<p><strong>ರಾಜಕೋಟ್</strong>: ಮೇ 25ರಂದು ಗುಜರಾತ್ನ ರಾಜಕೋಟ್ನ ಟಿಆರ್ಪಿ ಗೇಮ್ ಜೋನ್ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಪಟ್ಟಣ ಯೋಜನಾ ಅಧಿಕಾರಿ(ಪಿಟಿಒ) ಸೇರಿ ನಾಲ್ವರು ಸರ್ಕಾರಿ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p><p>ಟಿಪಿಒ ಎಂಡಿ ಸಂಗತಿಯಾ, ಸಹಾಯಕ ಟಿಪಿಒಗಳಾದ ಮುಕೇಶ್ ಮಕ್ವಾನಾ, ಗೌತಮ್ ಜೋಶಿ ಮತ್ತು ಕಾಲವಾಡ್ ಅಗ್ನಿಶಾಮಕ ಕೇಂದ್ರದ ಮಾಜಿ ಅದಿಕಾರಿ ರೋಹಿತ್ ವಿಗೋರಾರನ್ನು ಬಂಧಿಸಲಾಗಿದೆ. ಈ ಮೂಲಕ ಪ್ರಕರಣದಲ್ಲಿ ಈವರೆಗೆ ಬಂಧಿತರ ಸಂಖ್ಯೆ 9ಕ್ಕೆ ಏರಿದೆ.</p><p>ನಾಲ್ವರು ಅಧಿಕಾರಿಗಳ ಬಂಧನವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಖಚಿತಪಡಿಸಿದ್ದಾರೆ.</p><p>ಅಗತ್ಯ ಅನುಮತಿ ಪಡೆಯದೆ ಗೇಮ್ ಜೋನ್ ಆರಂಭಕ್ಕೆ ಅವಕಾಶ ಕೊಟ್ಟ ಕರ್ತವ್ಯ ಲೋಪದ ಆರೋಪದಡಿ 9 ಸರ್ಕಾರಿ ನೌಕರರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.</p><p>ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಎಸ್ಐಟಿ ಮುಖ್ಯಸ್ಥ ಹಿರಿಯ ಐಪಿಎಸ್ ಅಧಿಕಾರಿ ಸುಭಾಷ್ ತ್ರಿವೇದಿ, ಅಗ್ನಿಶಾಮಕ ದಳದ ಮಾಜಿ ಅಧಿಕಾರಿಯನ್ನು 3 ಗಂಟೆ ಕಾಲ ವಿಚಾರಣೆ ನಡೆಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜಕೋಟ್</strong>: ಮೇ 25ರಂದು ಗುಜರಾತ್ನ ರಾಜಕೋಟ್ನ ಟಿಆರ್ಪಿ ಗೇಮ್ ಜೋನ್ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಪಟ್ಟಣ ಯೋಜನಾ ಅಧಿಕಾರಿ(ಪಿಟಿಒ) ಸೇರಿ ನಾಲ್ವರು ಸರ್ಕಾರಿ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p><p>ಟಿಪಿಒ ಎಂಡಿ ಸಂಗತಿಯಾ, ಸಹಾಯಕ ಟಿಪಿಒಗಳಾದ ಮುಕೇಶ್ ಮಕ್ವಾನಾ, ಗೌತಮ್ ಜೋಶಿ ಮತ್ತು ಕಾಲವಾಡ್ ಅಗ್ನಿಶಾಮಕ ಕೇಂದ್ರದ ಮಾಜಿ ಅದಿಕಾರಿ ರೋಹಿತ್ ವಿಗೋರಾರನ್ನು ಬಂಧಿಸಲಾಗಿದೆ. ಈ ಮೂಲಕ ಪ್ರಕರಣದಲ್ಲಿ ಈವರೆಗೆ ಬಂಧಿತರ ಸಂಖ್ಯೆ 9ಕ್ಕೆ ಏರಿದೆ.</p><p>ನಾಲ್ವರು ಅಧಿಕಾರಿಗಳ ಬಂಧನವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಖಚಿತಪಡಿಸಿದ್ದಾರೆ.</p><p>ಅಗತ್ಯ ಅನುಮತಿ ಪಡೆಯದೆ ಗೇಮ್ ಜೋನ್ ಆರಂಭಕ್ಕೆ ಅವಕಾಶ ಕೊಟ್ಟ ಕರ್ತವ್ಯ ಲೋಪದ ಆರೋಪದಡಿ 9 ಸರ್ಕಾರಿ ನೌಕರರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.</p><p>ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಎಸ್ಐಟಿ ಮುಖ್ಯಸ್ಥ ಹಿರಿಯ ಐಪಿಎಸ್ ಅಧಿಕಾರಿ ಸುಭಾಷ್ ತ್ರಿವೇದಿ, ಅಗ್ನಿಶಾಮಕ ದಳದ ಮಾಜಿ ಅಧಿಕಾರಿಯನ್ನು 3 ಗಂಟೆ ಕಾಲ ವಿಚಾರಣೆ ನಡೆಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>