<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ (ಪಿಡಿಪಿ)ದ ಮಾಜಿ ನಾಯಕ ಆರ್ಶಿದ್ ಮೆಹಮೂದ್ ಖಾನ್ ತಮ್ಮ ಬೆಂಬಲಿಗರೊಂದಿಗೆ ಬುಧವಾರ ಬಿಜೆಪಿಗೆ ಸೇರಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷ ರವೀಂದರ್ ರೈನಾ, ಮಾಜಿ ಉಪಮುಖ್ಯಮಂತ್ರಿ ಕವಿಂದರ್ ಗುಪ್ತಾ, ಸಂಸದ ಜುಗಲ್ ಕಿಶೋರ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಮೆಹಮೂದ್ ಖಾನ್ ಪಕ್ಷಕ್ಕೆ ಸೇರಿದರು.</p><p>ಮೆಹಮೂದ್ ಖಾನ್ ಅವರು ರಜೌರಿ ಜಿಲ್ಲೆಯ ನೌಶೆರಾದ ದಾಂಡೇಸರ್ ಗ್ರಾಮ ಪಂಚಾಯ್ತಿಗೆ ಮೂರು ಸಲ ಸರ್ಪಂಚ್ ಆಗಿದ್ದರು. 2008ರ ವಿಧಾನಸಭಾ ಚುನಾವಣೆಯಲ್ಲಿ ನೌಶೆರಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.</p><p>ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳನ್ನು ಘೋಷಿಸುವುದು ಚುನಾವಣಾ ಆಯೋಗದ ವಿಶೇಷಾಧಿಕಾರವಾಗಿದೆ. ಆದರೆ ನಾವು ಯಾವುದೇ ಚುನಾವಣೆಗೆ ಸಿದ್ಧರಿದ್ದೇವೆ. ಇದೇ 20ರಂದು ಪ್ರಧಾನಿ ನರೇಂದ್ರ ಮೋದಿ ಜಮ್ಮುವಿಗೆ ಬರಲಿದ್ದು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರವೀಂದರ್ ರೈನಾ ಹೇಳಿದರು.</p><p>ಪ್ರಧಾನಿಯವರ ಸಮ್ಮುಖದಲ್ಲಿ ವಿವಿಧ ಪಕ್ಷಗಳ ಕೆಲವು ನಾಯಕರು ಬಿಜೆಪಿಗೆ ಸೇರುತ್ತಾರೆ ಎಂಬ ವದಂತಿಗಳ ಬಗ್ಗೆ ಸುದ್ದಿಗಾರರು ಕೇಳಿದಾಗ, ಯಾರು ಬಂದರೂ ನಾವು ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ರೈನಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ (ಪಿಡಿಪಿ)ದ ಮಾಜಿ ನಾಯಕ ಆರ್ಶಿದ್ ಮೆಹಮೂದ್ ಖಾನ್ ತಮ್ಮ ಬೆಂಬಲಿಗರೊಂದಿಗೆ ಬುಧವಾರ ಬಿಜೆಪಿಗೆ ಸೇರಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷ ರವೀಂದರ್ ರೈನಾ, ಮಾಜಿ ಉಪಮುಖ್ಯಮಂತ್ರಿ ಕವಿಂದರ್ ಗುಪ್ತಾ, ಸಂಸದ ಜುಗಲ್ ಕಿಶೋರ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಮೆಹಮೂದ್ ಖಾನ್ ಪಕ್ಷಕ್ಕೆ ಸೇರಿದರು.</p><p>ಮೆಹಮೂದ್ ಖಾನ್ ಅವರು ರಜೌರಿ ಜಿಲ್ಲೆಯ ನೌಶೆರಾದ ದಾಂಡೇಸರ್ ಗ್ರಾಮ ಪಂಚಾಯ್ತಿಗೆ ಮೂರು ಸಲ ಸರ್ಪಂಚ್ ಆಗಿದ್ದರು. 2008ರ ವಿಧಾನಸಭಾ ಚುನಾವಣೆಯಲ್ಲಿ ನೌಶೆರಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.</p><p>ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳನ್ನು ಘೋಷಿಸುವುದು ಚುನಾವಣಾ ಆಯೋಗದ ವಿಶೇಷಾಧಿಕಾರವಾಗಿದೆ. ಆದರೆ ನಾವು ಯಾವುದೇ ಚುನಾವಣೆಗೆ ಸಿದ್ಧರಿದ್ದೇವೆ. ಇದೇ 20ರಂದು ಪ್ರಧಾನಿ ನರೇಂದ್ರ ಮೋದಿ ಜಮ್ಮುವಿಗೆ ಬರಲಿದ್ದು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರವೀಂದರ್ ರೈನಾ ಹೇಳಿದರು.</p><p>ಪ್ರಧಾನಿಯವರ ಸಮ್ಮುಖದಲ್ಲಿ ವಿವಿಧ ಪಕ್ಷಗಳ ಕೆಲವು ನಾಯಕರು ಬಿಜೆಪಿಗೆ ಸೇರುತ್ತಾರೆ ಎಂಬ ವದಂತಿಗಳ ಬಗ್ಗೆ ಸುದ್ದಿಗಾರರು ಕೇಳಿದಾಗ, ಯಾರು ಬಂದರೂ ನಾವು ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ರೈನಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>