<p><strong>ಹೈದರಾಬಾದ್:</strong> ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಮಲ್ಲು ರವಿ ಅವರನ್ನು ದೆಹಲಿಯಲ್ಲಿ ತೆಲಂಗಾಣ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ನೇಮಿಸಲಾಗಿದೆ.</p><p>ಅವಿಭಜಿತ ಆಂಧ್ರಪ್ರದೇಶದಲ್ಲಿ ದಿ.ವೈ.ಎಸ್.ರಾಜಶೇಖರ ರೆಡ್ಡಿ ಮುಖ್ಯಮಂತ್ರಿಯಾಗಿದ್ದಾಗ ರವಿ ಅವರು ಇದೇ ಹುದ್ದೆಯನ್ನು ಅಲಂಕರಿಸಿದ್ದರು.</p><p>ಕಾಂಗ್ರೆಸ್ ಮುಖಂಡರಾದ ವೆಂ. ನರೇಂದ್ರ ರೆಡ್ಡಿ, ಮೊಹಮ್ಮದ್ ಅಲಿ ಶಬ್ಬೀರ್ ಮತ್ತು ಹರಕರ ವೇಣುಗೋಪಾಲ್ ರಾವ್ ಅವರನ್ನು ವಿವಿಧ ಇಲಾಖೆಗಳಲ್ಲಿ ಸಲಹೆಗಾರರನ್ನಾಗಿ ನೇಮಿಸಲಾಗಿದೆ.</p><p>ತೆಲಂಗಾಣ ಮುಖ್ಯ ಕಾರ್ಯದರ್ಶಿ ಎ. ಶಾಂತಿ ಕುಮಾರಿ ಅವರು ಜನವರಿ 20ರಂದು ಸರ್ಕಾರಿ ಆದೇಶ ಹೊರಡಿಸಿದ್ದರು. ನೇಮಕಾತಿಗಳ ಕುರಿತು ಭಾನುವಾರ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಲಾಗಿದೆ.</p><p>ಸಿಎಂ ರೇವಂತ್ ರೆಡ್ಡಿ ಅವರ ನಿಕಟವರ್ತಿ ವೆಂ.ನರೇಂದ್ರ ರೆಡ್ಡಿ ಅವರನ್ನು ಮುಖ್ಯಮಂತ್ರಿ ಸಾರ್ವಜನಿಕ ವ್ಯವಹಾರಗಳ ಸಲಹೆಗಾರರನ್ನಾಗಿ, ಮೊಹಮ್ಮದ್ ಅಲಿ ಶಬ್ಬೀರ್ ಅವರನ್ನು ಎಸ್ಸಿ, ಎಸ್ಟಿ, ಒಬಿಸಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಸಲಹೆಗಾರರಾಗಿ ನೇಮಿಸಲಾಗಿದೆ.</p><p>ಶಬ್ಬೀರ್ ಅವರು ಈ ಹಿಂದೆ ಸಚಿವರಾಗಿ ಹಾಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ.</p> <p>ವೇಣುಗೋಪಾಲ್ ರಾವ್ ಅವರನ್ನು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಸಲಹೆಗಾರರಾಗಿ ಆಯ್ಕೆ ಮಾಡಲಾಗಿದೆ. </p><p>ನರೇಂದ್ರ ರೆಡ್ಡಿ, ಶಬ್ಬೀರ್ ಮತ್ತು ವೇಣುಗೋಪಾಲ್ ರಾವ್ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಮಲ್ಲು ರವಿ ಅವರನ್ನು ದೆಹಲಿಯಲ್ಲಿ ತೆಲಂಗಾಣ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ನೇಮಿಸಲಾಗಿದೆ.</p><p>ಅವಿಭಜಿತ ಆಂಧ್ರಪ್ರದೇಶದಲ್ಲಿ ದಿ.ವೈ.ಎಸ್.ರಾಜಶೇಖರ ರೆಡ್ಡಿ ಮುಖ್ಯಮಂತ್ರಿಯಾಗಿದ್ದಾಗ ರವಿ ಅವರು ಇದೇ ಹುದ್ದೆಯನ್ನು ಅಲಂಕರಿಸಿದ್ದರು.</p><p>ಕಾಂಗ್ರೆಸ್ ಮುಖಂಡರಾದ ವೆಂ. ನರೇಂದ್ರ ರೆಡ್ಡಿ, ಮೊಹಮ್ಮದ್ ಅಲಿ ಶಬ್ಬೀರ್ ಮತ್ತು ಹರಕರ ವೇಣುಗೋಪಾಲ್ ರಾವ್ ಅವರನ್ನು ವಿವಿಧ ಇಲಾಖೆಗಳಲ್ಲಿ ಸಲಹೆಗಾರರನ್ನಾಗಿ ನೇಮಿಸಲಾಗಿದೆ.</p><p>ತೆಲಂಗಾಣ ಮುಖ್ಯ ಕಾರ್ಯದರ್ಶಿ ಎ. ಶಾಂತಿ ಕುಮಾರಿ ಅವರು ಜನವರಿ 20ರಂದು ಸರ್ಕಾರಿ ಆದೇಶ ಹೊರಡಿಸಿದ್ದರು. ನೇಮಕಾತಿಗಳ ಕುರಿತು ಭಾನುವಾರ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಲಾಗಿದೆ.</p><p>ಸಿಎಂ ರೇವಂತ್ ರೆಡ್ಡಿ ಅವರ ನಿಕಟವರ್ತಿ ವೆಂ.ನರೇಂದ್ರ ರೆಡ್ಡಿ ಅವರನ್ನು ಮುಖ್ಯಮಂತ್ರಿ ಸಾರ್ವಜನಿಕ ವ್ಯವಹಾರಗಳ ಸಲಹೆಗಾರರನ್ನಾಗಿ, ಮೊಹಮ್ಮದ್ ಅಲಿ ಶಬ್ಬೀರ್ ಅವರನ್ನು ಎಸ್ಸಿ, ಎಸ್ಟಿ, ಒಬಿಸಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಸಲಹೆಗಾರರಾಗಿ ನೇಮಿಸಲಾಗಿದೆ.</p><p>ಶಬ್ಬೀರ್ ಅವರು ಈ ಹಿಂದೆ ಸಚಿವರಾಗಿ ಹಾಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ.</p> <p>ವೇಣುಗೋಪಾಲ್ ರಾವ್ ಅವರನ್ನು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಸಲಹೆಗಾರರಾಗಿ ಆಯ್ಕೆ ಮಾಡಲಾಗಿದೆ. </p><p>ನರೇಂದ್ರ ರೆಡ್ಡಿ, ಶಬ್ಬೀರ್ ಮತ್ತು ವೇಣುಗೋಪಾಲ್ ರಾವ್ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>