.<p>ತಿವಾರಿ ನಿಧನಕ್ಕೆ ದೇಶದ ಗಣ್ಯರು ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>