ತಮಿಳು ಭಾಷೆಯಲ್ಲಿ ಪ್ರೌಢಿಮೆ ಹೊಂದಿದ್ದ ಡಿ. ಪಾಂಡಿಯನ್ ಅವರು 1991ರ ಮೇ 21ರಂದು ಶ್ರೀಪೆರಂಬದೂರಿನಲ್ಲಿ ರಾಜೀವ್ ಗಾಂಧಿ ಅವರ ಕಾರ್ಯಕ್ರಮದಲ್ಲಿ ರಾಜೀವ್ ಅವರ ಭಾಷಣವನ್ನು ಇಂಗ್ಲಿಷಿನಿಂದ ತಮಿಳಿಗೆ ಭಾಷಾಂತರಿಸಲು ತೆರಳಿದ್ದರು. ಅಂದು ಸಂಭವಿಸಿದ ಮಾನವ ಬಾಂಬ್ ಸ್ಫೋಟದಲ್ಲಿ ರಾಜೀವ್ ಹತ್ಯೆಗೀಡಾಗಿದ್ದರು. ಪಾಂಡಿಯನ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪಾಂಡಿಯನ್ ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಚೆನ್ನೈ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.