<p><strong>ಹೈದರಾಬಾದ್</strong>: ಫಾರ್ಮುಲಾ ಇ ರೇಸ್ನಲ್ಲಿ ಹಣಕಾಸು ಅವ್ಯವಹಾರ ನಡೆಸಿದ ಆರೋಪದಡಿ ತೆಲಂಗಾಣ ಶಾಸಕ, ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಜಿಷ್ಣು ದೇವ್ ಶರ್ಮ ಅನುಮತಿ ನೀಡಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಟಿ.ರಾಮರಾವ್, 'ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದಕ್ಕೆ ಕಾನೂನು ಬದ್ಧವಾಗಿಯೇ ಉತ್ತರಿಸುತ್ತೇನೆ' ಎಂದು ಹೇಳಿದ್ದಾರೆ.</p>.Fact check: ಭಾರತ 'ಭಯೋತ್ಪಾದನೆಗೆ ಪ್ರೋತ್ಸಾಹಿಸುವ ದೇಶ' ಎಂದು ಕೆನಡಾ ಘೋಷಿಸಿಲ್ಲ.Oscars 2025: ಆಸ್ಕರ್ ಪ್ರಶಸ್ತಿ ರೇಸ್ನಿಂದ ಭಾರತದ 'ಲಾಪತಾ ಲೇಡೀಸ್' ಹೊರಕ್ಕೆ. <p>ನೀವು (ರೇವಂತ್ ರೆಡ್ಡಿ) ಹಗರಣಗಳ ಬಗ್ಗೆ ಮಾತನಾಡುತ್ತಿದ್ದೀರಿ, ವಿಧಾನಸಭೆ ಅಧಿವೇಶನದಲ್ಲಿಯೇ ನಾನು ಉತ್ತರಿಸುವೆ. ನಿಮ್ಮ ಪ್ರಶ್ನೆಗಳಿಗೆ ಅಲ್ಲಿಯೇ ತಕ್ಕ ಉತ್ತರ ನೀಡುವೆ ಎಂದೂ ಸವಾಲು ಹಾಕಿದ್ದಾರೆ.</p><p>‘ಕೇಂದ್ರದಿಂದ ಅನುದಾನ ಪಡೆಯಲು ಆಗದ ಕಾಂಗ್ರೆಸ್ ಸರ್ಕಾರ, ಕೇವಲ ಪ್ರಕರಣಗಳನ್ನು ದಾಖಲಿಸುವತ್ತ ಉತ್ಸುಕತೆ ತೋರಿದೆ‘ ಎಂದೂ ಕಿಡಿಕಾರಿದ್ದಾರೆ.</p>.ರೇಣುಕಸ್ವಾಮಿ ಕೊಲೆ ಪ್ರಕರಣ: ಜಾಮೀನು ಸಿಕ್ಕರೂ 6ನೇ ಆರೋಪಿ ಬಿಡುಗಡೆ ಇಲ್ಲ.ಜಾತಿ ಸಿಂಧುತ್ವ: ಹೈಕೋರ್ಟ್ ಅಧಿಕಾರ ಅಬಾಧಿತ. <p>ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರಿಂದ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನಿಖೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.</p><p>ಕೆ.ಟಿ ರಾಮರಾವ್ ಅವರು ಪೌರಾಡಳಿತ ಸಚಿವರಾಗಿದ್ದಾಗ, ಸೂಕ್ತ ನಿಯಮಗಳನ್ನು ಪಾಲಿಸದೇ ರೇಸ್ ಆಯೋಜಕರಿಗೆ ₹55 ಕೋಟಿ ವರ್ಗಾಯಿಸಲು ಅನುಮತಿ ನೀಡಿದ್ದಾರೆ ಎಂದು ಎಸಿಬಿ ಆರೋಪಿಸಿದೆ.</p>.ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳು ಬೆಂಗಳೂರಲ್ಲೇ ಹೆಚ್ಚು; ಮೈಸೂರಿಗೆ 2ನೇ ಸ್ಥಾನ.ತೆಲಂಗಾಣ | KT ರಾಮರಾವ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ನಿರ್ದೇಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಫಾರ್ಮುಲಾ ಇ ರೇಸ್ನಲ್ಲಿ ಹಣಕಾಸು ಅವ್ಯವಹಾರ ನಡೆಸಿದ ಆರೋಪದಡಿ ತೆಲಂಗಾಣ ಶಾಸಕ, ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಜಿಷ್ಣು ದೇವ್ ಶರ್ಮ ಅನುಮತಿ ನೀಡಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಟಿ.ರಾಮರಾವ್, 'ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದಕ್ಕೆ ಕಾನೂನು ಬದ್ಧವಾಗಿಯೇ ಉತ್ತರಿಸುತ್ತೇನೆ' ಎಂದು ಹೇಳಿದ್ದಾರೆ.</p>.Fact check: ಭಾರತ 'ಭಯೋತ್ಪಾದನೆಗೆ ಪ್ರೋತ್ಸಾಹಿಸುವ ದೇಶ' ಎಂದು ಕೆನಡಾ ಘೋಷಿಸಿಲ್ಲ.Oscars 2025: ಆಸ್ಕರ್ ಪ್ರಶಸ್ತಿ ರೇಸ್ನಿಂದ ಭಾರತದ 'ಲಾಪತಾ ಲೇಡೀಸ್' ಹೊರಕ್ಕೆ. <p>ನೀವು (ರೇವಂತ್ ರೆಡ್ಡಿ) ಹಗರಣಗಳ ಬಗ್ಗೆ ಮಾತನಾಡುತ್ತಿದ್ದೀರಿ, ವಿಧಾನಸಭೆ ಅಧಿವೇಶನದಲ್ಲಿಯೇ ನಾನು ಉತ್ತರಿಸುವೆ. ನಿಮ್ಮ ಪ್ರಶ್ನೆಗಳಿಗೆ ಅಲ್ಲಿಯೇ ತಕ್ಕ ಉತ್ತರ ನೀಡುವೆ ಎಂದೂ ಸವಾಲು ಹಾಕಿದ್ದಾರೆ.</p><p>‘ಕೇಂದ್ರದಿಂದ ಅನುದಾನ ಪಡೆಯಲು ಆಗದ ಕಾಂಗ್ರೆಸ್ ಸರ್ಕಾರ, ಕೇವಲ ಪ್ರಕರಣಗಳನ್ನು ದಾಖಲಿಸುವತ್ತ ಉತ್ಸುಕತೆ ತೋರಿದೆ‘ ಎಂದೂ ಕಿಡಿಕಾರಿದ್ದಾರೆ.</p>.ರೇಣುಕಸ್ವಾಮಿ ಕೊಲೆ ಪ್ರಕರಣ: ಜಾಮೀನು ಸಿಕ್ಕರೂ 6ನೇ ಆರೋಪಿ ಬಿಡುಗಡೆ ಇಲ್ಲ.ಜಾತಿ ಸಿಂಧುತ್ವ: ಹೈಕೋರ್ಟ್ ಅಧಿಕಾರ ಅಬಾಧಿತ. <p>ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರಿಂದ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನಿಖೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.</p><p>ಕೆ.ಟಿ ರಾಮರಾವ್ ಅವರು ಪೌರಾಡಳಿತ ಸಚಿವರಾಗಿದ್ದಾಗ, ಸೂಕ್ತ ನಿಯಮಗಳನ್ನು ಪಾಲಿಸದೇ ರೇಸ್ ಆಯೋಜಕರಿಗೆ ₹55 ಕೋಟಿ ವರ್ಗಾಯಿಸಲು ಅನುಮತಿ ನೀಡಿದ್ದಾರೆ ಎಂದು ಎಸಿಬಿ ಆರೋಪಿಸಿದೆ.</p>.ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳು ಬೆಂಗಳೂರಲ್ಲೇ ಹೆಚ್ಚು; ಮೈಸೂರಿಗೆ 2ನೇ ಸ್ಥಾನ.ತೆಲಂಗಾಣ | KT ರಾಮರಾವ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ನಿರ್ದೇಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>