<p><strong>ಹೈದರಾಬಾದ್</strong>: ‘ಫಾರ್ಮುಲಾ ಇ’ ರೇಸ್ಗೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಅವರು ಇಂದು (ಬುಧವಾರ) ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಎದುರು ವಿಚಾರಣೆಗೆ ಹಾಜರಾಗಿದ್ದಾರೆ.</p><p>ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಅರವಿಂದ್ ಕುಮಾರ್ ಅವರಿಗೆ ಎಸಿಬಿ ಸೂಚಿಸಿತ್ತು. ಹಾಗಾಗಿ ಅರವಿಂದ್ ಅವರು ಹೈದರಾಬಾದ್ನಲ್ಲಿ ಎಸಿಬಿ ಪ್ರಧಾನ ಕಚೇರಿಗೆ ಬಂದಿದ್ದಾರೆ ಎಂದು ವರದಿಯಾಗಿದೆ. </p><p>ಹಿಂದಿನ ಬಿಆರ್ಎಸ್ ಸರ್ಕಾರ ಆಡಳಿತದಲ್ಲಿ ಪೌರಾಡಳಿತ ಸಚಿವರಾಗಿದ್ದ ಕೆ.ಟಿ.ರಾಮರಾವ್ ವಿರುದ್ಧ 2024ರ ಡಿಸೆಂಬರ್ನಲ್ಲಿ ಎಸಿಬಿ ಪ್ರಕರಣ ದಾಖಲಿಸಿತ್ತು. 2023ರಲ್ಲಿ ‘ಫಾರ್ಮುಲಾ ಇ’ ರೇಸ್ ನಡೆಸಲು ಅನುಮತಿಯಿಲ್ಲದೆ ವಿದೇಶಿ ಕರೆನ್ಸಿಯನ್ನು ಸಂಗ್ರಹಿಸಲಾಗಿದೆ ಎಂಬ ಆರೋಪ ಇದಾಗಿದೆ. </p><p>2023ರಲ್ಲಿ ಅರವಿಂದ್ ಕುಮಾರ್ ಅವರು ಪೌರಾಡಳಿತ ಮತ್ತು ನಗರಾಭಿವೃದ್ಧಿ ಇಲಾಖೆಯ ಉಸ್ತುವಾರಿ ವಹಿಸಿದ್ದರು. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೆ.ಟಿ.ರಾಮರಾವ್ ಅವರನ್ನು ಪ್ರಮುಖ ಆರೋಪಿ (A-1) ಎಂದು ಎಸಿಬಿ ಎಫ್ಐಆರ್ನಲ್ಲಿ ಉಲ್ಲೇಖಿಸಿದೆ. ಉಳಿದಂತೆ ಅರವಿಂದ್ ಕುಮಾರ್ ಅವರನ್ನು ಎರಡನೇ ಆರೋಪಿ ಮತ್ತು ನಿವೃತ್ತ ಅಧಿಕಾರಿ ಬಿ.ಎಲ್.ಎನ್. ರೆಡ್ಡಿ ಅವರನ್ನು ಮೂರನೇ ಆರೋಪಿ ಎಂದು ಹೆಸರಿಸಲಾಗಿದೆ.</p><p>‘ಫಾರ್ಮುಲಾ ಇ’ ರೇಸ್ ಆಯೋಜನೆಗೆ ಸಂಬಂಧಿಸಿ ಸರ್ಕಾರದ ಬೊಕ್ಕಸಕ್ಕೆ ₹55 ಕೋಟಿ ನಷ್ಟವನ್ನುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 2024ರ ಫೆಬ್ರುವರಿಯಲ್ಲಿ ರೇಸ್ ನಡೆಯಬೇಕಿತ್ತು. ಆದರೆ, 2023ರ ಡಿಸೆಂಬರ್ನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದನ್ನು ರದ್ದುಗೊಳಿಸಲಾಗಿತ್ತು.</p><p>ಇದೇ ಪ್ರಕರಣದಲ್ಲಿ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ (ಕೆಟಿಆರ್) ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಜ.16ರಂದು ತನಿಖೆಗೆ ಹಾಜರಾಗುವಂತೆ ಮಂಗಳವಾರ ಸಮನ್ಸ್ ನೀಡಿತ್ತು.</p><p>ಜ.7ರಂದು ತನಿಖೆಗೆ ಹಾಜರಾಗುವಂತೆ ಕೆಟಿಆರ್ ಅವರಿಗೆ ಈ ಹಿಂದೆ ಇ.ಡಿ. ಸಮನ್ಸ್ ನೀಡಿತ್ತು. ‘ತನಿಖೆಗೆ ಹಾಜರಾಗಲು ಎರಡು ವಾರಗಳ ಅವಕಾಶ ನೀಡಬೇಕು ಎಂದು ಕೆಟಿಆರ್ ಅವರು ಮನವಿ ಮಾಡಿದ್ದಾರೆ. ಆದ್ದರಿಂದ, ಈಗ ಮತ್ತೊಮ್ಮೆ ಸಮನ್ಸ್ ನೀಡಲಾಗಿದೆ’ ಎಂದು ಮೂಲಗಳು ಹೇಳಿವೆ.</p><p>ಇದೇ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ ದಾಖಲಿಸಿದ ಎಫ್ಐಆರ್ ಅನ್ನು ರದ್ದು ಮಾಡಬೇಕು ಎಂದು ಕೆಟಿಆರ್ ಅವರು ತೆಲಂಗಾಣ ಹೈಕೋರ್ಟ್ಗೆ ಕೋರಿದ್ದರು. ಮಂಗಳವಾರ ಆದೇಶ ನೀಡಿರುವ ಹೈಕೋರ್ಟ್, ಎಫ್ಐಆರ್ ಅನ್ನು ರದ್ದು ಮಾಡಲು ನಿರಾಕರಿಸಿತ್ತು.</p>.ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೆ.ಟಿ.ರಾಮರಾವ್ಗೆ ಇ.ಡಿ ಹೊಸ ಸಮನ್ಸ್.ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೆಟಿಆರ್ಗೆ ಇ.ಡಿ ಸಮನ್ಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ‘ಫಾರ್ಮುಲಾ ಇ’ ರೇಸ್ಗೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಅವರು ಇಂದು (ಬುಧವಾರ) ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಎದುರು ವಿಚಾರಣೆಗೆ ಹಾಜರಾಗಿದ್ದಾರೆ.</p><p>ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಅರವಿಂದ್ ಕುಮಾರ್ ಅವರಿಗೆ ಎಸಿಬಿ ಸೂಚಿಸಿತ್ತು. ಹಾಗಾಗಿ ಅರವಿಂದ್ ಅವರು ಹೈದರಾಬಾದ್ನಲ್ಲಿ ಎಸಿಬಿ ಪ್ರಧಾನ ಕಚೇರಿಗೆ ಬಂದಿದ್ದಾರೆ ಎಂದು ವರದಿಯಾಗಿದೆ. </p><p>ಹಿಂದಿನ ಬಿಆರ್ಎಸ್ ಸರ್ಕಾರ ಆಡಳಿತದಲ್ಲಿ ಪೌರಾಡಳಿತ ಸಚಿವರಾಗಿದ್ದ ಕೆ.ಟಿ.ರಾಮರಾವ್ ವಿರುದ್ಧ 2024ರ ಡಿಸೆಂಬರ್ನಲ್ಲಿ ಎಸಿಬಿ ಪ್ರಕರಣ ದಾಖಲಿಸಿತ್ತು. 2023ರಲ್ಲಿ ‘ಫಾರ್ಮುಲಾ ಇ’ ರೇಸ್ ನಡೆಸಲು ಅನುಮತಿಯಿಲ್ಲದೆ ವಿದೇಶಿ ಕರೆನ್ಸಿಯನ್ನು ಸಂಗ್ರಹಿಸಲಾಗಿದೆ ಎಂಬ ಆರೋಪ ಇದಾಗಿದೆ. </p><p>2023ರಲ್ಲಿ ಅರವಿಂದ್ ಕುಮಾರ್ ಅವರು ಪೌರಾಡಳಿತ ಮತ್ತು ನಗರಾಭಿವೃದ್ಧಿ ಇಲಾಖೆಯ ಉಸ್ತುವಾರಿ ವಹಿಸಿದ್ದರು. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೆ.ಟಿ.ರಾಮರಾವ್ ಅವರನ್ನು ಪ್ರಮುಖ ಆರೋಪಿ (A-1) ಎಂದು ಎಸಿಬಿ ಎಫ್ಐಆರ್ನಲ್ಲಿ ಉಲ್ಲೇಖಿಸಿದೆ. ಉಳಿದಂತೆ ಅರವಿಂದ್ ಕುಮಾರ್ ಅವರನ್ನು ಎರಡನೇ ಆರೋಪಿ ಮತ್ತು ನಿವೃತ್ತ ಅಧಿಕಾರಿ ಬಿ.ಎಲ್.ಎನ್. ರೆಡ್ಡಿ ಅವರನ್ನು ಮೂರನೇ ಆರೋಪಿ ಎಂದು ಹೆಸರಿಸಲಾಗಿದೆ.</p><p>‘ಫಾರ್ಮುಲಾ ಇ’ ರೇಸ್ ಆಯೋಜನೆಗೆ ಸಂಬಂಧಿಸಿ ಸರ್ಕಾರದ ಬೊಕ್ಕಸಕ್ಕೆ ₹55 ಕೋಟಿ ನಷ್ಟವನ್ನುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 2024ರ ಫೆಬ್ರುವರಿಯಲ್ಲಿ ರೇಸ್ ನಡೆಯಬೇಕಿತ್ತು. ಆದರೆ, 2023ರ ಡಿಸೆಂಬರ್ನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದನ್ನು ರದ್ದುಗೊಳಿಸಲಾಗಿತ್ತು.</p><p>ಇದೇ ಪ್ರಕರಣದಲ್ಲಿ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ (ಕೆಟಿಆರ್) ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಜ.16ರಂದು ತನಿಖೆಗೆ ಹಾಜರಾಗುವಂತೆ ಮಂಗಳವಾರ ಸಮನ್ಸ್ ನೀಡಿತ್ತು.</p><p>ಜ.7ರಂದು ತನಿಖೆಗೆ ಹಾಜರಾಗುವಂತೆ ಕೆಟಿಆರ್ ಅವರಿಗೆ ಈ ಹಿಂದೆ ಇ.ಡಿ. ಸಮನ್ಸ್ ನೀಡಿತ್ತು. ‘ತನಿಖೆಗೆ ಹಾಜರಾಗಲು ಎರಡು ವಾರಗಳ ಅವಕಾಶ ನೀಡಬೇಕು ಎಂದು ಕೆಟಿಆರ್ ಅವರು ಮನವಿ ಮಾಡಿದ್ದಾರೆ. ಆದ್ದರಿಂದ, ಈಗ ಮತ್ತೊಮ್ಮೆ ಸಮನ್ಸ್ ನೀಡಲಾಗಿದೆ’ ಎಂದು ಮೂಲಗಳು ಹೇಳಿವೆ.</p><p>ಇದೇ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ ದಾಖಲಿಸಿದ ಎಫ್ಐಆರ್ ಅನ್ನು ರದ್ದು ಮಾಡಬೇಕು ಎಂದು ಕೆಟಿಆರ್ ಅವರು ತೆಲಂಗಾಣ ಹೈಕೋರ್ಟ್ಗೆ ಕೋರಿದ್ದರು. ಮಂಗಳವಾರ ಆದೇಶ ನೀಡಿರುವ ಹೈಕೋರ್ಟ್, ಎಫ್ಐಆರ್ ಅನ್ನು ರದ್ದು ಮಾಡಲು ನಿರಾಕರಿಸಿತ್ತು.</p>.ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೆ.ಟಿ.ರಾಮರಾವ್ಗೆ ಇ.ಡಿ ಹೊಸ ಸಮನ್ಸ್.ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೆಟಿಆರ್ಗೆ ಇ.ಡಿ ಸಮನ್ಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>