ಅಹಮದಾಬಾದ್: ಗುಜರಾತ್ನ ನಾಲ್ವರು ಕಾಂಗ್ರೆಸ್ ಶಾಸಕರು ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರಿಗೆ ರಾಜೀನಾಮೆ ನೀಡಿದ್ದಾರೆ. ಗುಜರಾತ್ನಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ 26ರಂದು ಚುನಾವಣೆ ನಡೆಯಲಿದೆ. ಹಾಗಾಗಿ, ಈ ರಾಜೀನಾಮೆಯ ಹಿಂದೆಯೂ ‘ಆಪರೇಷನ್ ಕಮಲ’ ಕೆಲಸ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.