<p><strong>ಮುಂಬೈ:</strong> ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬುಧವಾರ ಸಿಬಿಐ ಮುಂದೆ ಹಾಜರಾದರು.</p>.<p>ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್ಗಳಿಂದ ಪ್ರತಿ ತಿಂಗಳು ₹100 ಕೋಟಿ ವಸೂಲಿ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ದೇಶಮುಖ್ ಸೂಚಿಸಿದ್ದರು ಎಂದು ಹಿರಿಯ ಐಪಿಎಸ್ ಅಧಿಕಾರಿ ಮತ್ತು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿತ್ತು.</p>.<p>ಸಾಂತಾಕ್ರೂಜ್ನಲ್ಲಿರುವ ಡಿಆರ್ಡಿಒ ಅತಿಥಿ ಗೃಹದಲ್ಲಿದ್ದ ಸಿಬಿಐ ತನಿಖಾ ತಂಡದ ಎದುರು ದೇಶಮುಖ್ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೋಮವಾರ ದೇಶಮುಖ್ ಅವರಿಗೆ ನೋಟಿಸ್ ನೀಡಿತ್ತು.</p>.<p>ಇದುವರೆಗೆ, ಪರಮ್ ಬೀರ್ ಸಿಂಗ್, ಬಂಧನದಲ್ಲಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ, ಡಿಸಿಪಿ ರಾಜು ಭುಜಬಲ್, ಎಸಿಪಿ ಸಂಜಯ ಪಾಟೀಲ್, ವಕೀಲರಾದ ಜಯಶ್ರೀ ಪಾಟೀಲ್ ಮತ್ತು ಹೋಟೆಲ್ ಮಾಲೀಕ ಮಹೇಶ್ ಶೆಟ್ಟಿ ಅವರ ಹೇಳಿಕೆಗಳನ್ನು ಸಿಬಿಐ ದಾಖಲಿಸಿದೆ.</p>.<p>ಜತೆಗೆ, ದೇಶಮುಖ್ ಅವರ ಆಪ್ತ ಸಹಾಯಕ ಕುಂದನ್ ಶಿಂಧೆ ಮತ್ತು ಆಪ್ತ ಕಾರ್ಯದರ್ಶಿ ಸಂಜೀವ್ ಪಳಾಂದೆ ಅವರ ವಿಚಾರಣೆ ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬುಧವಾರ ಸಿಬಿಐ ಮುಂದೆ ಹಾಜರಾದರು.</p>.<p>ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್ಗಳಿಂದ ಪ್ರತಿ ತಿಂಗಳು ₹100 ಕೋಟಿ ವಸೂಲಿ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ದೇಶಮುಖ್ ಸೂಚಿಸಿದ್ದರು ಎಂದು ಹಿರಿಯ ಐಪಿಎಸ್ ಅಧಿಕಾರಿ ಮತ್ತು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿತ್ತು.</p>.<p>ಸಾಂತಾಕ್ರೂಜ್ನಲ್ಲಿರುವ ಡಿಆರ್ಡಿಒ ಅತಿಥಿ ಗೃಹದಲ್ಲಿದ್ದ ಸಿಬಿಐ ತನಿಖಾ ತಂಡದ ಎದುರು ದೇಶಮುಖ್ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೋಮವಾರ ದೇಶಮುಖ್ ಅವರಿಗೆ ನೋಟಿಸ್ ನೀಡಿತ್ತು.</p>.<p>ಇದುವರೆಗೆ, ಪರಮ್ ಬೀರ್ ಸಿಂಗ್, ಬಂಧನದಲ್ಲಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ, ಡಿಸಿಪಿ ರಾಜು ಭುಜಬಲ್, ಎಸಿಪಿ ಸಂಜಯ ಪಾಟೀಲ್, ವಕೀಲರಾದ ಜಯಶ್ರೀ ಪಾಟೀಲ್ ಮತ್ತು ಹೋಟೆಲ್ ಮಾಲೀಕ ಮಹೇಶ್ ಶೆಟ್ಟಿ ಅವರ ಹೇಳಿಕೆಗಳನ್ನು ಸಿಬಿಐ ದಾಖಲಿಸಿದೆ.</p>.<p>ಜತೆಗೆ, ದೇಶಮುಖ್ ಅವರ ಆಪ್ತ ಸಹಾಯಕ ಕುಂದನ್ ಶಿಂಧೆ ಮತ್ತು ಆಪ್ತ ಕಾರ್ಯದರ್ಶಿ ಸಂಜೀವ್ ಪಳಾಂದೆ ಅವರ ವಿಚಾರಣೆ ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>