ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ

Published 9 ಡಿಸೆಂಬರ್ 2023, 5:53 IST
Last Updated 9 ಡಿಸೆಂಬರ್ 2023, 5:53 IST
ಅಕ್ಷರ ಗಾತ್ರ

ಹೈದರಾಬಾದ್: ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಮೂಳೆ ಮುರಿತದಿಂದ ಬಳಲುತ್ತಿದ್ದ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರಿಗೆ ಯಶೋಧ ಹಾಸ್ಪಿಟಲ್ಸ್‌ನ ವೈದ್ಯರು ಯಶಸ್ವಿ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

69 ವರ್ಷದ ಕೆಸಿಆರ್‌ ಅವರು ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದರು. ಕೆಸಿಆರ್‌ ಅವರಿಗೆ ತೊಡೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಮಾಡಬೇಕಾಗಿದ್ದು, ಚೇತರಿಸಿಕೊಳ್ಳಲು ಆರರಿಂದ ಎಂಟು ವಾರ ಬೇಕಾಗುತ್ತದೆ. ಕೆಸಿಆರ್‌ ಅವರ ಮೇಲ್ವಿಚಾರಣೆಯನ್ನು ವೈದ್ಯರ ತಂಡವೊಂದು ನಿರಂತರವಾಗಿ ಮಾಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದು ವೈದ್ಯರು ತಿಳಿಸಿದ್ದರು.

ಈ ಕುರಿತು ಕೆಸಿಆರ್‌ ಅವರ ಪುತ್ರ ಕೆ.ಟಿ. ರಾಮರಾವ್‌ ಅವರೂ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದು, ‘ಕೆಸಿಆರ್‌ ಅವರು ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದಿದ್ದಾರೆ. ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಈಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗೆದ್ದುಗೆ ಏರಿತ್ತು. ಇತ್ತ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್‌ಎಸ್‌) 39 ಸ್ಥಾನಗಳಲ್ಲಿ ಮಾತ್ರ ಗೆದ್ದು ಹಿನ್ನಡೆ ಅನುಭವಿಸಿತ್ತು. ಇತ್ತ ಬಿಜೆಪಿ 8, ಎಐಎಂಐಎಂ 7 ಹಾಗೂ ಪಕ್ಷೇತರರು 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT