<p><strong>ನವದೆಹಲಿ:</strong> ಮಹಿಳೆಯರಿಗೆ ಮಾಸಿಕ ₹2,500 ಆರ್ಥಿಕ ನೆರವು ನೀಡುವುದಾಗಿ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸಲು ಆಡಳಿತಾರೂಢ ಬಿಜೆಪಿ ಸರ್ಕಾರ ವಿಫಲವಾಗಿದೆ. ಈ ಕುರಿತು ಸ್ಪಷ್ಟೀಕರಣ ಬಯಸಿ ವಿರೋಧ ಪಕ್ಷ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. </p><p>ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಇನ್ನು ನಾಲ್ಕು ದಿನ ಮಾತ್ರ ಉಳಿದಿದೆ. ಮಾಜಿ ಮುಖ್ಯಮಂತ್ರಿ ಆತಿಶಿ ಅವರ ನೇತೃತ್ವದಲ್ಲಿ ಮಂಡಿ ಹೌಸ್ ಮೆಟ್ರೊ ನಿಲ್ದಾಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಆತಿಶಿ, 'ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಗೆ ನಾಲ್ಕು ದಿನ ಮಾತ್ರ ಬಾಕಿಯಿದೆ. ದೆಹಲಿಯ ಮಹಿಳೆಯರು ಕಾತರದಿಂದ ಕಾಯುತ್ತಿದ್ದಾರೆ. ₹2,500 ಯಾವಾಗ ಸಿಗಲಿದೆ? ಮಾರ್ಚ್ 8ರಂದು ದೆಹಲಿಯ ಎಲ್ಲ ಮಹಿಳೆಯರಿಗೆ ಮೊದಲ ಕಂತು ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಈ ಗ್ಯಾರಂಟಿ ಈಡೇರಿಸಲಾಗುತ್ತದೆಯೇ ಅಥವಾ ಘೋಷಣೆಗಷ್ಟೇ ಸೀಮಿತವಾಗಲಿದೆಯೇ' ಎಂದು ಅವರು ಪ್ರಶ್ನಿಸಿದ್ದಾರೆ. </p><p>ಎಎಪಿ ಶಾಸಕ ಕುಲದೀಪ್ ಕುಮಾರ್ ಸಹ ಮಹಿಳೆಯರಿಗೆ ಆರ್ಥಿಕ ನೆರವು ನೀಡುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಂದ ಸ್ಪಷ್ಟನೆ ಬಯಸಿದ್ದಾರೆ. ಜನಸಾಮಾನ್ಯರ ಖಾತೆಗೆ ₹15 ಲಕ್ಷ ಜಮೆ ಆಗಲಿದೆ ಎಂಬ ಟೊಳ್ಳು ಭರವಸೆಯಂತೆ ಇದು ಕೂಡ 'ಜುಮ್ಲಾ' ಭರವಸೆ ಆಗಲಿದೆಯೇ ಎಂದು ಲೇವಡಿ ಮಾಡಿದ್ದಾರೆ. </p><p>ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 26 ವರ್ಷಗಳ ಬಳಿಕ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರದ ಚುಕ್ಕಾಣಿ ಹಿಡಿದಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ 48 ಹಾಗೂ ಎಎಪಿ 22 ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು. </p>.ಎಎಪಿ ಶಾಸಕರ ಅಮಾನತು | ಜನಾದೇಶಕ್ಕೆ ಅವಮಾನ: ಸ್ಪೀಕರ್ಗೆ ಪತ್ರ ಬರೆದ ಆತಿಶಿ.ಗ್ಯಾರಂಟಿ ಹೆಸರಿನಲ್ಲಿ ಹಣ ದುರ್ಬಳಕೆ ಆರೋಪ: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಿಳೆಯರಿಗೆ ಮಾಸಿಕ ₹2,500 ಆರ್ಥಿಕ ನೆರವು ನೀಡುವುದಾಗಿ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸಲು ಆಡಳಿತಾರೂಢ ಬಿಜೆಪಿ ಸರ್ಕಾರ ವಿಫಲವಾಗಿದೆ. ಈ ಕುರಿತು ಸ್ಪಷ್ಟೀಕರಣ ಬಯಸಿ ವಿರೋಧ ಪಕ್ಷ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. </p><p>ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಇನ್ನು ನಾಲ್ಕು ದಿನ ಮಾತ್ರ ಉಳಿದಿದೆ. ಮಾಜಿ ಮುಖ್ಯಮಂತ್ರಿ ಆತಿಶಿ ಅವರ ನೇತೃತ್ವದಲ್ಲಿ ಮಂಡಿ ಹೌಸ್ ಮೆಟ್ರೊ ನಿಲ್ದಾಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಆತಿಶಿ, 'ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಗೆ ನಾಲ್ಕು ದಿನ ಮಾತ್ರ ಬಾಕಿಯಿದೆ. ದೆಹಲಿಯ ಮಹಿಳೆಯರು ಕಾತರದಿಂದ ಕಾಯುತ್ತಿದ್ದಾರೆ. ₹2,500 ಯಾವಾಗ ಸಿಗಲಿದೆ? ಮಾರ್ಚ್ 8ರಂದು ದೆಹಲಿಯ ಎಲ್ಲ ಮಹಿಳೆಯರಿಗೆ ಮೊದಲ ಕಂತು ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಈ ಗ್ಯಾರಂಟಿ ಈಡೇರಿಸಲಾಗುತ್ತದೆಯೇ ಅಥವಾ ಘೋಷಣೆಗಷ್ಟೇ ಸೀಮಿತವಾಗಲಿದೆಯೇ' ಎಂದು ಅವರು ಪ್ರಶ್ನಿಸಿದ್ದಾರೆ. </p><p>ಎಎಪಿ ಶಾಸಕ ಕುಲದೀಪ್ ಕುಮಾರ್ ಸಹ ಮಹಿಳೆಯರಿಗೆ ಆರ್ಥಿಕ ನೆರವು ನೀಡುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಂದ ಸ್ಪಷ್ಟನೆ ಬಯಸಿದ್ದಾರೆ. ಜನಸಾಮಾನ್ಯರ ಖಾತೆಗೆ ₹15 ಲಕ್ಷ ಜಮೆ ಆಗಲಿದೆ ಎಂಬ ಟೊಳ್ಳು ಭರವಸೆಯಂತೆ ಇದು ಕೂಡ 'ಜುಮ್ಲಾ' ಭರವಸೆ ಆಗಲಿದೆಯೇ ಎಂದು ಲೇವಡಿ ಮಾಡಿದ್ದಾರೆ. </p><p>ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 26 ವರ್ಷಗಳ ಬಳಿಕ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರದ ಚುಕ್ಕಾಣಿ ಹಿಡಿದಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ 48 ಹಾಗೂ ಎಎಪಿ 22 ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು. </p>.ಎಎಪಿ ಶಾಸಕರ ಅಮಾನತು | ಜನಾದೇಶಕ್ಕೆ ಅವಮಾನ: ಸ್ಪೀಕರ್ಗೆ ಪತ್ರ ಬರೆದ ಆತಿಶಿ.ಗ್ಯಾರಂಟಿ ಹೆಸರಿನಲ್ಲಿ ಹಣ ದುರ್ಬಳಕೆ ಆರೋಪ: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>