<p><strong>ನವದೆಹಲಿ:</strong> ಮಾಜಿ ರಾಷ್ಟ್ರಪತಿ ಗ್ಯಾನಿ ಜೈಲ್ ಸಿಂಗ್ ಅವರ ಮೊಮ್ಮಗ ಇಂದ್ರಜಿತ್ ಸಿಂಗ್ ಹಾಗೂ ಇಬ್ಬರು ಪ್ರಾಧ್ಯಾಪಕರು ಗುರುವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. </p>.<p>ದೆಹಲಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾದ ರತನ್ ಲಾಲ್ ಹಾಗೂ ಲಖನೌ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ರವಿಕಾಂತ್ ಅವರು ಇಂದ್ರಜಿತ್ ಸಿಂಗ್ ಅವರೊಂದಿಗೆ ನವದೆಹಲಿಯ ಅಕ್ಬರ್ ರೋಡ್ನಲ್ಲಿರುವ ಪಕ್ಷದ ಕಚೇರಿಗೆ ತೆರಳಿ, ಕಾಂಗ್ರೆಸ್ನ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಪವನ್ ಖೇರಾ ಉಪಸ್ಥಿತಿಯಲ್ಲಿ ಪಕ್ಷ ಸೇರಿದ್ದಾರೆ. </p>.<p class="title">ಒಬಿಸಿ ವಿಭಾಗದ ಮುಖ್ಯಸ್ಥ ಅನಿಲ್ ಜೈಹಿಂದ್ ಹಾಗೂ ಪರಿಶಿಷ್ಟ ಜಾತಿ ವಿಭಾಗದ ಮುಖ್ಯಸ್ಥ ರಾಜೇಂದ್ರ ಪಾಲ್ ಗೌತಮ್ ಅವರೂ ಈ ವೇಳೆ ಉಪಸ್ಥಿತರಿದ್ದರು. </p>.<p>ಪಕ್ಷ ಸೇರಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂದ್ರಜಿತ್ ಸಿಂಗ್, ‘ದುರ್ಬಲ ಆರ್ಥಿಕ ಸ್ಥಿತಿ, ಹಣದುಬ್ಬರದಂತಹ ಹಲವು ಪ್ರಮುಖ ಸಮಸ್ಯೆಗಳನ್ನು ದೇಶ ಎದುರಿಸುತ್ತಿದ್ದು, ಈ ಬಗ್ಗೆ ಚರ್ಚೆಗಳನ್ನು ನಡೆಸುವುದು ಅಗತ್ಯವಾಗಿದೆ. ಸಾಮಾಜಿಕ ನ್ಯಾಯಕ್ಕಾಗಿ ನಾನು ಸದಾ ಧ್ವನಿ ಎತ್ತಲು ಬದ್ಧನಾಗಿರುತ್ತೇನೆ’ ಎಂದಿದ್ದಾರೆ.</p>.<p class="bodytext">ಸಾಮಾಜಿಕ ನ್ಯಾಯಕ್ಕಾಗಿ ಚಳವಳಿ ಆರಂಭಿಸಿರುವ ರಾಹುಲ್ ಗಾಂಧಿ ಅವರು ಸಂಸತ್ತಿನಿಂದ ಹಿಡಿದ ಸಾಮಾನ್ಯ ಬೀದಿಗಳವರೆಗೆ ಪೂರ್ಣ ಬಲದೊಂದಿಗೆ ಚಳವಳಿಯನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿಯೇ ಬಹುದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಬೆಂಬಲಿಸುತ್ತಿದ್ದಾರೆ. ಇದೇ ವೇಳೆ ಈ ಮೂವರ ಸೇರ್ಪಡೆಯು ಪಕ್ಷದ ಹೋರಾಟಕ್ಕೆ ಬಲ ತುಂಬಲಿದೆ ಎಂದು ಗೌತಮ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಾಜಿ ರಾಷ್ಟ್ರಪತಿ ಗ್ಯಾನಿ ಜೈಲ್ ಸಿಂಗ್ ಅವರ ಮೊಮ್ಮಗ ಇಂದ್ರಜಿತ್ ಸಿಂಗ್ ಹಾಗೂ ಇಬ್ಬರು ಪ್ರಾಧ್ಯಾಪಕರು ಗುರುವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. </p>.<p>ದೆಹಲಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾದ ರತನ್ ಲಾಲ್ ಹಾಗೂ ಲಖನೌ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ರವಿಕಾಂತ್ ಅವರು ಇಂದ್ರಜಿತ್ ಸಿಂಗ್ ಅವರೊಂದಿಗೆ ನವದೆಹಲಿಯ ಅಕ್ಬರ್ ರೋಡ್ನಲ್ಲಿರುವ ಪಕ್ಷದ ಕಚೇರಿಗೆ ತೆರಳಿ, ಕಾಂಗ್ರೆಸ್ನ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಪವನ್ ಖೇರಾ ಉಪಸ್ಥಿತಿಯಲ್ಲಿ ಪಕ್ಷ ಸೇರಿದ್ದಾರೆ. </p>.<p class="title">ಒಬಿಸಿ ವಿಭಾಗದ ಮುಖ್ಯಸ್ಥ ಅನಿಲ್ ಜೈಹಿಂದ್ ಹಾಗೂ ಪರಿಶಿಷ್ಟ ಜಾತಿ ವಿಭಾಗದ ಮುಖ್ಯಸ್ಥ ರಾಜೇಂದ್ರ ಪಾಲ್ ಗೌತಮ್ ಅವರೂ ಈ ವೇಳೆ ಉಪಸ್ಥಿತರಿದ್ದರು. </p>.<p>ಪಕ್ಷ ಸೇರಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂದ್ರಜಿತ್ ಸಿಂಗ್, ‘ದುರ್ಬಲ ಆರ್ಥಿಕ ಸ್ಥಿತಿ, ಹಣದುಬ್ಬರದಂತಹ ಹಲವು ಪ್ರಮುಖ ಸಮಸ್ಯೆಗಳನ್ನು ದೇಶ ಎದುರಿಸುತ್ತಿದ್ದು, ಈ ಬಗ್ಗೆ ಚರ್ಚೆಗಳನ್ನು ನಡೆಸುವುದು ಅಗತ್ಯವಾಗಿದೆ. ಸಾಮಾಜಿಕ ನ್ಯಾಯಕ್ಕಾಗಿ ನಾನು ಸದಾ ಧ್ವನಿ ಎತ್ತಲು ಬದ್ಧನಾಗಿರುತ್ತೇನೆ’ ಎಂದಿದ್ದಾರೆ.</p>.<p class="bodytext">ಸಾಮಾಜಿಕ ನ್ಯಾಯಕ್ಕಾಗಿ ಚಳವಳಿ ಆರಂಭಿಸಿರುವ ರಾಹುಲ್ ಗಾಂಧಿ ಅವರು ಸಂಸತ್ತಿನಿಂದ ಹಿಡಿದ ಸಾಮಾನ್ಯ ಬೀದಿಗಳವರೆಗೆ ಪೂರ್ಣ ಬಲದೊಂದಿಗೆ ಚಳವಳಿಯನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿಯೇ ಬಹುದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಬೆಂಬಲಿಸುತ್ತಿದ್ದಾರೆ. ಇದೇ ವೇಳೆ ಈ ಮೂವರ ಸೇರ್ಪಡೆಯು ಪಕ್ಷದ ಹೋರಾಟಕ್ಕೆ ಬಲ ತುಂಬಲಿದೆ ಎಂದು ಗೌತಮ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>