<p><strong>ತಿರುವನಂತಪುರ</strong>: ಕೇರಳದ ಹಲವೆಡೆ ಭಾರಿ ಮಳೆ ಸುರಿದಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ 4 ಮಂದಿ ಮೃತಪಟ್ಟಿದ್ದಾರೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಕೆಎಸ್ಡಿಎಂಎ) ಹೇಳಿದೆ.</p><p>ಅಧಿಕ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಪತ್ತನಂತಿಟ್ಟ, ಆಲಪ್ಪುಳ, ಎರ್ನಾಕುಲಂ, ಕೊಟ್ಟಯಂ, ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಆದೇಶಿಸಿದೆ.</p><p>ಆಲಪ್ಪುಳ, ಕೊಟ್ಟಯಂ ಮತ್ತು ಎರ್ನಾಕುಲಂನಲ್ಲಿ ಘೋಷಿಸಲಾಗಿದ್ದ ಆರೆಂಜ್ ಅಲರ್ಟ್ ಅನ್ನು ರೆಡ್ ಅಲರ್ಟ್ ಆಗಿ ಬದಲಾಗಿದೆ. ಇಲ್ಲಿ ಅತ್ಯಧಿಕ ಮಳೆ ಸುರಿಯಲಿದೆ ಎಂದು ಐಎಂಡಿ ಹೇಳಿದೆ.</p><p>ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆ.ಮೀಗೂ ಅಧಿಕ ಮಳೆಯನ್ನು ಸೂಚಿಸುತ್ತದೆ. ಆರೆಂಜ್ ಅಲರ್ಟ್ 11 ಸೆ.ಮೀನಿಂದ 20 ಸೆ.ಮೀ ಹಾಗೂ ಯೆಲ್ಲೋ ಅಲರ್ಟ್ 6 ಸೆ.ಮೀನಿಂದ 11 ಸೆ.ಮೀ ಮಳೆ ಬೀಳುವ ಸಾಧ್ಯತೆಯನ್ನು ಸೂಚಿಸುತ್ತದೆ.</p><p>ತಿರುವನಂತಪುರ, ಕೊಲ್ಲಂ, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿದ್ದು, ಕಣ್ಣೂರು, ಕಾಸರಗೋಡಿನಲ್ಲಿ ಯೆಲ್ಲೋ ಅಲರ್ಟ್ ಇದೆ. .</p><p>ಕೊಚ್ಚಿಯಲ್ಲಿ ಇದ್ದಕ್ಕಿದ್ದಂತೆ ಸುರಿದ ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿದೆ. ತ್ರಿಶೂರಿನ ತಗ್ಗುಪ್ರದೇಶಗಳೂ ಜಲಾವೃತಗೊಂಡಿವೆ.</p><p>ಇದೇವೇಳೆ, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದ ಹಲವೆಡೆ ಭಾರಿ ಮಳೆ ಸುರಿದಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ 4 ಮಂದಿ ಮೃತಪಟ್ಟಿದ್ದಾರೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಕೆಎಸ್ಡಿಎಂಎ) ಹೇಳಿದೆ.</p><p>ಅಧಿಕ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಪತ್ತನಂತಿಟ್ಟ, ಆಲಪ್ಪುಳ, ಎರ್ನಾಕುಲಂ, ಕೊಟ್ಟಯಂ, ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಆದೇಶಿಸಿದೆ.</p><p>ಆಲಪ್ಪುಳ, ಕೊಟ್ಟಯಂ ಮತ್ತು ಎರ್ನಾಕುಲಂನಲ್ಲಿ ಘೋಷಿಸಲಾಗಿದ್ದ ಆರೆಂಜ್ ಅಲರ್ಟ್ ಅನ್ನು ರೆಡ್ ಅಲರ್ಟ್ ಆಗಿ ಬದಲಾಗಿದೆ. ಇಲ್ಲಿ ಅತ್ಯಧಿಕ ಮಳೆ ಸುರಿಯಲಿದೆ ಎಂದು ಐಎಂಡಿ ಹೇಳಿದೆ.</p><p>ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆ.ಮೀಗೂ ಅಧಿಕ ಮಳೆಯನ್ನು ಸೂಚಿಸುತ್ತದೆ. ಆರೆಂಜ್ ಅಲರ್ಟ್ 11 ಸೆ.ಮೀನಿಂದ 20 ಸೆ.ಮೀ ಹಾಗೂ ಯೆಲ್ಲೋ ಅಲರ್ಟ್ 6 ಸೆ.ಮೀನಿಂದ 11 ಸೆ.ಮೀ ಮಳೆ ಬೀಳುವ ಸಾಧ್ಯತೆಯನ್ನು ಸೂಚಿಸುತ್ತದೆ.</p><p>ತಿರುವನಂತಪುರ, ಕೊಲ್ಲಂ, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿದ್ದು, ಕಣ್ಣೂರು, ಕಾಸರಗೋಡಿನಲ್ಲಿ ಯೆಲ್ಲೋ ಅಲರ್ಟ್ ಇದೆ. .</p><p>ಕೊಚ್ಚಿಯಲ್ಲಿ ಇದ್ದಕ್ಕಿದ್ದಂತೆ ಸುರಿದ ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿದೆ. ತ್ರಿಶೂರಿನ ತಗ್ಗುಪ್ರದೇಶಗಳೂ ಜಲಾವೃತಗೊಂಡಿವೆ.</p><p>ಇದೇವೇಳೆ, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>