ತಂಜಾವೂರು(ತಮಿಳುನಾಡು): ಇಲ್ಲಿನ ಸೇತುಬಾವಛತ್ರಂ ಬಳಿ ಗೋಡೆಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘11 ಜನರಿದ್ದ ವಾಹನವು ಟುಟಿಕೋರಿನ್ನಿಂದ ವೆಲಂಕಣಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸೇತುಬಾವಛತ್ರಂನ ಈಸ್ಟ್ ಕೋಸ್ಟ್ ರಸ್ತೆಯ ಮನೋರಾ ಬಳಿ ವಾಹನ ಗೋಡೆಗೆ ಡಿಕ್ಕಿ ಹೊಡೆದಿದೆ’ ಎಂದು ಅವರು ಹೇಳಿದ್ದಾರೆ.
‘ನಾಲ್ವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಗಾಯಾಳುಗಳನ್ನು ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದರು.