<p><strong>ಹೈದರಾಬಾದ್ (ಪಿಟಿಐ):</strong> ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಫಾರ್ಮುಲಾ-ಇ ರೇಸ್ನಲ್ಲಿ ಹಣಕಾಸು ಅಕ್ರಮಗಳನ್ನು ನಡೆಸಿರುವ ಆರೋಪದ ಮೇಲೆ ಬಿಆರ್ಎಸ್ ಕಾರ್ಯಾಧ್ಯಕ್ಷ ಮತ್ತು ಶಾಸಕ ಕೆ.ಟಿ. ರಾಮರಾವ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಎಫ್ಐಆರ್ ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>ರಾಮರಾವ್ ವಿರುದ್ಧ ಪ್ರಕರಣ ದಾಖಲಿಸಲು ತೆಲಂಗಾಣ ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಇತ್ತೀಚೆಗೆ ಅನುಮತಿ ನೀಡಿದ್ದರು.</p>.<p>ರಾಮರಾವ್ ಮತ್ತು ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.</p>.<p>ರಾಮರಾವ್ ಅವರು ತಮ್ಮ ವಿರುದ್ಧದ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಮಂಗಳವಾರವಷ್ಟೇ ಹೇಳಿದ್ದರು.</p>.<p>ಕಾಂಗ್ರೆಸ್ ಸರ್ಕಾರವು ರಾಮರಾವ್ ವಿರುದ್ಧ ಹಲವು ತಿಂಗಳಿಂದ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಆರೋಪಿಸಿರುವ ಬಿಆರ್ಎಸ್ ಪಕ್ಷವು, ಹಿಂದಿನ ಸರ್ಕಾರವು ತೆಲಂಗಾಣಕ್ಕೆ ಅನುಕೂಲವಾಗುವಂತೆ ಫಾರ್ಮುಲಾ-ಇ ರೇಸ್ ಸಂಘಟಕರೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿದೆ.</p>.<p>‘ಕೆ.ಟಿ ರಾಮರಾವ್ ಅವರು ಪೌರಾಡಳಿತ ಸಚಿವರಾಗಿದ್ದಾಗ, ಸೂಕ್ತ ನಿಯಮಗಳನ್ನು ಪಾಲಿಸದೇ ರೇಸ್ ಆಯೋಜಕರಿಗೆ ₹55 ಕೋಟಿ ವರ್ಗಾಯಿಸಲು ಅನುಮತಿ ನೀಡಿದ್ದಾರೆ’ ಎಂದು ಎಸಿಬಿ ಆರೋಪಿಸಿದೆ.</p>.<p>ರಾಮರಾವ್ ವಿರುದ್ಧ ಎಫ್ಐಆರ್ ದಾಖಲಿಸಲು ಅನುಮತಿ ಕೋರಿ ತೆಲಂಗಾಣ ಸರ್ಕಾರ ನವೆಂಬರ್ನಲ್ಲಿ ರಾಜ್ಯಪಾಲರಿಗೆ ಪತ್ರ ಬರೆದಿತ್ತು. ಎಸಿಬಿ ತನಿಖೆಗೆ ಪೌರಾಡಳಿತ ಇಲಾಖೆ ಒತ್ತಾಯಿಸಿತ್ತು. ಈ ವರ್ಷದ ಆರಂಭದಲ್ಲಿ, ಸರ್ಕಾರವು ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಫಾರ್ಮುಲಾ-ಇ ರೇಸ್ಗೆ ಸಂಬಂಧಿಸಿದ ಒಪ್ಪಂದ ಮಾಡಿಕೊಂಡು ₹55 ಕೋಟಿ ಪಾವತಿಸಿರುವ ಕುರಿತು ಹಿರಿಯ ಅಧಿಕಾರಿಯಿಂದ ವಿವರಣೆ ಕೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ):</strong> ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಫಾರ್ಮುಲಾ-ಇ ರೇಸ್ನಲ್ಲಿ ಹಣಕಾಸು ಅಕ್ರಮಗಳನ್ನು ನಡೆಸಿರುವ ಆರೋಪದ ಮೇಲೆ ಬಿಆರ್ಎಸ್ ಕಾರ್ಯಾಧ್ಯಕ್ಷ ಮತ್ತು ಶಾಸಕ ಕೆ.ಟಿ. ರಾಮರಾವ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಎಫ್ಐಆರ್ ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>ರಾಮರಾವ್ ವಿರುದ್ಧ ಪ್ರಕರಣ ದಾಖಲಿಸಲು ತೆಲಂಗಾಣ ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಇತ್ತೀಚೆಗೆ ಅನುಮತಿ ನೀಡಿದ್ದರು.</p>.<p>ರಾಮರಾವ್ ಮತ್ತು ಇಬ್ಬರು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.</p>.<p>ರಾಮರಾವ್ ಅವರು ತಮ್ಮ ವಿರುದ್ಧದ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಮಂಗಳವಾರವಷ್ಟೇ ಹೇಳಿದ್ದರು.</p>.<p>ಕಾಂಗ್ರೆಸ್ ಸರ್ಕಾರವು ರಾಮರಾವ್ ವಿರುದ್ಧ ಹಲವು ತಿಂಗಳಿಂದ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಆರೋಪಿಸಿರುವ ಬಿಆರ್ಎಸ್ ಪಕ್ಷವು, ಹಿಂದಿನ ಸರ್ಕಾರವು ತೆಲಂಗಾಣಕ್ಕೆ ಅನುಕೂಲವಾಗುವಂತೆ ಫಾರ್ಮುಲಾ-ಇ ರೇಸ್ ಸಂಘಟಕರೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿದೆ.</p>.<p>‘ಕೆ.ಟಿ ರಾಮರಾವ್ ಅವರು ಪೌರಾಡಳಿತ ಸಚಿವರಾಗಿದ್ದಾಗ, ಸೂಕ್ತ ನಿಯಮಗಳನ್ನು ಪಾಲಿಸದೇ ರೇಸ್ ಆಯೋಜಕರಿಗೆ ₹55 ಕೋಟಿ ವರ್ಗಾಯಿಸಲು ಅನುಮತಿ ನೀಡಿದ್ದಾರೆ’ ಎಂದು ಎಸಿಬಿ ಆರೋಪಿಸಿದೆ.</p>.<p>ರಾಮರಾವ್ ವಿರುದ್ಧ ಎಫ್ಐಆರ್ ದಾಖಲಿಸಲು ಅನುಮತಿ ಕೋರಿ ತೆಲಂಗಾಣ ಸರ್ಕಾರ ನವೆಂಬರ್ನಲ್ಲಿ ರಾಜ್ಯಪಾಲರಿಗೆ ಪತ್ರ ಬರೆದಿತ್ತು. ಎಸಿಬಿ ತನಿಖೆಗೆ ಪೌರಾಡಳಿತ ಇಲಾಖೆ ಒತ್ತಾಯಿಸಿತ್ತು. ಈ ವರ್ಷದ ಆರಂಭದಲ್ಲಿ, ಸರ್ಕಾರವು ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಫಾರ್ಮುಲಾ-ಇ ರೇಸ್ಗೆ ಸಂಬಂಧಿಸಿದ ಒಪ್ಪಂದ ಮಾಡಿಕೊಂಡು ₹55 ಕೋಟಿ ಪಾವತಿಸಿರುವ ಕುರಿತು ಹಿರಿಯ ಅಧಿಕಾರಿಯಿಂದ ವಿವರಣೆ ಕೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>