<p><strong>ಚಂಡೀಗಡ:</strong> ಪಂಜಾಬಿನ ಸಂಗ್ರೂರ್ ಜಿಲ್ಲೆಯಲ್ಲಿ ಶಾಲಾ ವಾಹನಕ್ಕೆ ಬೆಂಕಿ ತಗುಲಿ, ನಾಲ್ಕು ಮಕ್ಕಳು ಶನಿವಾರ ಸಜೀವ ದಹನವಾಗಿದ್ದಾರೆ.</p>.<p>ಮೃತ ಮಕ್ಕಳಲ್ಲಿ ಮೂರು ವರ್ಷದ ಹೆಣ್ಣು ಮಗು ಮತ್ತು ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದ್ದಾರೆ.</p>.<p>ಮಕ್ಕಳು ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ವಾಹನದಲ್ಲಿ ಒಟ್ಟು ಹನ್ನೆರಡು ಮಕ್ಕಳಿದ್ದರು. ಉಳಿದ ಎಂಟು ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ.</p>.<p>ಶಾಲಾ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ಚಾಲಕ ಮತ್ತು ಮಾಲೀಕನ ವಿರುದ್ಧ ಸೆಕ್ಷನ್ 304(ಉದ್ದೇಶಪೂರ್ವಕ ಅಲ್ಲದ ಕೊಲೆ)<br />ಅನುಸಾರ ಪ್ರಕರಣ ದಾಖಲಿಸಲಾಗಿದೆ.ಸಿಮ್ರನ್ ಪಬ್ಲಿಕ್ ಶಾಲೆ ಒಂದು ದಿನದ ಹಿಂದಷ್ಟೇ ಈ ವಾಹನ ಖರೀದಿಸಿತ್ತು.</p>.<p>ಈ ಶಾಲಾ ವಾಹನ1990ರಲ್ಲಿ ತಯಾರಾಗಿದ್ದು, ಎಲ್ಪಿಜಿ ಸಿಲಿಂಡರ್ಬಳಸಿ ಚಲಾಯಿಸಲಾಗುತ್ತಿತ್ತು. ಬೆಂಕಿ ಹೊತ್ತಿಕೊಂಡ ತಕ್ಷಣ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶಾಲಾ ವಾಹನ ಸುಸ್ಥಿತಿಯಲ್ಲಿ ಇರಲಿಲ್ಲ. ಅಲ್ಲದೇ, ಸೂಕ್ತ ದಾಖಲೆಯೂ ಹೊಂದಿರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.</p>.<p>ಸಾರಿಗೆ ಇಲಾಖೆಯ ಯಾವುದೇ ಅಧಿಕಾರಿ ತಪ್ಪಿತಸ್ಥರೆಂದು ಸಾಬೀತಾದರೆ ಅವರ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಘನಶ್ಯಾಂ ಥೋರಿ ಹೇಳಿದ್ದಾರೆ.</p>.<p>ಘಟನೆ ಕುರಿತುಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ತನಿಖೆಗೆ ಆದೇಶಿಸಿದ್ದಾರೆ.ಮೃತ ಮಕ್ಕಳ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಪಂಜಾಬಿನ ಸಂಗ್ರೂರ್ ಜಿಲ್ಲೆಯಲ್ಲಿ ಶಾಲಾ ವಾಹನಕ್ಕೆ ಬೆಂಕಿ ತಗುಲಿ, ನಾಲ್ಕು ಮಕ್ಕಳು ಶನಿವಾರ ಸಜೀವ ದಹನವಾಗಿದ್ದಾರೆ.</p>.<p>ಮೃತ ಮಕ್ಕಳಲ್ಲಿ ಮೂರು ವರ್ಷದ ಹೆಣ್ಣು ಮಗು ಮತ್ತು ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದ್ದಾರೆ.</p>.<p>ಮಕ್ಕಳು ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ವಾಹನದಲ್ಲಿ ಒಟ್ಟು ಹನ್ನೆರಡು ಮಕ್ಕಳಿದ್ದರು. ಉಳಿದ ಎಂಟು ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ.</p>.<p>ಶಾಲಾ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ಚಾಲಕ ಮತ್ತು ಮಾಲೀಕನ ವಿರುದ್ಧ ಸೆಕ್ಷನ್ 304(ಉದ್ದೇಶಪೂರ್ವಕ ಅಲ್ಲದ ಕೊಲೆ)<br />ಅನುಸಾರ ಪ್ರಕರಣ ದಾಖಲಿಸಲಾಗಿದೆ.ಸಿಮ್ರನ್ ಪಬ್ಲಿಕ್ ಶಾಲೆ ಒಂದು ದಿನದ ಹಿಂದಷ್ಟೇ ಈ ವಾಹನ ಖರೀದಿಸಿತ್ತು.</p>.<p>ಈ ಶಾಲಾ ವಾಹನ1990ರಲ್ಲಿ ತಯಾರಾಗಿದ್ದು, ಎಲ್ಪಿಜಿ ಸಿಲಿಂಡರ್ಬಳಸಿ ಚಲಾಯಿಸಲಾಗುತ್ತಿತ್ತು. ಬೆಂಕಿ ಹೊತ್ತಿಕೊಂಡ ತಕ್ಷಣ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶಾಲಾ ವಾಹನ ಸುಸ್ಥಿತಿಯಲ್ಲಿ ಇರಲಿಲ್ಲ. ಅಲ್ಲದೇ, ಸೂಕ್ತ ದಾಖಲೆಯೂ ಹೊಂದಿರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.</p>.<p>ಸಾರಿಗೆ ಇಲಾಖೆಯ ಯಾವುದೇ ಅಧಿಕಾರಿ ತಪ್ಪಿತಸ್ಥರೆಂದು ಸಾಬೀತಾದರೆ ಅವರ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಘನಶ್ಯಾಂ ಥೋರಿ ಹೇಳಿದ್ದಾರೆ.</p>.<p>ಘಟನೆ ಕುರಿತುಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ತನಿಖೆಗೆ ಆದೇಶಿಸಿದ್ದಾರೆ.ಮೃತ ಮಕ್ಕಳ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>