ತಿರುವನಂತಪುರ: ಕೇರಳದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ವಿವಿಧೆಡೆ ಇದರಿಂದಾಗಿ ಸಂಭವಿಸಿರುವ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಕೇರಳ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆಯು (ಕೆಎಸ್ಡಿಎಂಎ) ತಿಳಿಸಿದೆ.
ಭಾರತ ಹವಾಮಾನ ಇಲಾಖೆಯು (ಐಎಂಡಿ) ಪತನಂತ್ತಿಟ್ಟ, ಅಳಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಹಾಗೂ ಇಡುಕ್ಕಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಯಾರೂ ಮೀನುಗಾರಿಕೆಗೆ ತೆರಳಬಾರದು ಎಂದೂ ಕೆಎಸ್ಡಿಎಂಎ ಎಚ್ಚರಿಸಿದೆ.