<p><strong>ಜಮ್ಮು</strong>: ಪಿಡಿಪಿ ಮುಖ್ಯಸ್ಥೆ ಹಾಗೂ ಜಮ್ಮು–ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮುಫ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>ಅಗ್ನಿ ಅವಘಡದ ಸಂತ್ರಸ್ತರನ್ನು ಭೇಟಿ ಮಾಡಲು ಖಾನಾಬಲ್ಗೆ ತೆರಳುತ್ತಿದ್ದ ವೇಳೆ ಅನಂತ್ನಾಗ್ ಜಿಲ್ಲೆಯ ಸಂಗಂ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.</p><p>ಈ ಬಗ್ಗೆ ಮಾಹಿತಿ ನೀಡಿರುವ ಪಿಡಿಪಿ ಮಾಧ್ಯಮ ವಿಭಾಗ, ‘ಅನಂತ್ನಾಗ್ ಜಿಲ್ಲೆಗೆ ತೆರಳುತ್ತಿರುವ ವೇಳೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಪಿಡಿಪಿ ಮುಖ್ಯಸ್ಥೆ ಮತ್ತು ಅವರ ಭದ್ರತಾ ಅಧಿಕಾರಿಗಳು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ’ ಎಂದು ತಿಳಿಸಿದೆ.</p><p>ಅಪಘಾತದಲ್ಲಿ ಮುಫ್ತಿ ಅವರಿಗೆ ಸೇರಿದ ಸ್ಕಾರ್ಪಿಯೊ ಕಾರಿನ ಮುಂದಿನ ಭಾಗ ನುಜ್ಜುಗುಜ್ಜಾಗಿರುವುದು ದೃಶ್ಯದಲ್ಲಿ ಕಂಡುಬಂದಿದೆ. ಅಪಘಾತದ ಬೆನ್ನಲ್ಲೇ ಸಂತ್ರಸ್ತರನ್ನು ಭೇಟಿಯಾಗಲು ಬೇರೊಂದು ಕಾರಿನಲ್ಲಿ ಮುಫ್ತಿ ತೆರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಪಿಡಿಪಿ ಮುಖ್ಯಸ್ಥೆ ಹಾಗೂ ಜಮ್ಮು–ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮುಫ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>ಅಗ್ನಿ ಅವಘಡದ ಸಂತ್ರಸ್ತರನ್ನು ಭೇಟಿ ಮಾಡಲು ಖಾನಾಬಲ್ಗೆ ತೆರಳುತ್ತಿದ್ದ ವೇಳೆ ಅನಂತ್ನಾಗ್ ಜಿಲ್ಲೆಯ ಸಂಗಂ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.</p><p>ಈ ಬಗ್ಗೆ ಮಾಹಿತಿ ನೀಡಿರುವ ಪಿಡಿಪಿ ಮಾಧ್ಯಮ ವಿಭಾಗ, ‘ಅನಂತ್ನಾಗ್ ಜಿಲ್ಲೆಗೆ ತೆರಳುತ್ತಿರುವ ವೇಳೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಪಿಡಿಪಿ ಮುಖ್ಯಸ್ಥೆ ಮತ್ತು ಅವರ ಭದ್ರತಾ ಅಧಿಕಾರಿಗಳು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ’ ಎಂದು ತಿಳಿಸಿದೆ.</p><p>ಅಪಘಾತದಲ್ಲಿ ಮುಫ್ತಿ ಅವರಿಗೆ ಸೇರಿದ ಸ್ಕಾರ್ಪಿಯೊ ಕಾರಿನ ಮುಂದಿನ ಭಾಗ ನುಜ್ಜುಗುಜ್ಜಾಗಿರುವುದು ದೃಶ್ಯದಲ್ಲಿ ಕಂಡುಬಂದಿದೆ. ಅಪಘಾತದ ಬೆನ್ನಲ್ಲೇ ಸಂತ್ರಸ್ತರನ್ನು ಭೇಟಿಯಾಗಲು ಬೇರೊಂದು ಕಾರಿನಲ್ಲಿ ಮುಫ್ತಿ ತೆರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>