ರಾಜಸ್ಥಾನದ ಮಾಜಿ ರಾಜ್ಯಪಾಲ, ಬಿಜೆಪಿ ಮುಖಂಡ ಕಲ್ಯಾಣ್ ಸಿಂಗ್, ಕಳೆದ ಎರಡು ವಾರಗಳಿಂದ ಅನಾರೋಗ್ಯ ಪೀಡಿತರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಸಂಜೆ 5:30ರ ಸುಮಾರಿಗೆ ಅವರು ಸಂಜಯ್ ಗಾಂಧಿ ಇನ್ಸ್ಟಿಟ್ಯೂಟ್ನ ಐಸಿಯುಗೆ ದಾಖಲಾಗಿದ್ದಾರೆ. 'ರಕ್ತದೊತ್ತಡ ಮತ್ತು ಹೃದಯ ಬಡಿತ ಸಹಜವಾಗಿದೆ, ಆದರೆ ಪ್ರಜ್ಞೆ ಕ್ಷೀಣಿಸಿದೆ' ಎಂದು ಭಾನುವಾರದ ಪ್ರಕಟಣೆ ತಿಳಿಸಿದೆ.