ಮುಂಬೈ (ಪಿಟಿಐ): ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿಬಂಧಿತರಾಗಿದ್ದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಜಾಮೀನಿನ ಮೇಲೆಬುಧವಾರ ಸಂಜೆ ಇಲ್ಲಿನ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆ ಮಾಡಲಾಯಿತು.
ಅಜಿತ್ ಪವಾರ್ ಸೇರಿದಂತೆ ಎನ್ಸಿಪಿಯ ಹಿರಿಯ ನಾಯಕರು ಅವರನ್ನು ಜೈಲಿನ ಹೊರಗೆ ಬರಮಾಡಿಕೊಂಡರು.
ನಂತರ ಪ್ರತಿಕ್ರಿಯಿಸಿದ ದೇಶಮುಖ್, ‘ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ...ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿತ್ತು ಎನ್ನುವುದು ಹೈಕೋರ್ಟ್ ಗಮನಕ್ಕೆ ಬಂದಿದೆ’ ಎಂದರು.