ಕೆಸಿಆರ್ ಆಸ್ಪತ್ರೆಯಿಂದ ನಂದಿನಗರದಲ್ಲಿರುವ ತಮ್ಮ ನಿವಾಸಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಆರ್ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಡಿಸೆಂಬರ್ 8 ರಂದು ತಮ್ಮ ಎರ್ರವಲ್ಲಿ ಫಾರ್ಮ್ ಹೌಸ್ನಲ್ಲಿ ಬಿದ್ದು ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕೆಸಿಆರ್ ಅವರನ್ನು ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ನಮ್ಮ ತಂದೆ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೆಸಿಆರ್ ಪುತ್ರಿ ಕೆ. ಕವಿತಾ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ತಿಳಿಸಿದ್ದಾರೆ.
ಕೆಸಿಆರ್ ಅವರು ಆರರಿಂದ ಎಂಟು ವಾರಗಳಲ್ಲಿ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.