<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ಉಗ್ರರನ್ನು ಸಾಯಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ.</p>.<p>ಲಸ್ಸಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ ನಿಖರ ಮಾಹಿತಿ ಪಡೆದ ಭದ್ರತಾಪಡೆಗಳು ಸ್ಥಳವನ್ನು ಸುತ್ತುವರಿದು ಶೋಧಕಾರ್ಯ ನಡೆಸಿದವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.</p>.<p>ಶೋಧದ ವೇಳೆ ಭದ್ರತಾ ಪಡೆಗಳ ಮೇಲೆಯೇ ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಗುಂಡುಹಾರಿಸಿದಾಗ ನಾಲ್ವರು ಉಗ್ರರು ಹತರಾದರು. ಎನ್ಕೌಂಟರ್ ಸ್ಥಳದಲ್ಲೇ ಮೂವರ ಮೃತದೇಹ ಸಿಕ್ಕಿದೆ.</p>.<p>ಮೃತ ಉಗ್ರರ ಗುರುತು ಪತ್ತೆಹಚ್ಚುವ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಗಾಯಗೊಂಡವರಲ್ಲಿ ಮೂವರು ಸೇನಾ ಯೋಧರು ಮತ್ತು ಒಬ್ಬರು ಪೊಲೀಸ್ ಸೇರಿದ್ದಾರೆ.ಉಗ್ರರು ಅಡಗಿದ್ದ ಸ್ಥಳದಿಂದ ಮದ್ದುಗುಂಡು, ಶಸ್ತ್ರಾಸ್ತ್ರವನ್ನು ವಶಕ್ಕೆ ಪಡೆಯಲಾಗಿದೆ.</p>.<p><strong>ಜೆಇಎಂ ಉಗ್ರನ ಸೆರೆ</strong><br /><strong>ನವದೆಹಲಿ:</strong> ಜೈಷೆ ಎ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಶಂಕಿತ ಉಗ್ರನನ್ನು ದೆಹಲಿ ಪೊಲೀಸರ ವಿಶೇಷ ಘಟಕ ಶ್ರೀನಗರದಲ್ಲಿ ಬಂಧಿಸಿದೆ. ಈತನ ತಲೆಗೆ ₹2 ಲಕ್ಷ ಘೋಷಣೆ ಮಾಡಲಾಗಿತ್ತು.</p>.<p>ಕುಪ್ವಾರದ ನಿವಾಸಿ ಫೈಯಾಜ್ ಅಹಮದ್ ಲೋನ್ ಬಂಧಿತ ವ್ಯಕ್ತಿ.</p>.<p>ಪ್ರಕರಣವೊಂದರಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ ಈತ 2015 ರಿಂದ ತಲೆಮರೆಸಿಕೊಂಡಿದ್ದ.ಇವನ ವಿರುದ್ಧ ದೆಹಲಿ ನ್ಯಾಯಾಲಯ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿತ್ತು.</p>.<p><strong>ಶಂಕಿತ ಉಗ್ರನ ಬಂಧನ</strong></p>.<p><strong>ಬನಿಹಾಲ್/ಜಮ್ಮು:</strong> ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ದಿನಗಳ ಹಿಂದೆ ಸಿಆರ್ಪಿಎಫ್ನ ಬೆಂಗಾವಲು ಗುರಿಯಾಗಿರಿಸಿಕೊಂಡು ನಡೆದ ಬಾಂಬ್ ದಾಳಿಯ ಶಂಕಿತ ಉಗ್ರನನ್ನು ಸೋಮವಾರ ಬಂಧಿಸಲಾಗಿದೆ.</p>.<p>ಶೋಪಿಯಾನ್ ಜಿಲ್ಲೆಯ ವಾಲಿ ಗ್ರಾಮದ ನಿವಾಸಿ ಅಮಿನ್ ರಾಥರ್ ಬಂಧಿತ ಆರೋಪಿ. ಪೊಲೀಸ್ ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಈತ ಸಿಕ್ಕಿಬಿದ್ದಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ಉಗ್ರರನ್ನು ಸಾಯಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ.</p>.<p>ಲಸ್ಸಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ ನಿಖರ ಮಾಹಿತಿ ಪಡೆದ ಭದ್ರತಾಪಡೆಗಳು ಸ್ಥಳವನ್ನು ಸುತ್ತುವರಿದು ಶೋಧಕಾರ್ಯ ನಡೆಸಿದವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.</p>.<p>ಶೋಧದ ವೇಳೆ ಭದ್ರತಾ ಪಡೆಗಳ ಮೇಲೆಯೇ ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಗುಂಡುಹಾರಿಸಿದಾಗ ನಾಲ್ವರು ಉಗ್ರರು ಹತರಾದರು. ಎನ್ಕೌಂಟರ್ ಸ್ಥಳದಲ್ಲೇ ಮೂವರ ಮೃತದೇಹ ಸಿಕ್ಕಿದೆ.</p>.<p>ಮೃತ ಉಗ್ರರ ಗುರುತು ಪತ್ತೆಹಚ್ಚುವ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಗಾಯಗೊಂಡವರಲ್ಲಿ ಮೂವರು ಸೇನಾ ಯೋಧರು ಮತ್ತು ಒಬ್ಬರು ಪೊಲೀಸ್ ಸೇರಿದ್ದಾರೆ.ಉಗ್ರರು ಅಡಗಿದ್ದ ಸ್ಥಳದಿಂದ ಮದ್ದುಗುಂಡು, ಶಸ್ತ್ರಾಸ್ತ್ರವನ್ನು ವಶಕ್ಕೆ ಪಡೆಯಲಾಗಿದೆ.</p>.<p><strong>ಜೆಇಎಂ ಉಗ್ರನ ಸೆರೆ</strong><br /><strong>ನವದೆಹಲಿ:</strong> ಜೈಷೆ ಎ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಶಂಕಿತ ಉಗ್ರನನ್ನು ದೆಹಲಿ ಪೊಲೀಸರ ವಿಶೇಷ ಘಟಕ ಶ್ರೀನಗರದಲ್ಲಿ ಬಂಧಿಸಿದೆ. ಈತನ ತಲೆಗೆ ₹2 ಲಕ್ಷ ಘೋಷಣೆ ಮಾಡಲಾಗಿತ್ತು.</p>.<p>ಕುಪ್ವಾರದ ನಿವಾಸಿ ಫೈಯಾಜ್ ಅಹಮದ್ ಲೋನ್ ಬಂಧಿತ ವ್ಯಕ್ತಿ.</p>.<p>ಪ್ರಕರಣವೊಂದರಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ ಈತ 2015 ರಿಂದ ತಲೆಮರೆಸಿಕೊಂಡಿದ್ದ.ಇವನ ವಿರುದ್ಧ ದೆಹಲಿ ನ್ಯಾಯಾಲಯ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿತ್ತು.</p>.<p><strong>ಶಂಕಿತ ಉಗ್ರನ ಬಂಧನ</strong></p>.<p><strong>ಬನಿಹಾಲ್/ಜಮ್ಮು:</strong> ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ದಿನಗಳ ಹಿಂದೆ ಸಿಆರ್ಪಿಎಫ್ನ ಬೆಂಗಾವಲು ಗುರಿಯಾಗಿರಿಸಿಕೊಂಡು ನಡೆದ ಬಾಂಬ್ ದಾಳಿಯ ಶಂಕಿತ ಉಗ್ರನನ್ನು ಸೋಮವಾರ ಬಂಧಿಸಲಾಗಿದೆ.</p>.<p>ಶೋಪಿಯಾನ್ ಜಿಲ್ಲೆಯ ವಾಲಿ ಗ್ರಾಮದ ನಿವಾಸಿ ಅಮಿನ್ ರಾಥರ್ ಬಂಧಿತ ಆರೋಪಿ. ಪೊಲೀಸ್ ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಈತ ಸಿಕ್ಕಿಬಿದ್ದಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>