<p><strong>ಭೋಪಾಲ್</strong>: ಮಧ್ಯಪ್ರದೇಶದ ಹೈಕೋರ್ಟ್ ನ್ಯಾಯಾಮೂರ್ತಿ ರೋಹಿತ್ ಆರ್ಯ ಅವರು ನಿವೃತ್ತಿಯಾದ ಮೂರು ತಿಂಗಳ ನಂತರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.</p>.<p>ಬಿಜೆಪಿ ಪಕ್ಷವನ್ನು ಸೇರಲು ಪ್ರಧಾನಿ ಮೋದಿ ಅವರ ಸಾರ್ವಜನಿಕ ಆಧಾರಿತ ಅಭಿವೃದ್ಧಿ ಕಾರ್ಯಗಳು ಮತ್ತು ಬಿಜೆಪಿ ಪಕ್ಷದ ನೀತಿಗಳು ಪ್ರಾಥಮಿಕವಾಗಿ ಪ್ರಭಾವ ಬೀರಿರುವುದಾಗಿ ಅವರು ಹೇಳಿದ್ದಾರೆ.</p>.<p>ಭೋಪಾಲ್ನಲ್ಲಿರುವ ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಗಾರದಲ್ಲಿ ಮಾತಾನಾಡಿದ ನಂತರ, ಆರ್ಯ ಬಿಜೆಪಿ ಸೇರ್ಪಡೆಯಾದರು ಎಂದು ಪಕ್ಷದ ನಾಯಕರೊಬ್ಬರು ಸೋಮವಾರ ತಿಳಿಸಿದರು.</p>.<p>‘ಭಾರತೀಯ ದಂಡ ಸಂಹಿತೆಯನ್ನು, ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಎಂದು ಬದಲಿಸುತ್ತಿರುವುದು ದೊಡ್ಡ ವಿಷಯ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಬಿಎನ್ಎಸ್ ಜನರ ಜೀವನದಲ್ಲಿ ಉತ್ತಮ ಬದಲಾವಣೆ ತರಲಿದೆ’ ಎಂದು ಆರ್ಯ ಹೇಳಿದ್ದಾರೆ.</p>.<p>ಇಂದೋರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧಾರ್ಮಿಕ ಭಾವನೆ ಘಾಸಿಗೊಳಿಸಿದ ಮತ್ತು ಕೋವಿಡ್–19ರ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ಸ್ಟ್ಯಾಂಡ್ – ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಅವರ ಜಾಮೀನು ಅರ್ಜಿಯನ್ನು ನಿರಾಕರಿಸಿ 2021ರಲ್ಲಿ ಹೆಚ್ಚು ಗಮನ ಸೆಳೆದಿದ್ದ ಆರ್ಯ, 27 ಏಪ್ರಿಲ್ 2024ರಂದು ನಿವೃತ್ತಿ ಹೊಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಮಧ್ಯಪ್ರದೇಶದ ಹೈಕೋರ್ಟ್ ನ್ಯಾಯಾಮೂರ್ತಿ ರೋಹಿತ್ ಆರ್ಯ ಅವರು ನಿವೃತ್ತಿಯಾದ ಮೂರು ತಿಂಗಳ ನಂತರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.</p>.<p>ಬಿಜೆಪಿ ಪಕ್ಷವನ್ನು ಸೇರಲು ಪ್ರಧಾನಿ ಮೋದಿ ಅವರ ಸಾರ್ವಜನಿಕ ಆಧಾರಿತ ಅಭಿವೃದ್ಧಿ ಕಾರ್ಯಗಳು ಮತ್ತು ಬಿಜೆಪಿ ಪಕ್ಷದ ನೀತಿಗಳು ಪ್ರಾಥಮಿಕವಾಗಿ ಪ್ರಭಾವ ಬೀರಿರುವುದಾಗಿ ಅವರು ಹೇಳಿದ್ದಾರೆ.</p>.<p>ಭೋಪಾಲ್ನಲ್ಲಿರುವ ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಗಾರದಲ್ಲಿ ಮಾತಾನಾಡಿದ ನಂತರ, ಆರ್ಯ ಬಿಜೆಪಿ ಸೇರ್ಪಡೆಯಾದರು ಎಂದು ಪಕ್ಷದ ನಾಯಕರೊಬ್ಬರು ಸೋಮವಾರ ತಿಳಿಸಿದರು.</p>.<p>‘ಭಾರತೀಯ ದಂಡ ಸಂಹಿತೆಯನ್ನು, ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಎಂದು ಬದಲಿಸುತ್ತಿರುವುದು ದೊಡ್ಡ ವಿಷಯ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಬಿಎನ್ಎಸ್ ಜನರ ಜೀವನದಲ್ಲಿ ಉತ್ತಮ ಬದಲಾವಣೆ ತರಲಿದೆ’ ಎಂದು ಆರ್ಯ ಹೇಳಿದ್ದಾರೆ.</p>.<p>ಇಂದೋರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧಾರ್ಮಿಕ ಭಾವನೆ ಘಾಸಿಗೊಳಿಸಿದ ಮತ್ತು ಕೋವಿಡ್–19ರ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ಸ್ಟ್ಯಾಂಡ್ – ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಅವರ ಜಾಮೀನು ಅರ್ಜಿಯನ್ನು ನಿರಾಕರಿಸಿ 2021ರಲ್ಲಿ ಹೆಚ್ಚು ಗಮನ ಸೆಳೆದಿದ್ದ ಆರ್ಯ, 27 ಏಪ್ರಿಲ್ 2024ರಂದು ನಿವೃತ್ತಿ ಹೊಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>