<p><strong>ನವದೆಹಲಿ:</strong> ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಸೋಮವಾರ ಅಧಿಕಾರ ವಹಿಸಿಕೊಂಡರು.</p><p>ಅಧಿಕಾರ ವಹಿಸಿಕೊಂಡು ಮಾತನಾಡಿದ ಅವರು, ‘ಮಾನವ ಹಕ್ಕುಗಳು ಎನ್ನುವುದು ಭಾರತದ ಸಂಸ್ಕೃತಿಯಲ್ಲೇ ಆಳವಾಗಿ ಬೇರೂರಿದೆ. ಇವುಗಳನ್ನು ರಕ್ಷಿಸಿ, ಉಳಿಸಿ ಬೆಳೆಸಲು ಸಮಾಜದ ಪ್ರತಿಯೊಬ್ಬರ ಪಾಲುದಾರಿಕೆ ಅಗತ್ಯ’ ಎಂದರು. ತಮಿಳಿನ ಮಹಾಕವಿ ತಿರುವಳ್ಳುವರ್ ಅವರು ಮಾನವ ಹಕ್ಕುಗಳ ಕುರಿತು ಹೇಳಿದ ಮಾತುಗಳನ್ನು ಉಲ್ಲೇಖಿಸಿದರು.</p><p>ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನ್ಯಾ. ರಾಮಸುಬ್ರಮಣಿಯನ್ ಅವರ ಹೆಸರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ. 21ರಂದು ಅಂತಿಮಗೊಳಿಸಿದ್ದರು. ಕೇಂದ್ರ ಸರ್ಕಾರವು ಡಿ. 23ರಂದು ಹೆಸರು ಪ್ರಕಟಿಸಿತು. ನ್ಯಾ. ಬಿದ್ಯುತ್ ರಂಜನ್ ಸಾರಂಗಿ ಅವರು ಆಯೋಗದ ಸದಸ್ಯರಾಗಿದ್ದಾರೆ.</p><p>ವಿ. ರಾಮಸುಬ್ರಮಣಿಯನ್ ಅವರು 1958ರ ಜೂನ್ 30ರಂದು ತಮಿಳುನಾಡಿನ ಮನ್ನಾರಗುಡಿಯಲ್ಲಿ ಜನಿಸಿದರು. ಚೆನ್ನೈನ ರಾಮಕೃಷ್ಣ ಮಿಷನ್ನ ವಿವೇಕಾನಂದ ಕಾಲೇಜಿನಲ್ಲಿ ರಸಾಯನವಿಜ್ಞಾನ ವಿಷಯದಲ್ಲಿ ಬಿ.ಎಸ್ಸಿ., ಮದ್ರಾಸ್ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು. ಮದ್ರಾಸ್ ಹೈಕೋರ್ಟ್ನಲ್ಲಿ ಸುಮಾರು 23 ವರ್ಷ ವಕೀಲರಾಗಿದ್ದರು.</p><p>2006ರಲ್ಲಿ ಮದ್ರಾಸ್ ಹೈಕೋರ್ಟ್ನ ಹೆಚ್ಚುವರಿ ವಕೀಲರಾಗಿ ನೇಮಕಗೊಂಡರು. ತೆಲಂಗಾಣ ಮತ್ತು ಆಂಧ್ರಪ್ರದೇಶ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಯಾಗಿ. ಹಿಮಾಚಲಪ್ರದೇಶದ ಹೈಕೊರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ, ನಂತರ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಯಾಗಿ ನೇಮಕಗೊಂಡರು.</p><p>2016ರ ನೋಟು ಅಮಾನ್ಯೀಕರಣ ಪ್ರಕರಣ ಒಳಗೊಂಡಂತೆ 102 ಪ್ರಕರಣಗಳಲ್ಲಿ ರಾಮಸುಬ್ರಮಣಿಯ ತೀರ್ಪು ನೀಡಿದ್ದಾರೆ. ಆಯೋಗದ ಅಧ್ಯಕ್ಷರಾಗಿರುವ ನ್ಯಾ. ಅರುಣ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯು ಜೂನ್ 1ಕ್ಕೆ ಕೊನೆಯಾಗಲಿದೆ. ಇವರಿಗೂ ಮೊದಲು ನ್ಯಾ. ಎಚ್.ಎಲ್. ದತ್ತು ಹಾಗೂ ಕೆ.ಜಿ.ಬಾಲಕೃಷ್ಣನ್ ಅಧ್ಯಕ್ಷರಾಗಿದ್ದರು.</p><p>ಆಯೋಗದ ಮಂದಿನ ಅಧ್ಯಕ್ಷರ ಆಯ್ಕೆ ಕುರಿತು ಡಿ. 18ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಸೋಮವಾರ ಅಧಿಕಾರ ವಹಿಸಿಕೊಂಡರು.</p><p>ಅಧಿಕಾರ ವಹಿಸಿಕೊಂಡು ಮಾತನಾಡಿದ ಅವರು, ‘ಮಾನವ ಹಕ್ಕುಗಳು ಎನ್ನುವುದು ಭಾರತದ ಸಂಸ್ಕೃತಿಯಲ್ಲೇ ಆಳವಾಗಿ ಬೇರೂರಿದೆ. ಇವುಗಳನ್ನು ರಕ್ಷಿಸಿ, ಉಳಿಸಿ ಬೆಳೆಸಲು ಸಮಾಜದ ಪ್ರತಿಯೊಬ್ಬರ ಪಾಲುದಾರಿಕೆ ಅಗತ್ಯ’ ಎಂದರು. ತಮಿಳಿನ ಮಹಾಕವಿ ತಿರುವಳ್ಳುವರ್ ಅವರು ಮಾನವ ಹಕ್ಕುಗಳ ಕುರಿತು ಹೇಳಿದ ಮಾತುಗಳನ್ನು ಉಲ್ಲೇಖಿಸಿದರು.</p><p>ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನ್ಯಾ. ರಾಮಸುಬ್ರಮಣಿಯನ್ ಅವರ ಹೆಸರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ. 21ರಂದು ಅಂತಿಮಗೊಳಿಸಿದ್ದರು. ಕೇಂದ್ರ ಸರ್ಕಾರವು ಡಿ. 23ರಂದು ಹೆಸರು ಪ್ರಕಟಿಸಿತು. ನ್ಯಾ. ಬಿದ್ಯುತ್ ರಂಜನ್ ಸಾರಂಗಿ ಅವರು ಆಯೋಗದ ಸದಸ್ಯರಾಗಿದ್ದಾರೆ.</p><p>ವಿ. ರಾಮಸುಬ್ರಮಣಿಯನ್ ಅವರು 1958ರ ಜೂನ್ 30ರಂದು ತಮಿಳುನಾಡಿನ ಮನ್ನಾರಗುಡಿಯಲ್ಲಿ ಜನಿಸಿದರು. ಚೆನ್ನೈನ ರಾಮಕೃಷ್ಣ ಮಿಷನ್ನ ವಿವೇಕಾನಂದ ಕಾಲೇಜಿನಲ್ಲಿ ರಸಾಯನವಿಜ್ಞಾನ ವಿಷಯದಲ್ಲಿ ಬಿ.ಎಸ್ಸಿ., ಮದ್ರಾಸ್ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು. ಮದ್ರಾಸ್ ಹೈಕೋರ್ಟ್ನಲ್ಲಿ ಸುಮಾರು 23 ವರ್ಷ ವಕೀಲರಾಗಿದ್ದರು.</p><p>2006ರಲ್ಲಿ ಮದ್ರಾಸ್ ಹೈಕೋರ್ಟ್ನ ಹೆಚ್ಚುವರಿ ವಕೀಲರಾಗಿ ನೇಮಕಗೊಂಡರು. ತೆಲಂಗಾಣ ಮತ್ತು ಆಂಧ್ರಪ್ರದೇಶ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಯಾಗಿ. ಹಿಮಾಚಲಪ್ರದೇಶದ ಹೈಕೊರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ, ನಂತರ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಯಾಗಿ ನೇಮಕಗೊಂಡರು.</p><p>2016ರ ನೋಟು ಅಮಾನ್ಯೀಕರಣ ಪ್ರಕರಣ ಒಳಗೊಂಡಂತೆ 102 ಪ್ರಕರಣಗಳಲ್ಲಿ ರಾಮಸುಬ್ರಮಣಿಯ ತೀರ್ಪು ನೀಡಿದ್ದಾರೆ. ಆಯೋಗದ ಅಧ್ಯಕ್ಷರಾಗಿರುವ ನ್ಯಾ. ಅರುಣ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯು ಜೂನ್ 1ಕ್ಕೆ ಕೊನೆಯಾಗಲಿದೆ. ಇವರಿಗೂ ಮೊದಲು ನ್ಯಾ. ಎಚ್.ಎಲ್. ದತ್ತು ಹಾಗೂ ಕೆ.ಜಿ.ಬಾಲಕೃಷ್ಣನ್ ಅಧ್ಯಕ್ಷರಾಗಿದ್ದರು.</p><p>ಆಯೋಗದ ಮಂದಿನ ಅಧ್ಯಕ್ಷರ ಆಯ್ಕೆ ಕುರಿತು ಡಿ. 18ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>